ಭೂಗತ ಜಲವಿದ್ಯುತ್‌ ಯೋಜನೆಗೆ ವಿರೋಧ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಸಾಗಿಸುವ ಯೋಜನೆ


Team Udayavani, Sep 13, 2024, 3:22 PM IST

ಭೂಗತ ಜಲವಿದ್ಯುತ್‌ ಯೋಜನೆಗೆ ವಿರೋಧ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಸಾಗಿಸುವ ಯೋಜನೆ

■ ಉದಯವಾಣಿ ಸಮಾಚಾರ
ಶಿರಸಿ: ರಾಜ್ಯ ಸರ್ಕಾರ ಶರಾವತಿ ಭೂಗತ ಜಲವಿದ್ಯುತ್‌ ಯೋಜನೆ ಕೈಬಿಡಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಡಿದ ಅವರು, ಶರಾವತಿ ನದಿ ನೀರನ್ನು ಬೆಂಗಳೂರಿಗೆ
ಸಾಗಿಸುವ ಯೋಜನೆ ಕೈಗೆತ್ತಿಕೊಳ್ಳಬಾರದು. ಶರಾವತಿ ನದಿಗೆ ಅಘನಾಶಿನಿ ನದಿ ತಿರುಗಿಸುವ ಯೋಜನೆ ರೂಪಿಸುವ ಹಿಂಬಾಗಿಲ ಪ್ರಯತ್ನ ನಡೆದಿದೆ ಎಂದೂ ಹೇಳಿದರು.

ಅಘನಾಶಿನಿ ಕಣಿವೆ ಜನತೆ ಎಚ್ಚರದಿಂದ ಇರಬೇಕು. ಹಾವೇರಿ ಜಿಲ್ಲೆಯಲ್ಲಿ ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಜಾರಿ ಮಾಡುವ ಬಗ್ಗೆ ಸಚಿವರು ಆಶ್ವಾಸನೆ ನೀಡುತ್ತಿರುವ ಸಂಗತಿ ಬಗ್ಗೆ ಬೇಡ್ತಿ ಕಣಿವೆ ಜನತೆ ಜಾಗೃತಿ ವಹಿಸಬೇಕಿದೆ. ಪ್ರಚಲಿತ ಭೂ ಕುಸಿತ, ಮೇಘಸ್ಫೋಟ, ಮಲೆನಾಡಿನ ಮಹಾಮಳೆಯಿಂದ ಪಶ್ಚಿಮ ಘಟ್ಟ ತತ್ತರಗೊಂಡಿದೆ. ಇನ್ನಷ್ಟು ಬೃಹತ್‌ ಅಭಿವೃದ್ಧಿ
ಯೋಜನೆಗಳನ್ನು ತಡೆದುಕೊಳ್ಳುವ ಧಾರಣಾ ಸಾಮರ್ಥ್ಯ ಇಲ್ಲವಾಗಿದೆ ಎಂದರು. ಕರಾವಳಿ ತಿರದ ಮೀನುಗಾರರು, ರೈತರು ಉಪ್ಪು ನೀರು ಹೆಚ್ಚಾಗಿ ಅತಂತ್ರರಾಗುವ ಪರಿಸ್ಥಿತಿ ಬರಲಿದೆ.

ಶರಾವತಿ-ಅಘನಾಶಿನಿ ಕೆಳಭಾಗಕ್ಕೆ ಸಿಹಿನೀರು ಬಾರದ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಧಾರಣಾ ಸಾಮರ್ಥ್ಯ ವರದಿ, ಶರಾವತಿ ಮತ್ತು ಅಘನಾಶಿನಿ ಕಣಿವೆ ಅಧ್ಯಯನ ವರದಿಗಳ ಶಿಫಾರಸುಗಳನ್ನು ಸರ್ಕಾರ ಅನುಷ್ಠಾನ ಮಾಡಬೇಕು ಎಂದರು.

2021 ರ ಭೂಕುಸಿತ ಅಧ್ಯಯನ ವರದಿ ಶಿಫಾರಸು ಜಾರಿ ಮಾಡಬೇಕು. ಈಗಾಗಲೇ ಈ ಘಟ್ಟಗಳು ಸಡಿಲಗೊಂಡಿವೆ. ಬೃಹತ್‌ ಯೋಜನೆಗ ಳಿಂದ ಅರಣ್ಯ, ಪರಿಸರ, ವನ್ಯಜೀವಿ, ಜೀವವೈವಿಧ್ಯ ಕಾಯಿದೆಗಳ ಉಲ್ಲಂಘನೆ ಆಗಲಿವೆ. ಜಲ, ಸಿಆರ್‌ ಜಡ್‌ ಮಾಲಿನ್ಯ ಮುಂತಾದ ಕಾನೂನು ಭಂಗ ಆಗುವ, ಶರಾವತಿ ಅಭಯಾರಣ್ಯ, ಅಘನಾಶಿನಿ ಸಂರಕ್ಷಿತ ಪ್ರದೇಶ, ಬೇಡ್ತಿ-ಶಾಲ್ಮಲಾ ಸಂರಕ್ಷಿತ ಪ್ರದೇಶಗಳು ಛಿದ್ರವಾಗಲಿದೆ ಎಂದರು.

