Kumta ಅಧಿಕಾರಿಗಳ ನಿರ್ಲಕ್ಷ್ಯ: ದುರಸ್ತಿಯಾಗದ ಶಾಲಾ ಕಟ್ಟಡ

ಆಯುಷ್ಮಾನ್‌ ಆರೋಗ್ಯ ಮಂದಿರದ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ

Team Udayavani, Jun 8, 2024, 9:09 PM IST

Kumta ಅಧಿಕಾರಿಗಳ ನಿರ್ಲಕ್ಷ್ಯ: ದುರಸ್ತಿಯಾಗದ ಶಾಲಾ ಕಟ್ಟಡ

ಕುಮಟಾ: ಅತೀ ಎತ್ತರದಲ್ಲಿರುವ ಕುಗ್ರಾಮ ತಾಲೂಕಿನ ಸೊಪ್ಪಿನಹೊಸಳ್ಳಿ ಗ್ರಾಪಂ ವ್ಯಾಪ್ತಿಯ ಮೇದಿನಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡ ಕಳೆದ ಮಳೆಯಲ್ಲಿ ಕುಸಿದಿದ್ದು, ದುರಸ್ತಿಯಾಗದ ಕಾರಣ ಮಕ್ಕಳಿಗೆ ಬೇರೆಡೆ ಪಾಠ ಮಾಡಬೇಕಾದ ಸ್ಥಿತಿ ಬಂದೊದಗಿದೆ.

ಮೇದಿನಿ ಗ್ರಾಮಕ್ಕೆ ಸರಿಯಾದ ರಸ್ತೆಯೂ ಇಲ್ಲ. ಗುಡ್ಡದ ಮೇಲಿರುವ ಶಾಲೆಗೆ ಸುಸಜ್ಜಿತ ಕಟ್ಟಡವೂ ಇಲ್ಲದಂತಾಗಿದೆ. 60 ವರ್ಷಗಳಷ್ಟು ಹಳೆಯ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕಳೆದ ಮಳೆಗಾಲದಲ್ಲಿ ಕುಸಿದಿದೆ. 2020ರಲ್ಲಿ ಜಿಲ್ಲಾಧಿಕಾರಿ ಇಲ್ಲಿ ಬಂದು ವಾಸ್ತವ್ಯ ಮಾಡಿದ್ದರು. ಆಗ ಹಳೆಯ ಕಟ್ಟಡದ ಗೋಡೆಗೆ ಬಣ್ಣ, ನೆಲಕ್ಕೆ ಟೈಲ್ಸ್‌ ಹಾಕಲಾಗಿತ್ತು. ಈಗ ಕಟ್ಟಡ ಅಪಾಯಕಾರಿಯಾಗಿದ್ದರೂ ಅದೇ ಕಟ್ಟಡದ ಒಂದು ಕೊಠಡಿಯನ್ನು ಸದ್ಯ ಬಿಸಿಯೂಟದ ಕೋಣೆಯಾಗಿ ಬಳಸಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಯುಷ್ಮಾನ್‌ ಆರೋಗ್ಯ ಮಂದಿರದ 8 ಅಡಿ ಅಳತೆಯ ಸಮುದಾಯ ಆರೋಗ್ಯಾಧಿಕಾರಿ ಕೊಠಡಿಯಲ್ಲಿ ತರಗತಿ ನಡೆಸಲಾಗುತ್ತಿದೆ.

ಶಾಲೆಗೆ 60 ವರ್ಷವಾದ ಹಿನ್ನೆಲೆಯಲ್ಲಿ ಶಾಲೆ ಎದುರು ಸಾರ್ವಜನಿಕರ ಶ್ರಮದಾನ, ದಾನಿಗಳ ನೆರವಿನಿಂದ ಒಂದು ಪುಟ್ಟ ಕಟ್ಟಡ ನಿರ್ಮಿಸುತ್ತಿದ್ದೇವೆ. ಅದಕ್ಕೆ ಕೆಲ ದಾನಿಗಳು ಸುಮಾರು 1.50 ಲಕ್ಷ ನೀಡಿದರೆ, ಚಿಕ್ಕಬಳ್ಳಾಪುರ ಶಾಸಕ ನಂಜೇಗೌಡ 25 ಸಾವಿರ ನೀಡಿದ್ದಾರೆ. ಈಗ ಶಾಲೆಗೆ 14 ವಿದ್ಯಾರ್ಥಿಗಳು ಬರುತ್ತಿದ್ದಾರೆ. ಹೊಸ ಕಟ್ಟಡ, ಒಬ್ಬ ಅತಿಥಿ ಶಿಕ್ಷಕರ ಅಗತ್ಯವಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಶಿಕ್ಷಕ ರಾಜು ನಾಯ್ಕ ತಿಳಿಸಿದ್ದಾರೆ.

ಸ್ಥಳೀಯರಾದ ಬಾಲಚಂದ್ರ ಗೌಡ ಮಾತನಾಡಿ, ಶಿಕ್ಷಕ ರಾಜು ನಾಯ್ಕ ಅವರು ವಿದ್ಯಾರ್ಥಿಗಳ ಮನೆಗಳಿಗೆ ಹೋಗಿ ಅವರನ್ನು ಶಾಲೆಗೆ ಕರೆ ತಂದಿದ್ದಾರೆ. ಶಾಲೆಗೆ ಬರುವಾಗ ಸ್ವಂತ ಖರ್ಚಿನಿಂದ ವಿದ್ಯಾರ್ಥಿಗಳಿಗೆ ಹಣ್ಣು, ತಿನಿಸು ತಂದು ಕೊಡುತ್ತಾರೆ. ಇದರಿಂದ ಬೇರೆ ಕಡೆ ಇದ್ದ ಮಕ್ಕಳನ್ನು ಇಲ್ಲಿಗೆ ಕರೆತಂದು ಶಾಲೆಗೆ ಸೇರಿಸಿದ್ದೇವೆ ಎಂದರು.

ಶಾಲೆ ಕಟ್ಟಡ ದುರಸ್ತಿ ಕುರಿತು ಮಾಹಿತಿ ನೀಡಲಾಗಿದ್ದು, ಅನುದಾನ ಬಿಡುಗಡೆಯಾಗಿಲ್ಲ. ಅನುದಾನ ಲಭಿಸಿದ ಬಳಿಕ ಆದ್ಯತೆ ಮೇಲೆ ಕಟ್ಟಡ ದುರಸ್ತಿ ಮಾಡಲಾಗುತ್ತದೆ.
-ಆರ್‌.ಎಲ್‌. ಭಟ್ಟ, ಬಿಇಒ, ಕುಮಟಾ.

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ

7

Joida: ಬಸ್ ನಿಲ್ದಾಣದಲ್ಲಿ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನಿಗೆ ಹಲ್ಲೆ

6

Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.