ಮಳೆ ನೀರಲ್ಲಿ ಕೊಚ್ಚಿ ಹೋದ ಇಬ್ಬರು: ಕುಟುಂಬದವರನ್ನು ಸಂತೈಸಿದ ಸಚಿವ ಕೃಷ್ಣ ಬೈರೇಗೌಡ‌


Team Udayavani, Jul 8, 2023, 6:09 PM IST

ಮಳೆ ನೀರಲ್ಲಿ ಕೊಚ್ಚಿ ಹೋದ ಇಬ್ಬರು ಕುಟುಂಬದವರನ್ನು ಸಂತೈಸಿದ ಸಚಿವ ಕೃಷ್ಣ ಬೈರೇಗೌಡ‌

ಕಾರವಾರ: ಮಳೆ ನೀರಲ್ಲಿ ಕೊಚ್ಚಿ ಹೋಗಿ ಕಳೆದ ಗುರುವಾರ ಮೃತಪಟ್ಟ ಸತೀಶ್ ಪಿ.ನಾಯ್ಕ, ಉಲ್ಲಾಸ್ ಜಟ್ಟಿ ಗಾವುಡಿ ಕುಟುಂಬದ ಸದಸ್ಯರನ್ನು ಸಂತೈಸಿದ  ಕಂದಾಯ ಸಚಿವ ಕೃಷ್ಣ ಬೈರೇಗೌಡ‌ ಅವರು ಎರಡೂ ಕುಟುಂಬದವರಿಗೆ ತಲಾ ಐದು ಲಕ್ಷ ರೂ.ಪರಿಹಾರ ವಿತರಿಸಿದರು‌.

ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಅನಾಹುತ ಸೃಷ್ಟಿಸಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. ಜುಲೈ ಕೊನೆ ವಾರದವರಗೆ ಕಾದು ನೋಡಿ, ಮೋಡ ಬಿತ್ತನೆಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಮೋಡ ಬಿತ್ತನೆ ಬಗ್ಗೆ ಯೋಚನೆ ಮಾಡಲಾಗುತ್ತಿದೆ. ಮೋಡ ಬಿತ್ತನೆಯ ಪರಿಣಾಮ ತಿಳಿದು, ಮುಂದಿನ ಹೆಜ್ಜೆ ಇಡಲಾಗುವುದು ಎಂದು ಕೃಷ್ಣ ಬೈರೇಗೌಡ ಹೇಳಿದರು.

ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದ ಗದ್ದೆಗಳು ಜಲಾವೃತವಾಗಿರುವ ಪ್ರದೇಶವನ್ನು ಸಚಿವರು ವೀಕ್ಷಿಸಿದರು‌.

ನೆರೆ ಪೀಡಿತ ಪ್ರದೇಶಕ್ಕೆ ಬರುವ ಉದ್ದೇಶ ಅಧಿಕಾರಿಗಳ ವರ್ಗಕ್ಕೆ ಚುರುಕು ಮುಡಿಸುವುದಾಗಿದೆ. ಜನಪರವಾಗಿ ಅಧಿಕಾರಿಗಳು ಸಹ ಬದಲಾಗಬೇಕಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ಆದರೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳ ಸ್ಥಿತಿ ಭಿನ್ನವಾಗಿದೆ. ಮುಂಗಾರು ಮಳೆಗೆ ರಾಜ್ಯದಲ್ಲಿ 20 ಜನ ಸಾವನ್ನಪ್ಪಿದ್ದಾರೆ. 40 ಕ್ಕೂ ಹೆಚ್ಚು ಜಾನುವಾರಗಳು ಸಾವನ್ನಪ್ಪಿವೆ. ಹಲವು ಮನೆಗಳು ಹಾನಿಯಾಗಿವೆ ಎಂದರು‌.

ಹಾನಿಯಾದ ಮನೆಗೆ 1 ಲಕ್ಷ 25 ಸಾವಿರ ಪರಿಹಾರ ನೀಡಲಾಗುತ್ತಿದೆ. ಮಳೆ ಹಾನಿಗೆ ಸರ್ಕಾರ ಪರಿಹಾರ ಕೊಡಲು ಸಿದ್ದವಿದೆ ಎಂದರು.

ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಅವರ ಜೊತೆ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಸಿಇಒ ಈಶ್ವರ ಕಾಂದೂ ಇದ್ದರು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.