Mundgod; ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ


Team Udayavani, Aug 6, 2023, 4:24 PM IST

MUMundgod; ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ

ಮುಂಡಗೋಡ: ಪಟ್ಟಣ ವ್ಯಾಪ್ತಿಯ ಜನನಿಬಿಡ ಪ್ರದೇಶ ಖಬರಸ್ತಾನದ (ಸ್ಮಶಾನ) ಅಕ್ಕ ಪಕ್ಕದಲ್ಲಿ ಕಳೆದ ಎರಡ್ಮೂರು ದಿನದಿಂದ ಚಿರತೆ ಓಡಾಡುತ್ತಿದ್ದು ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದೆ.

ಮುಂಡಗೋಡ ಕಲಘಟಗಿ ರಾಜ್ಯ ಹೆದ್ದಾರಿ ಮತ್ತು ಪಟ್ಟಣಕ್ಕೆ ಹತ್ತಿರ ಇರುವ ಮುಸ್ಲಿಂ ಸಮುದಾಯದ ಖಬರಸ್ತಾನ(ಸ್ಮಶಾನ) ಹತ್ತಿರ ಚಿರತೆ ಪ್ರತ್ಯಕ್ಷವಾಗಿದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನ ಮತ್ತು ಬೈಕ್ ಒಡಾಡುತ್ತವೆ. ಅಲ್ಲದೆ ಹತ್ತಿರವೇ ಜನರು ವಾಸಿಸುವ ಬಡಾವಣೆಗಳು ಇದೆ. ಶನಿವಾರ ಸಂಜೆ ಹಾಲೇಶ ಎಂಬಾತನು ಖಬರಸ್ತಾನ (ಸ್ಮಶಾನ) ಕಾಂಪೌಂಡ್ ನ ಮೇಲೆ ಚಿರತೆ ಓಡಾಡುತ್ತಿರುವುದು ನೋಡಿ ತನ್ನ ಮೊಬೈಲ್‌ನಲ್ಲಿ ವಿಡಿಯೋ ಸೆರೆ ಹಿಡಿದಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಆ ಭಾಗದ ರೈತರನ್ನು ಚಿಂತೆಗೆ ಈಡುಮಾಡಿದೆ.

ಅರಣ್ಯ ಅಧಿಕಾರಿಗಳು ಭೇಟಿ: ಚಿರತೆಯೂ ಪಟ್ಟಣದ ಹತ್ತಿರವೇ ಓಡಾಡುತ್ತಿದೆ ಎಂಬ ಮಾಹಿತಿ ಸಿಕ್ಕ ತಕ್ಷಣವೇ ರವಿವಾರ ಇಲ್ಲಿನ ವಲಯ ಅರಣ್ಯಧಿಕಾರಿ ಸುರೇಶ ಕುಳ್ಳೊಳ್ಳಿ ಉಪವಲಯ ಅರಣ್ಯಧಿಕಾರಿ ಗಿರೀಶ ಕೊಳೆಕರ್ ಹಾಗೂ ಮುತ್ತು ಹಿರೇಕನಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆ ಸ್ಥಳದಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತನ್ನು ಪತ್ತೆ ಹಚ್ಚಿದ್ದಾರೆ. ಅಲ್ಲದೆ ಆ ಪ್ರದೇಶದಲ್ಲಿ ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದಾರೆ.

ಧ್ವನಿವರ್ಧಕದ ಮೂಲಕ ಜಾಗೃತಿ: ಚಿರತೆ ಓಡಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಹಳೂರ, ಮಾರಿಕಾಂಬಾ ನಗರ ಕೊಪ್ಪದ ಓಣಿ, ಪಟ್ಟಣದ ನಿವಾಸಿಗಳು ಮತ್ತು ಬೈಕ್ ಸವಾರರಿಗೆ ಚಿರತೆ ಓಡಾಡಿದ ಪ್ರದೇಶದಲ್ಲಿ ಒಬ್ಬಂಟಿಯಾಗಿ ಓಡಾಡಬಾರದು, ರಾತ್ರಿ ಸಮಯ ಆ ಪ್ರದೇಶದಲ್ಲಿ ಹೋಗಬಾರದು. ಆಕಸ್ಮಾತ್ ಹೋಗಬೇಕಾದರೆ ಗುಂಪು ಗುಂಪಾಗಿ ತೆರಳುವಂತೆ ಧ್ವನಿವರ್ಧಕದ ಮೂಲಕ ಎಚ್ಚರಿಕೆಯ ಸಂದೇಶ ನೀಡುತ್ತಿದ್ದಾರೆ.

