Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ


Team Udayavani, Oct 21, 2024, 12:36 PM IST

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

ಶಿರಸಿ: ಹಿಂದೆಲ್ಲ ಇದ್ದ ಕಾಂಗ್ರೆಸ್ ಭ್ರಷ್ಟಾಚಾರ ಹಗರಣ ಮುರಿದು ಸಿದ್ದರಾಮಯ್ಯ ಅವರು ಮುಡಾ ಹಗರಣದ ಮೂಲಕ ಹೊಸ ದಾಖಲೆ‌ ಮಾಡಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ‌ ಕಾಗೇರಿ ಲೇವಡಿ ಮಾಡಿದ್ದಾರೆ.

ಸೋಮವಾರ ಅವರು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ‌ ನಡೆಸಿ, ಮೈಸೂರಿನ ಮುಡಾ ಹಗರಣದಲ್ಲಿ ಇಡಿ ಸಾಕಷ್ಟು ದಾಖಲೆ ಪಡೆದಿದೆ. ಸಿದ್ದರಾಮಯ್ಯ ಅವರ ಪತ್ನಿಗೆ 14 ಸೈಟು ಕೊಟ್ಟಿದೆ. ಮುಡಾ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ, ಇಡಿ ತನಿಖೆಗೆ ರಾಜ್ಯ ಸರಕಾರದ ಅಧಿಕಾರಿಗಳು ಸಹಕಾರ ಕೊಡಬೇಕು. ಹಾಗೂ ಇದರ ಸಮಗ್ರ ತನಿಖೆಗೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು‌.

ಈ ಹಿಂದೆ ಸಿದ್ದರಾಮಯ್ಯ ಅವರು ಪ್ರತಿ ಪಕ್ಷದಲ್ಲಿ ಇದ್ದಾಗ ಮಾಡಿದ ಆರೋಪ ಈಗ ಸತ್ಯ ಅನ್ನಿಸೋದಿಲ್ಲವಾ ಎಂದು ಕೇಳಿದ ಅವರು, ಕಾಂಗ್ರೆಸ್ ಭ್ರಷ್ಟಾಚಾರದ ಜನಕ ಆಗಿದೆ. ಇದರಿಂದ ಸಿದ್ದರಾಯಮಯ್ಯ ಅವರು ಸ್ವತಃ ರಾಜೀನಾಮೆ ಕೊಡಲು ಮನಸ್ಸಿದ್ದರೂ ಹೈಕಮಾಂಡ್ ಕಾರಣದಿಂದ ರಾಜೀನಾಮೆ‌ ಕೊಡಲಾಗದ ಸ್ಥಿತಿ ಇರಬೇಕು ಎಂದೂ ಲೇವಡಿ ಮಾಡಿದರು.

ಮರ್ಯಾದೆಗೆಟ್ಟ ಸರಕಾರ, ಸಿದ್ದರಾಮಯ್ಯ ಅವರು ವಾಪಸ್ ಕೊಟ್ಟ ಬಳಿಕ ಹಗರಣ ಮುಗಿದು ಹೋಗುತ್ತಾ? ರಾಜ್ಯದ ಜನರಲ್ಲಿ ಭ್ರಮೆ ಸೃಷ್ಟಿಸುವುದು ಬಿಡಬೇಕು. ಕಾಂಗ್ರೆಸ್ ಸ್ಥಿತಿ ಹತಾಶ ಸ್ಥಿತಿ ಆಗಿದೆ. ದ್ವೇಷ ರಾಜಕಾರಣ, ಎಫ್ಐಆರ್, ನ್ಯಾಯಾಲಯದಲ್ಲಿ ಇದೆ. ಕೇಂದ್ರ ಸಚಿವರ ಮೇಲೆ ಕಾಂಗ್ರೆಸ್ ಬೇಜವಬ್ದಾರಿಯಾಗಿ ಮಾತನಾಡುವುದನ್ನು, ಬಿಜೆಪಿ ನಾಯಕರ ಮೇಲೆ ಮಸಿ ಬಳಿಯುವುದನ್ನು ಖಂಡಿಸುತ್ತೇವೆ ಎಂದರು.

ಜನ ವಿರೋಧಿ ಸರಕಾರ ಎನ್ನಲು ಹಾಪ್‌ಕಾಮ್ಸ್ ಮಳಿಗೆ ಬಂದ್ ಆಗಿದ್ದೂ ಉದಾಹರಣೆ. ರಾಜ್ಯದಲ್ಲಿ ‌ನೂರಾರು ಬಂದ್ ಆಗಿದೆ ಇದಕ್ಕೆ ಸರಕಾರ ಏನು ಹೇಳುತ್ತದೆ ಎಂದೂ ಕೇಳಿದರು.

ಪ್ರಮುಖರಾದ ಗುರುಪ್ರಸಾದ ಹೆಗಡೆ, ಶರ್ಮಿಳಾ‌ ಮಾದನಗೇರಿ, ರಮಾಕಾಂತ ಭಟ್ಟ, ಗಣಪತಿ ನಾಯ್ಕ, ನಂದನ ಸಾಗರ, ನಾಗರಾಜ್ ನಾಯ್ಕ, ಆರ್.ವಿ.ಹೆಗಡೆ, ರವಿಕಾಂತ ಶೆಟ್ಟಿ ಇತರರು ಇದ್ದರು.

ಸಿದ್ದರಾಮಯ್ಯ ಅವರ ಮುಡಾ ಹಗರಣದ ನಿಷ್ಪಕ್ಷಪಾತ ತನಿಖೆಗೆ ರಾಜೀನಾಮೆ ನೀಡಬೇಕಾಗಿದೆ. ಕಾಂಗ್ರೆಸ್ ನಲ್ಲಿ ಪರ್ಯಾಯ ಸಿಎಂ ಮಾಡಿಕೊಳ್ಳಲಿ.
– ಕಾಗೇರಿ, ಸಂಸದ

ಇದನ್ನೂ ಓದಿ: New Threat: ನ.1ರಿಂದ 19ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಪನ್ನು ಬೆದರಿಕೆ

ಟಾಪ್ ನ್ಯೂಸ್

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

SC: ‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

nisha yogeshwar

Video: ಎಲ್ಲಾ ಸತ್ಯ ಹೊರ ತರುತ್ತೇನೆ: ತಂದೆ ವಿರುದ್ದ ಬಾಂಬ್‌ ಹಾಕಿದ ಸಿಪಿವೈ ಪುತ್ರಿ ನಿಶಾ

ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ

BSY: ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

7

Thekkatte: ಭತ್ತದ ಕಟಾವು ಆರಂಭ; ಎಲ್ಲೆಡೆ ಯಂತ್ರಗಳದೇ ಸದ್ದು!

6

Karkala: ಬಂಡಿಮಠ ಜಂಕ್ಷನ್‌ನಲ್ಲಿ ಅಪಘಾತಗಳ ಕಾಟ

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

5

Kinnigoli: ಪಕ್ಷಿಕೆರೆ-ಕೊಯಿಕುಡೆ ರಸ್ತೆಯುದ್ದಕ್ಕೂ ಹೊಂಡ ಗುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.