ದೊಡ್ಡೂರು ಬೆಟ್ಟದಲ್ಲಿ ಬಿಳೆ ಮುಳ್ಳಣ್ಣು ಹಬ್ಬ


Team Udayavani, Apr 11, 2021, 7:39 PM IST

hdfghfvv

ಶಿರಸಿ : ವಿಶ್ವ ಆರೋಗ್ಯದಿನದ ಅಂಗವಾಗಿ ಶಿರಸಿಯ ಪ್ರಕೃತಿ ಸಂಸ್ಥೆವತಿಯಿಂದ ವಿನೂತನವಾದ ಬಿಳೆ ಮುಳ್ಳಣ್ಣು ಹಬ್ಬವನ್ನು ತಾಲೂಕಿನ ದೊಡ್ಡೂರಿನ ಬೆಟ್ಟದಲ್ಲಿ ಆಚರಿಸಲಾಯಿತು.

ಪ್ರಕೃತಿ ಸಂಸ್ಥೆಯ ಪಾಂಡುರಂಗ ಹೆಗಡೆ ಮಾತನಾಡಿ, ಪ್ರಕೃತಿ ಮತ್ತು ಮಾನವನ ನಡುವಿನ ಸಂಬಂಧ ಬಲಗೊಂಡಾಗ ಆರೋಗ್ಯ ಮತ್ತು ಸ್ವಾಸ್ಥ್ಯ ಒದಗಿ ಬರುತ್ತದೆ. ಪೂರಕವಾಗಿ ತಲೆಮಾರುಗಳ ನಡುವಿನ ಸಂಬಂಧಗಳು ಬಲಗೊಳ್ಳಬೇಕಾದ ಅಗತ್ಯ ಇಂದಿನದ್ದಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯರೊಂದಿಗೆ ಕಿರಿಯರು ಕೂಡಿ ನಿಸರ್ಗ ಸ್ನೇಹ ಬೆಸೆದುಕೊಳ್ಳುವ ಒಂದು ಪ್ರಯತ್ನ ಇದು.

ಪ್ರಕೃತಿಯಲ್ಲಿ ಕಾಲಮಾನಕ್ಕೆ ಅನುಗುಣವಾಗಿ ಆಹಾರ, ನಿಸರ್ಗದಲ್ಲಿ ಬದಲಾವಣೆ ಕಾಣಬಹುದು. ಅಂತಹ ಒಂದು ವೈಶಿಷ್ಟ್ಯವೇ ಬಿಳೆ ಮುಳ್ಳೆಹಣ್ಣು ಎಂದರು. ಗಿಡಮೂಲಿಕಾ ತಜ್ಞ ಜಿ.ಎಸ್‌. ಹೆಗಡೆ ಲಕ್ಕಿಸವಲು, ಅತ್ಯಂತ ಕಡಿಮೆ ವೆಚ್ಚದಲ್ಲಿ ಮನುಷ್ಯನ ನರಗಳ ಚೈತನ್ಯವನ್ನು ಹೆಚ್ಚಿಸುವ ಟಾನಿಕ್‌ ಇದಾಗಿದೆ. ಆ್ಯಂಟಿ ಆಕ್ಸಿಡೆಂಟ್‌ ಇರುವ ಇರುವ ಈ ಮುಳ್ಳಣ್ಣು ದೇಹಕ್ಕೆ ಬೇಸಿಗೆಯಲ್ಲಿ ತಂಪನ್ನು ನೀಡುವಲ್ಲಿ ಸಹಕಾರಿಯಾಗಿದೆ ಎಂದರು.