ಈ ಹಿಂದೆ ತಾಲೂಕಿನ ಗಡಿ ಭಾಗ ಮತ್ತು ಶಿಗ್ಗಾಂವ ದುಂಡಸಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ವಡಗಟ್ಟ ಮತ್ತು ತಾಯವ್ವ ಗುಡಿಯ ಅಕ್ಕ ಪಕ್ಕದಲ್ಲಿ ವಾಹನ ಸವಾರರಿಗೆ ಚಿರತೆ ಆಗಾಗ ಪ್ರತ್ಯಕ್ಷವಾಗುತ್ತಿತ್ತು ಅಲ್ಲದೆ ಚಿರತೆಯೂ ಮುಖ್ಯ ರಸ್ತೆ ದಾಟುವುದನ್ನು ಅನೇಕರು ನೋಡಿ ಭಯ ಭೀತರಾಗಿದ್ದರು. ಇದಲ್ಲದೆ ತಾಲೂಕಿನ ಅತ್ತಿವೇರಿ ಗೌಳಿದಡ್ಡಿಯ ಹತ್ತಿರ ಗೌಳಿ ಸಮುದಾಯದ ಹಲವು ಜಾನುವಾರಗಳ ಮೇಲೆ ದಾಳಿ ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದು.

ವಲಯ ಅರಣ್ಯಧಿಕಾರಿ ಸುರೇಶ ಕುಳ್ಳೊಳ್ಳಿ ಪ್ರತಿಕ್ರಿಯಿಸಿ: ಆ ಪ್ರದೇಶದಲ್ಲಿ ಓಡಾಡಿದ ಹೆಜ್ಜೆ ಗುರುತು ಚಿರತೆಯದೆ ಆಗಿದೆ. ಮತ್ತು ಪ್ರತ್ಯಕ್ಷದರ್ಶಿ ಹಾಲೇಶ ಎಂಬಾತನಿಗೆ ಕರೆದು ಕೇಳಿದ್ದೇವೆ ಆತನು ಸಹ ನಾನು ಚಿರತೆಯನ್ನು ನೋಡಿದ್ದೇನೆ ಎಂದಿದ್ದಾನೆ. ಅಲ್ಲದೆ ವಿಡಿಯೋ ಸಹ ತೋರಿಸಿದ್ದಾನೆ. ಈಗಾಗಲೇ ಆ ಪ್ರದೇಶದಲ್ಲಿ ಚಿರತೆ ಪತ್ತೆ ಹಚ್ಚಲು ನಮ್ಮ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಜನರಲ್ಲಿ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಒಟ್ಟಿನಲ್ಲಿ ಈ ಹಿಂದೆ ಗಡಿ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಂಡು ನಾಗರಿಕರಲ್ಲಿ ಭಯ ಮೂಡಿಸುತ್ತಿತ್ತು. ಈಗ ಪಟ್ಟಣದ ಮತ್ತು ಜನದಟ್ಟಣೆ ಪ್ರದೇಶ ಹತ್ತಿರವೇ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಭಯದ ವಾತವರಣ ಸೃಷ್ಟಿ ಮಾಡಿದೆ. ಹಾಗಾಗಿ ಆದಷ್ಟೂ ಬೇಗ ಸಂಬಂಧಪಟ್ಟ ಇಲಾಖೆಯವರು ಇದನ್ನು ಸೆರೆ ಹಿಡಿದು ಜನರಲ್ಲಿ ಕಾಡುತ್ತಿರುವ ಭಯವನ್ನು ದೂರ ಮಾಡಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.