DC Order; ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ
ಇಲ್ಲಿದೆ ಪರ್ಯಾಯ ಮಾರ್ಗ ವಿವರ...
Team Udayavani, Jun 25, 2024, 8:19 PM IST
ಶಿರಸಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಭಾರತ್ ಮಾಲಾ ಯೋಜನೆ ಅಡಿಯಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಾಗಾರಿ ನಡೆಯುತ್ತಿದ್ದು, ಬಾಕಿ ಉಳಿದ ರಸ್ತೆ ಅಭಿವೃದ್ಧಿ, ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿ ನಡೆಸಲು ಜಿಲ್ಲಾಡಳಿತವು ಅ. 15ರಿಂದ ಭಾರೀ ಗಾತ್ರದ ವಾಹನಗಳಿಗೆ ಸಂಚಾರ ನಿರ್ಬಂಧಿಸಲು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಈ ಆದೇಶವನ್ನು ಮಾಡಿದ್ದು, 27.15 ಕಿಲೋ ಮೀಟರ್ ದಿಂದ 60ರ ವರೆಗಿನ ದೂರದಲ್ಲಿ ಅಭಿವೃದ್ಧಿ ಕಾಮಗಾರಿ ಆಗಬೇಕಿದೆ. ಈ ಹಿನ್ನಲೆಯಲ್ಲಿ ಭಾರೀ ಗಾತ್ರದ ವಾಹನಗಳಿಗೆ ಬದಲಿ ಮಾರ್ಗವನ್ನು ಬಳಸಿ ಕರಾವಳಿಯಿಂದ ಶಿರಸಿಗೆ ಪ್ರಯಾಣಿಸಲು ಸೂಚಿಸಿ ಆದೇಶ ಮಾಡಲಾಗಿದೆ.
ಪರ್ಯಾಯ ಮಾರ್ಗ
ಕುಮಟಾದಿಂದ ಶಿರಸಿಗೆ ತೆರಳುವ ಲಘು ವಾಹನಗಳು ರಾಷ್ಟ್ರೀಯ ಹೆದ್ದಾರಿ- 766E ಬಳಸಿ ತೆರಳಬಹುದು. ಭಾರೀ ಗಾತ್ರದ ವಾಹನಗಳು ಸಿದ್ದಾಪುರದ ರಾಜ್ಯ ಹೆದ್ದಾರಿ-69 ಮಾರ್ಗವಾಗಿ, ಅಂಕೋಲಾ ಕಡೆಯಿಂದ ಶಿರಸಿಗೆ ತೆರಳುವ ಯಲ್ಲಾಪುರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ- 63 ಹಾಗೂ ರಾಜ್ಯ ಹೆದ್ದಾರಿ- 93 ಬಳಸಿ ತಲುಪಬಹುದು.
ಮಂಗಳೂರು, ಹೊನ್ನಾವರ ಕಡೆಯ ವಾಹನಗಳು ಮಾವಿನಗುಂಡಿ ಸಿದ್ದಾಪುರ ಮಾರ್ಗವಾಗಿ ಶಿರಸಿಗೆ ತೆರಳಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
2020ರಲ್ಲಿ ವಾಹನ ಸಂಚಾರ ನಿರ್ಬಂಧ ಮನವಿ ಇತ್ತಾದರೂ ಸಾರ್ವಜನಿಕರ ಬೇಡಿಕೆ ಅನ್ವಯ ವಾಹನಗಳ ಓಡಾಟ ಮುಂದುವರಿದಿತ್ತು. ಇದರಿಂದ ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸಲಾಗಿರಲಿಲ್ಲ ಎಂದು ಹೆದ್ದಾರಿ ನಿಗಮದ ಅಧಿಕಾರಿಗಳು ಅಕ್ಟೋಬರ್ 15ರಿಂದ 2025ರ ಫೆ. 25ರ ತನಕ ಸಂಚಾರ ನಿರ್ಬಂಧಕ್ಕೆ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದರು ಎಂಬುದು ಉಲ್ಲೇಖನೀಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್
Egret: ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!
Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ
Sirsi: ಫಂಡರಾಪುರಕ್ಕೆ ವಿಶೇಷ ರೈಲ್ವೆ: ಕಾಗೇರಿ ಮನವಿಗೆ ಕೇಂದ್ರ ಸಚಿವರ ತಕ್ಷಣ ಸ್ಪಂದನೆ
Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು
MUST WATCH
ಹೊಸ ಸೇರ್ಪಡೆ
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.