![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 29, 2019, 1:39 PM IST
ಅಂಕೋಲಾ: ಹತ್ಯೆಗೈದ ಆರೋಪಿಯನ್ನು ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸಲಾಯಿತು.
ಅಂಕೋಲಾ: ಮಾಜಿ ಸೈನಿಕ ಉದ್ದೇಶಪೂರ್ವಕವಾಗಿ ತನ್ನ ಸಹೋದರನ ಪತ್ನಿ ಹಾಗೂ ಸಹೋದರನ ಮಗನ ಮೇಲೆ ಗುಂಡಿನ ದಾಳಿ ನಡೆಸಿ ಇಬ್ಬರನ್ನು ಹತ್ಯೆಗೈದ ಹೃದಯ ವಿದ್ರಾವಕ ಘಟನೆಯಿಂದ ಅಂಕೋಲಾ ತಾಲೂಕಿನ ಜನತೆ ಬೆಚ್ಚಿಬಿದ್ದಿದ್ದಾರೆ.
ಭೂ ಸೇನೆಯ ನಿವೃತ್ತ ಹವಾಲ್ದಾರ್ ಸುಬ್ರಾಯ ಪ್ರಭು ತನ್ನ ಮನೆಯಲ್ಲಿ ಆಗಾಗ ಆಸ್ತಿ ವಿಷಯದಲ್ಲಿ ಕುಟುಂಬದವರೊಂದಿಗೆ ತಕರಾರು ಮಾಡುತ್ತಿದ್ದ ಎನ್ನಲಾಗಿದೆ. ತನಗೆ ಬರಬೇಕಾದ ಆಸ್ತಿಯಲ್ಲಿ ಹಂಚಿಕೆ ಮಾಡದ ಕಾರಣದಿಂದ ಶನಿವಾರ ರಾತ್ರಿ 7:30ಕ್ಕೆ ತನ್ನ ಮನೆಯ ಮಹಡಿಯ ಕೆಳಗಿರುವ ಸಹೋದರನ ಮನೆಗೆ ಅಗಮಿಸಿ ಸಹೋದರ ಅಮೀತ ಪ್ರಭು ಪತ್ನಿ ಮೇಧಾ ಪ್ರಭು ಮಗನಿಗೆ ಮನೆಯಲ್ಲಿ ಪಾಠ ಹೇಳಿಕೊಡುತ್ತಿದ್ದ ವೇಳೆ ಏಕಾಏಕಿ ತನ್ನ ಲೈಯನ್ಸ್ ಹೊಂದಿರುವ 12 ಬೋರ, ಡಬಲ ಬ್ಯಾರೆಲ್ ಬಂದೂಕಿನಿಂದ ಎರಡು ಬಾರಿ ಗುಂಡು ಹಾರಿಸಿದ್ದಾನೆ. ಅನುಜ ಅಮಿತ ಪ್ರಭು (8) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಈತನ ತಾಯಿ ಮೇಧಾ ಅಮಿತ ಪ್ರಭು (33) ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಹಳದಿಪುರ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ. ಮೃತ ದೇಹದ ಮರಣೋತ್ತರ ಪರೀಕ್ಷೇಯನ್ನು ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ನಡೆಸಲಾಗಿದೆ.
ಘಟನೆಗೆ ಬಳಸಿದ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂದೂಕಿನಲ್ಲಿ ಇನ್ನೂ 29 ಗುಂಡುಗಳಿದ್ದು, ಅದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂದೂಕಿನ ಪರವಾನಿಗೆ ಕೂಡ ರದ್ದು ಮಾಡಿದ್ದಾರೆ ಎಂದು ತಿಳಿದಿದೆ.
ಭಾನುವಾರ ಬೆಳಗ್ಗೆ ಸಿಪಿಐ ಪ್ರಮೋದ ಕುಮಾರ ತಂಡ ಆರೋಪಿಯನ್ನು ಘಟನಾ ಸ್ಥಳಕ್ಕೆ ಕರೆತಂದು ಪಂಚನಾಮೆ ನಡೆಸಿ ಆರೋಪಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ತಾನು ಉದ್ದೇಶ ಪೂರ್ವಕವಾಗಿಯೇ ಈ ಕೃತ್ಯ ಮಾಡಿರುವುದಾಗಿ ವಿಚಾರಣೆ ವೇಳೆ ಆರೋಪಿ ಹೇಳಿದ್ದಾನೆ ಎಂದು ತಿಳಿದು ಬಂದಿದೆ.
ವಿಧಿವಿಜ್ಞಾನ ತಂಡ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿ ಪರೀಶಿಲನೆ ನಡೆಸಿದ್ದಾರೆ. ಮಂಗಳೂರು ಮತ್ತು ಬೆಂಗಳೂರಿನಿಂದ ಅರುಣ ರಂಗಸ್ವಾಮಿ ನೇತೃತ್ವದ ವಿಧಿವಿಜ್ಞಾನ ತಂಡ ಆಗಮಿಸಿ ಪರಿಶೀಲಿಸಿದ್ದಾರೆ. ಜೊತೆಗೆ ಜಿಲ್ಲಾ ಶಶ÷ ನಿರ್ವಹಣಾ ತಂಡ ಬೆರಳಚ್ಚು ತಂಡದವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಎಸ್ಪಿ ವಿನಾಯಕ ಪಾಟೀಲ, ಡಿವೈಎಸ್ಪಿ ಶಂಕರ ಮಾರಿಹಾಳ, ಸಿಪಿಐ ಬಿ. ಪ್ರಮೋದಕುಮಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಪೊಲೀಸ್ ವಶಕ್ಕೆ ಪಡೆದ ಅಜಯ ಪ್ರಭುನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯದಲ್ಲಿ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.