ಯಡಳ್ಳಿ ಸೊಸೈಟಿಯಿಂದ ಅಡಿಕೆ ಕೊಯ್ಲು ತರಬೇತಿ


Team Udayavani, Dec 21, 2021, 3:08 PM IST

ಯಡಳ್ಳಿ ಸೊಸೈಟಿಯಿಂದ ಅಡಿಕೆ ಕೊಯ್ಲು ತರಬೇತಿ

ಶಿರಸಿ: ತಾಲೂಕಿನ ಯಡಳ್ಳಿಯ ಕಾನಗೋಡ ಗ್ರೂಪ್ ವಿವಿಧೋದ್ದೇಶಗಳ ಸಹಕಾರಿ ಸಂಘ ದಶಂಬರ 24 ಮತ್ತು 25ರಂದು ದೋಟಿಯ ಮೂಲಕ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ತರಬೇತಿ ಶಿಬಿರ ನಡೆಸಲಿದೆ.

ಮರ ಏರಿ ನಡೆಸುವ ಮರಗೆಲಸದಲ್ಲಿರುವ ಅವಘಡ ಸಾಧ್ಯತೆ, ಈ ಕೆಲಸ ಮಾಡುವ ಕುಶಲಕರ್ಮಿಗಳ ಅಭಾವ ಗಮನದಲ್ಲಿಟ್ಟು ಯಡಳ್ಳಿ ಸೊಸೈಟಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಕುಶಲಕರ್ಮಿ ಮಾಡಲು ಆಸಕ್ತಿ ಇರುವ ಆಯ್ದ ೮ ಮಂದಿ ಯುವಕರು ಈ ಶಿಬಿರದಲ್ಲಿ ತರಬೇತಿ ಪಡೆಯಲಿದ್ದಾರೆ.

ಮೂರೂರು ಕಲ್ಲಬ್ಬೆಯ ಹಿರಿಯ ಕೃಷಿಕ ಆರ್.ಜಿ.ಹೆಗಡೆ ಮತ್ತವರ ಸ್ನೇಹಿತರು ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ದೋಟಿ ಮೂಲಕ ಅಡಿಕೆಯ ಮರಗೆಲಸದಲ್ಲಿ ಕುಮಟಾ ತಾಲೂಕಿನ ಮೂರೂರು ಕಲ್ಲಬ್ಬೆ ದೊಡ್ಡ ಸಾಧನೆ ಮಾಡಿದೆ. ಕಳೆದೆರಡು ವರ್ಷಗಳಲ್ಲಿ ಅಲ್ಲಿ ಐವತ್ತಕ್ಕೂ ಹೆಚ್ಚು ದೋಟಿ ಜಾಬ್‌ವರ್ಕರುಗಳು ತಯಾರಾಗಿದ್ದಾರೆ. ಇವರು ತಿಂಗಳಿಗೆ ಸರಾಸರಿ 25,000 ರೂ. ಸಂಪಾದನೆ ಮಾಡುತ್ತಿದ್ದಾರೆ. ಇವರಿಗೆ ಹೆಚ್ಚುಕಡಿಮೆ ವರ್ಷಾರ್ಧ ಕಾಲ ಈ ಕೆಲಸ ಸಿಗುತ್ತಿದೆ. ಪ್ರಾಣಾಪಾಯ ಸಾಧ್ಯತೆ ಇಲ್ಲದಿರುವುದು ಮತ್ತು ಒಳ್ಳೆಯ ವರಮಾನ ಈ ಯುವಕರನ್ನು ದೋಟಿ ಮರಗೆಲಸಕ್ಕೆ ಆಕರ್ಷಿಸಿದೆ. ತರಬೇತಿಯ ಪ್ರಾಯೋಗಿಕ ಶಿಕ್ಷಣ ಯಡಳ್ಳಿ ಬೆಳ್ಳೇಕೇರಿ ಕೃಷಿಕರ ತೋಟದಲ್ಲಿ ನಡೆಯಲಿದೆ.

ತ್ಯಾಗಲಿ ಸೊಸೈಟಿ ಕಳೆದೆರಡು ವರ್ಷಗಳಿಂದ ಸ್ಥಳೀಯ ಯುವಕರಿಗೆ ದೋಟಿ ಮರಗೆಲಸ ಕಲಿಸಿ ತಾನೇ ಕೊಯ್ಲು – ಸಿಂಪಡಣೆ ನಡೆಸಿಕೊಡುತ್ತಿದೆ. ಕೃಷಿಕ ಸದಸ್ಯರ ಸಂಕಟ ನಿವಾರಣೆಯತ್ತ ಈ ಸಾಧನೆ ಒಂದು ಮೈಲಿಗಲ್ಲಾಗಿದೆ. ಈ ಸಾಧನೆಯ ಪ್ರೇರಣೆಯಿಂದ ಯಡಳ್ಳಿ ಸೊಸೈಟಿ ಈ ತರಬೇತಿ ಕೊಡಿಸಲು ಮುಂದಾಗಿದೆ.

ಅಂದು ಬೆಳಿಗ್ಗೆ 9:30ಕ್ಕೆ ನಾಣಿಕಟ್ಟ ಸೊಸೈಟಿ ಅಧ್ಯಕ್ಷ ಎನ್.ಬಿ.ಹೆಗಡೆ ಮತ್ತಿಹಳ್ಳಿ ಉದ್ಘಾಟಿಸುವರು‌. ಅತಿಥಿಗಳಾಗಿ ಮೂರೂರು ಆರ್.ಜಿ.ಹೆಗಡೆ, ಕೆಶಿನ್ಮನೆ ವಿ.ಎಸ್.ಹೆಗಡೆ ಪಾಲ್ಗೊಳ್ಳುವರು ಎಂದು ಪ್ರಕಟನೆಯಲ್ಲಿ ಸೊಸೈಟಿ ಅಧ್ಯಕ್ಷ‌ ಜಿ.ಆರ್ .ಹೆಗಡೆ ಬೆಳ್ಳೇಕೆರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.