ಕತ್ತಲೆಕಾನು, ಸಿಂಗಳೀಕ, ಕರಿಕಾನಬೆಟ್ಟ, ಯಾಣ ಶಿಖರ, ರಾಮ್‌ಸಾರ್‌ಸೈಟ್‌, ಮಿರಿಸ್ಟಿಕಾ ಸ್ಟಾಂಪ್ಸ್‌, ವಿನಾಶದ ಅಂಚಿನ ವೃಕ್ಷ ಸಮೂಹ ಸೇರಿ ಅಪಾರ ಸಸ್ಯ ವನ್ಯಜೀವಿಗಳ ಆವಾಸಕ್ಕೆ ಧಕ್ಕೆ ಬರಲಿದೆ. ಹಲವು ಅರಣ್ಯ ಬುಡಕಟ್ಟು ಜನಾಂಗದವರು ನೆಲೆ ಕಳೆದುಕೊಳ್ಳಲಿದ್ದಾರೆ ಎಂದರು.

ಮಲೆನಾಡಿಗೆ ಮಾರಕವಾದ ಬೃಹತ್‌ ಯೋಜನೆಗಳು ಬೇಡ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶು ಸಂಗೋಪನೆ ಅರಣ್ಯ ರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆ ಜಾರಿ ಮಾಡಬೇಕು ಎಂದು ರೈತರು, ಮೀನುಗಾರರು, ವನವಾಸಿಗಳು ಒತ್ತಾಯಿಸಿದ್ದಾರೆ. ಈ ಮೇಲಿನ ಎಲ್ಲ ಅಂಶಗಳ ಕುರಿತು ಜನಪ್ರತಿನಿಧಿಗಳು ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಧ್ವನಿ ಎತ್ತಬೇಕು. ಮಲೆನಾಡಿನ ಜನಪ್ರತಿನಿಧಿಗಳು ಒಂದಾಗಿ ಹೋರಾಟ ನಡೆಸಬೇಕು. ಇದಕ್ಕಾಗಿ ವಿಧಾನ ಸಭೆ ವಿಶೇಷ ಅಧಿವೇಶನ ನಡೆಸಬೇಕು ಎಂದು ಒತ್ತಾಯಿಸಿದರು.

ಅರಣ್ಯ ಸಚಿವರು ಪಶ್ಚಿಮ ಘಟ್ಟದಲ್ಲಿ ಇಂತಹ ಬೃಹತ್‌ ಯೋಜನೆಗಳ ಅರಣ್ಯ ಪರವಾನಿಗೆ ನೀಡಬಾರದು. ವನ್ಯಜೀವಿ ಪರವಾನಗಿ ನೀಡಬಾರದು. ಶರಾವತಿ ಭೂಗತ ಯೋಜನೆ ಬಗ್ಗೆ ಸಾಗರ, ಹೊನ್ನಾವರಗಳಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಸಬೇಕು. ರಾಜ್ಯದ ಅರಣ್ಯ ಸಚಿವರು ಶರಾವತಿ ನದಿ ಕಣಿವೆಗೆ ಭೇಟಿ ನೀಡಬೇಕು. ಕೇಂದ್ರ ಪರಿಸರ ಅರಣ್ಯ ಮಂತ್ರಾಲಯ ಶರಾವತಿ ಅಘನಾಶಿನಿ, ಬೇಡ್ತಿ ಕಣಿವೆ ಪರಿಸ್ಥಿತಿ ಪರಿಶೀಲನೆಗೆ ಉನ್ನತ ಅಧಿಕಾರಿಗಳ ತಂಡ ಕಳಿಸಬೇಕು ಎಂದರು. ಈ ವೇಳೆ ವಕ್ಷಲಕ್ಷ ಆಂದೋಲನದ ವಿಶ್ವನಾಥ, ಗಣಪತಿ ಬಿಸಲಕೊಪ್ಪ ಇದ್ದರು.

ಪಶ್ಚಿಮ ಘಟ್ಟದಲ್ಲಿ ಹಲವು ಪರಿಸರ ನಾಶಿ ಯೋಜನೆಯನ್ನು ಸರ್ಕಾರ ಅನುಷ್ಠಾನಗೊಳಿಸಿದ ವೇಳೆ ಹೋರಾಟದ
ಮೂಲಕ ಸ್ಥಗಿತಗೊಳಿಸಲಾಗಿದೆ.
●ಅನಂತ ಹೆಗಡೆ ಅಶೀಸರ,
ಅಧ್ಯಕ್ಷರು, ವೃಕ್ಷಲಕ್ಷ ಆಂದೋಲನ.

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.