![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 20, 2020, 11:28 AM IST
ಅಂಕೋಲಾ: ಪಟ್ಟಣದಲ್ಲಿ ಶನಿವಾರ ಕಂಡ ಜನಜಾತ್ರೆ ನಿಯಂತ್ರಿಸಲು ಅಧಿಕಾರಿಗಳ ತಂಡ ಭಾನುವಾರ ಲಾಕ್ ಡೌನ್ ವೇಳೆ ಇಲ್ಲಿನ ತರಕಾರಿ ಮತ್ತು ಬೀದಿ ವ್ಯಾಪಾರಿಗಳ ಸ್ಥಳ ಪರಿಶೀಲನೆ ನಡೆಸಿದರು.
ಪಟ್ಟಣದ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಜನಸಾಗರ ಹರಿದು ಬರುತ್ತಿದೆ. ಕೋವಿಡ್ ಬಯವಿಲ್ಲದೆ ಜನರು ಸಾಮಾಜಿಕ ಅಂತರ ಮರೆತು ತಮಗೆ ಬೇಕಾದ ವಸ್ತುಗಳ ಖರೀದಿಯಲ್ಲಿ ನಿರತರಾಗುತ್ತಿದ್ದಾರೆ ಎಂಬ ಮಾಹಿತಿ ಪಡೆದುಕೊಂಡ ತಹಶೀಲ್ದಾರ್ ಉದಯ ಕುಂಭಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಹೀಗಾಗಿ ಪುರಸಭೆ ಮುಖ್ಯಾಧಿಕಾರಿ ಬಿ. ಪ್ರಹ್ಲಾದ ಮತ್ತು ಪಿಎಸ್ಐ ಸಂಪತಕುಮಾರ ಸೋಮವಾರದಿಂದಲೇ ಪಟ್ಟಣದಲ್ಲಿ ಜನರ ನಿಯಂತ್ರಣ ಮಾಡಲು ಭಾನುವಾರ ಪಟ್ಟಣದ ಎಲ್ಲ ವ್ಯಾಪಾರ ವಹಿವಾಟು ನಡೆಯುವ ಸ್ಥಳಗಳನ್ನು ಪರಿಶೀಲನೆ ನಡೆಸಿದ್ದಾರೆ. ಕಳೆದ ಹಲವು ದಿನಗಳಿಂದ ಬೀದಿ ಬೀದಿಗಳಲ್ಲಿ ತರಕಾರಿ ಅಂಗಡಿ ತೆರೆದುಕೊಂಡಿರುವುದನ್ನು ಸೋಮವಾರ ತೆರವು ಮಾಡಲು ನಿರ್ದರಿಸಿದ್ದಾರೆ. ಅಂಗಡಿ ಬಿಟ್ಟು ರಸ್ತೆ ಮೇಲೆ ಅಂಗಡಿ ಬೆಳೆಸಿದರೆ ಅವುಗಳನ್ನು ತೆರವು ಮಾಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಬಿ. ಪ್ರಹ್ಲಾದ ತಿಳಿಸಿದ್ದಾರೆ.
ಸಾರ್ವಜನಿಕರು ಸಾಮಾಜಿಕ ಅಂತರ ಮರೆತು, ಮಾಸ್ಕ್ ಇಲ್ಲದೆ ಒಡಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್ಐ ಸಂಪತಕುಮಾರ ತಿಳಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.