ಚುನಾವಣಾ ಪ್ರಚಾರಕ್ಕೆ ತೆರಳಿದ ಶಿಕ್ಷಕರಿಗೆ ನೋಟಿಸ್‌

ಕರ್ತವ್ಯಲೋಪ-ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ

Team Udayavani, Jun 6, 2022, 4:04 PM IST

19

ಮುಂಡಗೋಡ: ರಾಜ್ಯ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಏಳು ಶಿಕ್ಷಕರ ವಿರುದ್ಧ ತಹಶೀಲ್ದಾರ್‌ ಶ್ರೀಧರ ಮುಂದಲಮನಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.

ಮುಂಡಗೋಡ ಆದಿ ಜಾಂಬವ ಶಾಲೆ ಮುಖ್ಯೋಪಾಧ್ಯಾಯ ಸೋಮಪ್ಪ ಮುಡೇಣ್ಣನವರ, ದಸ್ತಗೀರಿ ಉರ್ದು ಪ್ರೌಢಶಾಲೆ ಮುಖ್ಯೋಪಾಧ್ಯಾಯ ಸೈಯದ್‌ ಮೆಹಬೂಬ, ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗದ ರಮೇಶ ಪವಾರ, ಸರ್ಕಾರಿ ಪ್ರೌಢಶಾಲೆ ಹುನಗುಂದ ಶಿಕ್ಷಕ ತುಳಜಪ್ಪ ಹುಮ್ನಾಬಾದ್‌, ಲೋಟಸ್‌ ಪ್ರೌಢಶಾಲೆಯ ಶರಣಪ್ಪ ಜಡೇದಲಿ, ಆದಿ ಜಾಂಬವ ಶಾಲೆ ಶಿಕ್ಷಕ ರವಿ ಅಕ್ಕಿವಳ್ಳಿ, ಪಾಳಾ ಗ್ರಾಮದ ಮಹಾತ್ಮಾಜಿ ಪ್ರೌಢಶಾಲೆ ಶಿಕ್ಷಕ ಸಂತೋಷ ಪಾಟೀಲ ಇವರು ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿನ ಶಾಲಾ ಶಿಕ್ಷಕ ಮತದಾರರ ಮನೆ ಮನೆಗೆ ತೆರಳಿ ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ಪರವಾಗಿ ಮತ ಯಾಚಿಸಿದ್ದು ಸ್ಪಷ್ಟವಾಗಿ ಕಂಡು ಬಂದಿರುತ್ತದೆ. ಫ್ಲಾಯಿಂಗ್‌ ಸ್ಕಾಂಡ ಹಾಗೂ ತಾಪಂ ಇಒ ಅವರು ಸೂಕ್ತ ಕ್ರಮಕ್ಕಾಗಿ ವರದಿ ಸಲ್ಲಿಸಿದ್ದಾರೆ.

ಕಾರಣ ಮೇಲ್ಕಂಡ ಎಲ್ಲ ಅಂಶಗಳನ್ನು ಗಂಭೀರವಾಗಿ ಪರಿಗಣಿಸಲಾಗಿ ಸರ್ಕಾರಿ, ಅರೆ ಸರ್ಕಾರಿ, ಗುತ್ತಿಗೆ ಶಾಲೆಗಳ ಮುಖ್ಯಾಧ್ಯಾಪಕರು, ಶಿಕ್ಷಕ ನೌಕರರಾದ ನೀವು ರಾಜ್ಯ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ಪರವಾಗಿ ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿರುವುದು ರಾಜ್ಯ ಸಿವಿಲ್‌ ಸೇವಾ (ನಡತೆ) ನಿಯಮಗಳನ್ನು 1966 ನಿಯಮ5(1) (2) ಮತ್ತು ರಾಜ್ಯ ಶಿಕ್ಷಣ ಅಧಿನಿಯಮ 1983ರ ಉಪ ಬಂಧಗಳನ್ನು ಉಲ್ಲಂಘಿಸಿ ಕರ್ತವ್ಯಲೋಪ ಎಸಗಿದ್ದೀರಿ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಿರುತ್ತದೆ. ಕಾರಣ ಈ ನೋಟಿಸ್‌ ತಲುಪಿದ ನಂತರ ಲಿಖೀತ ಹೇಳಿಕೆ ಸಲ್ಲಿಸುವಂತೆ ಅವರು ನೀಡಿದ ನೋಟಿಸ್‌ ಸಮರ್ಪಕವಾಗಿ ಉತ್ತರ ನೀಡದ ಕಾರಣ ಈ ಶಿಕ್ಷಕರ ವಿರುದ್ಧ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ.

ನಾವು ಸಂಘದ ಚಟುವಟಿಕೆಗೆ ಹೋಗಿದ್ದೇವೆ ವಿನಹ ಯಾವುದೇ ರಾಜಕೀಯ ಪಕ್ಷದ ಪರವಾಗಿ ಮುಂಡಗೋಡ ಚುನಾವಣೆ ಪ್ರಚಾರಕ್ಕೆ ಹೋಗಿಲ್ಲ. ನನಗೂ ಈ ಬಗ್ಗೆ ತಹಶೀಲ್ದಾರ್‌ ನೋಟಿಸ್‌ ನೀಡಿದ್ದರು. ಅದಕ್ಕೆ ಉತ್ತರ ನೀಡಿದ್ದೇನೆ. -ಸೋಮಣ್ಣ ಮುಡಣ್ಣನವರ, ಮುಖ್ಯೋಪಾಧ್ಯಾಯ, ಆದಿಜಾಂಭವ ಪ್ರೌಢಶಾಲೆ

ಕೆಲ ಶಿಕ್ಷಕರು ರಾಜ್ಯ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ ರಾಷ್ಟೀಯ ಪಕ್ಷದ ಅಭ್ಯರ್ಥಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚಿಸುತ್ತಿರುವ ಪೋಟೋಗಳು ಸಿಕ್ಕಿವೆ. ಅಲ್ಲದೆ ಪತ್ರಿಕೆಯಲ್ಲಿ ವರದಿಯಾಗಿದೆ. ಈ ಪತ್ರಿಕೆಯಲ್ಲಿ ಹೆಸರು ಇದ್ದ ಕಾರಣ ಆ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್‌ ನೀಡಿದ್ದೇನೆ. ಇದರಲ್ಲಿ ಇಬ್ಬರು ಸರ್ಕಾರಿ ಶಿಕ್ಷಕರು ಉಳಿದು ಐದು ಅರೆ ಸರ್ಕಾರಿ ಶಿಕ್ಷಕರಾಗಿದ್ದಾರೆ. ಅವರು ನೀಡಿದ ಉತ್ತರ ಹಾಗೂ ನಮ್ಮ ಇಲಾಖೆ ವರದಿಯನ್ನು ಸೂಕ್ತ ಕ್ರಮಕ್ಕಾಗಿ ಜಿಲ್ಲಾಧಿಕಾರಿಗೆ ಕಳುಹಿಸಲಾಗಿದೆ.  -ಶ್ರೀಧರ ಮುಂದಲಮನಿ, ತಹಶೀಲ್ದಾರ್‌ ಮುಂಡಗೋಡ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.