ಝಿಝೀಪಸ್‌ ರೊಗೊಸಾ ಎಂದು ಕರೆಯಲ್ಪಡುವ ಈ ಹಣ್ಣು ಬೋರೆ ಹಣ್ಣಿನ ಪರಿವಾರಕ್ಕೆ ಸೇರಿದ್ದು. ಮತ್ತೂಂದು ಪ್ರಭೇದವೇ ಕರೆ ಮುಳ್ಳಣ್ಣು ಅಥವಾ ಪರಿಗೆ ಹಣ್ಣು ಎಂದು ಕರೆಯುತ್ತಾರೆ. ಇಡೀ ಗಿಡ ಮೊನಚಾದ ಮುಳ್ಳಿನಿಂದ ಕೊಡಿರುವುದರಿಂದ ಹಣ್ಣು ಕೊಯ್ಯವಾಗ ಸ್ವಲ್ಪ ಎಚ್ಚರ ತಪ್ಪಿದರೆ ಕೈಗೆ ಚುಚ್ಚುವುದು ಖಚಿತ. ಬಹುಶಃ ಈ ಕಾರಣದಿಂದಾಗಿ ಕಾಡಿನಲ್ಲಿರುವ ಮಂಗಗಳು ಇದನ್ನು ತಿನ್ನದೇ ಇರುವುದರಿಂದ ಅದು ಮನುಷ್ಯನಿಗೆ, ಪಕ್ಷಿಗಳಿಗೆ ಸವಿಯಲು ಸಿಗುತ್ತಿದೆ ಎಂದೂ ಅನೇಕರು ಹೇಳಿದರು. ಎರಡು ತಾಸು ಈ ಬೆಟ್ಟದಲ್ಲಿ ಅಲೆದಾಡುತ್ತಾ ವಿವಿಧ ರೀತಿಯ, ಬೇರೆ ಬೇರೆ ರುಚಿಯಿರುವ ಬಾಯಿಯಲ್ಲಿ ಇಟ್ಟ ತತ್‌ ಕ್ಷಣ ಕರಗಿ ಸವಿ ನೀಡುವ ಮುಳ್ಳಣ್ಣು ಹಬ್ಬದಲ್ಲಿ ಭಾಗವಹಿಸಲು ಬಂದ ಮಹಿಳೆಯರು, ಹಿರಿಯ ನಾಗರಿಕರು ಮತ್ತು ಮಕ್ಕಳು ಸವಿದು ಬಾಯಿ ಚಪ್ಪರಿಸಿದರು.

ಸಾಹಿತಿ ಮಾರುತಿ ಅಂಕೋಲೆಕರ, ಈ ಹಬ್ಬ ನನ್ನ ಬಾಲ್ಯದ ದಿನಗಳನ್ನು ನೆನಪು ಮಾಡಿಕೊಟ್ಟಿತು, ಇಷ್ಟು ಪ್ರಮಾಣದಲ್ಲಿ ಮುಳ್ಳಣ್ಣು ಗಿಡಗಳನ್ನು ನಾಡು ನೋಡಿರಲಿಲ್ಲ ಹೇಳಿದರು. ಈ ಗಿಡದ ಬೇರು ಮತ್ತು ತೊಗಟೆಯನ್ನು ಔಷಧಿಯಲ್ಲಿ ಬಳಸುವ ಮತ್ತು ಅದರ ವಿವಿಧ ರೀತಿಯ ಉಪಯೋಗದ ಕುರಿತು ವಿವಿರವಾದ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳು ನೀಡಿದರು.

ಇಂತಹ ಕಾಡು ಹಣ್ಣುಗಳು ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವುದರಿಂದ ಅವುಗಳ ಮಹತ್ವದ ಕುರಿತು ಜಾಗೃತಿ ಮೂಡಿಸುವ ಕುರಿತು ಚರ್ಚೆ ನಡೆಯಿತು. ರಸ್ತೆಯ ಪಕ್ಕದಲ್ಲಿದ್ದರೂ ಸಹ ಮಕ್ಕಳು ಇಲ್ಲಿರುವ ಮುಳ್ಳಣ್ಣನ್ನು ತಿನ್ನದೇ ಬಿಟ್ಟಿರುವುದು ಹೊಸ ತಲೆಮಾರಿನವರಿಗೆ ಈ ಕಾಡು ಹಣ್ಣುಗಳ ಬಗ್ಗೆ ಆಸಕ್ತಿ ಇಲ್ಲದಿರುವುದನ್ನು ತೋರಿಸುತ್ತದೆ. ಪೌಷ್ಠಿಕಾಂಶಗಳಿಂದ ಕೂಡಿರುವ ಈ ಹಣ್ಣುಗಳು ಪೇಟೆಯಿಂದ ಖರೀದಿಸಿದ ಹಣ್ಣಿಗಿಂತ ಹೆಚ್ಚಿನ ಆರೋಗ್ಯವನ್ನು ಒದಗಿಸುತ್ತದೆ. ಪ್ರಕೃತಿ ಸಂಸ್ಥೆ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಪಾಂಡುರಂಗ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು. ಬೆಂಗಳೂರಿನ ಐಟಿ ಉದ್ಯೋಗಿ ವಿನ್ಯಾಸ ಕುಮಾರ, ತ್ರಯಿ, ಸುಬ್ಬಣ್ಣ ಮಣಭಾಗಿ ಮತ್ತು ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

3-sirsi

Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.