Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ


Team Udayavani, Jul 3, 2024, 10:23 PM IST

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಕುಮಟಾ: ತಾಲೂಕಿನ ಧಾರೇಶ್ವರದ ಗೋರೆ ಗೋಪಾಲ ಕೃಷ್ಣ ದೇವಸ್ಥಾನದ ಹಂಚು ತೆಗೆದು, ದೇವಸ್ಥಾನದ ಒಳಗೆ ಇಳಿದು ಚಿನ್ನಾಭರಣ ಕಳ್ಳತನ ನಡೆಸಿದ್ದ ಆರೋಪಿಗಳನ್ನು ಕುಮಟಾ ಪೋಲಿಸರು ಬಂಧಿಸಿದ್ದಾರೆ.

ದೇವಾಲಯದ ಗರ್ಭಗುಡಿಯ ಬಾಗಿಲು ಮುರಿದು, ಟ್ರಸರಿ ಡಬ್ಬದಲ್ಲಿದ್ದ ಸುಮಾರು 1,27,000 ರೂ ಮೌಲ್ಯದ ಚಿನ್ನದ ಚೈನ್, ಬಂಗಾರದ ನಾಮ, ಚಿನ್ನದ ಕಣ್ಣು, ಚಿನ್ನದ ತಾಳಿ ಚಿಪ್ಪು, ಬೆಳ್ಳಿಯ ಚೈನುಗಳನ್ನು ಕಳ್ಳತನ ಆಗಿರುವ ಕುರಿತು ದೇವಸ್ಥಾನದ ಅರ್ಚಕರಾದ ಶ್ರೀಧರ ವಿಷ್ಣು ಭಟ್ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಕುಮಟಾ ಪಿ.ಎಸ್.ಐ. ಸುನಿಲ್ ಬಂಡಿವಡ್ಡರ್ ಹಾಗೂ ಅವರ ತಂಡ ಕಾರ್ಯಾಚರಣೆಗೆ ಮುಂದಾಗಿ ದೇವಸ್ಥಾನವನ್ನು ಹಾಗೂ ಅಲ್ಲಿದ್ದ ಸಿ.ಸಿ. ಕ್ಯಾಮರಾದ ಫೂಟೇಜ್‌ನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಕಳ್ಳರ ಸುಳಿವು ದೊರಕಿದೆ.

ಧಾರೇಶ್ವರದ ಮಂಗಳೂರು ಹೋಟೆಲ್ ಬಳಿ ಆರೋಪಿತನಾದ ಅಂಕೋಲಾ ಬೆಳಂಬಾರ ಮೂಲದ, ಹಾಲಿ ಧಾರೇಶ್ವರದಲ್ಲಿರುವ ವಿವೇಕಾನಂದ ದುರ್ಗಯ್ಯ ಖಾರ್ವಿ, (26) ಹಾಗೂ ಈತನ ಸಹಚರನಾದ ಹೊನ್ನಾವರ ತಾಲೂಕಿನ ಅಗ್ರಹಾರದ ಈಶ್ವರ ಅಮಾಸೆ ಮುಕ್ರಿ ಈರ್ವರನ್ನು ಬಂಧಿಸಿ ವಶಕ್ಕೆ ಪಡೆದು, ಇವರಿಂದ ಕಳ್ಳತನ ಮಾಡಿ ಮನೆಯಲ್ಲಿ ಬಚ್ಚಿಟ್ಟ 86,000 ರೂ ಮೌಲ್ಯದ ದೇವರ ಚಿನ್ನಾಭರಣಗಳನ್ನು ಹಾಗೂ 3.500 ರೂ ಮೌಲ್ಯದ ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆದುಕೊಂಡು, ಆರೋಪಿತರನ್ನು ಕುಮಟಾ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.

ಆರೋಪಿತನಾದ ವಿವೇಕಾನಂದ ದುರ್ಗಯ್ಯ ಖಾರ್ವಿ ಈತನ ಮೇಲೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ದೇವಸ್ಥಾನ ಕಳವು ಪ್ರಕರಣಗಳು ಹಾಗೂ ಗೋಕರ್ಣ ಪೊಲೀಸ್ ಠಾಣೆಯಲ್ಲಿ ದೇವಸ್ಥಾನ ಕಳುವು ಪ್ರಕರಣ ಹಾಗೂ ಕುಮಟಾ ಪೊಲೀಸ್ ಠಾಣೆಯಲ್ಲಿ 2 ದೇವಸ್ಥಾನ ಕಳವು ಪ್ರಕರಣಗಳು ಈಗಾಗಲೇ ದಾಖಲಾಗಿದೆ.

ಅಲ್ಲದೇ ಈತನು ಅಂಕೋಲಾ ನ್ಯಾಯಾಲಯದ 3 ನಾನ್ ಬೇಲೆಬಲ್ ವಾರಂಟ್ ಗಳಲ್ಲಿ, ಕುಮಟಾ ನ್ಯಾಯಾಲಯದಲ್ಲಿ 03 ನಾನ್ ಬೇಲೆಬಲ್ ವಾರಂಟ್ ಗಳಲ್ಲಿ ಬೇಕಾದ ಆರೋಪಿಯಾಗಿದ್ದಾನೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದ ಕಾರ್ಯಾಚರಣೆಯಲ್ಲಿ ಕುಮಟಾ ಪೊಲೀಸ್ ಠಾಣೆಯ ಪೊಲೀಸ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ, ಪಿ.ಎಸ್.ಐ. ಸುನಿಲ್ ಬಂಡಿವಡ್ಡರ್ ಹಾಗೂ ಸಿಬ್ಬಂದಿಗಳಾದ ಗಣೇಶ ನಾಯ್ಕ, ದಯಾನಂದ ನಾಯ್ಕ, ಗುರು ನಾಯಕ, ಪ್ರದೀಪ ನಾಯಕ ಭಾಗಿಯಾಗಿದ್ದರು.

ಟಾಪ್ ನ್ಯೂಸ್

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

Harish-Poonja

Belthangady ಶಾಸಕ ಹರೀಶ್‌ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Kaagada movie review

Kaagada movie review; ಕಾಗದ ಮೇಲೆ ಅರಳಿದ ಮುಗ್ಧ ಪ್ರೀತಿ

BSP president Armstrong case; Chennai police arrested 8 suspects

BSP ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್

Rashmika Mandanna is in kubera movie

Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ

Ludhiana; Shiv Sena leader attacked by Nihang Sikhs in the middle of the day. Video

Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.