ಸೇತುವೆ ಇಲ್ಲವೆಂದು ಊರನ್ನೇ ತೊರೆದ ಜನ!


Team Udayavani, May 9, 2019, 4:40 PM IST

nc-2

ಯಲ್ಲಾಪುರ: ತಾಲೂಕಿನ ಚಂದ್ಗುಳಿ ಗ್ರಾಪಂ ವ್ಯಾಪ್ತಿಯ ನಾಗುಂದ ಭಾಗದವರು ಸರಕಾರಕ್ಕೆ ಹಿಡಿಶಾಪ ಹಾಕುತ್ತ ಕಾಲು ಸಂಕದ ಮೇಲೆ ಓಡಾಡುತ್ತಿದ್ದಾರೆ. ಇಲ್ಲಿನ ಕೆಲ ಕುಟುಂಬಗಳು ಸೇತುವೆ ಇಲ್ಲವೆಂದು ಊರನ್ನೇ ತೊರೆದಿವೆ. ಚುನಾವಣೆ ವೇಳೆ ಕೋಟಿ ವೆಚ್ಚದ ಮಾತನಾಡುವ ಸರಕಾರಕ್ಕೆ ಈ ಜನರ ಕಷ್ಟ ಇನ್ನೂ ಕಂಡಿಲ್ಲ.

ಮಳಲಗಾಂವ್‌ ಸಮೀಪದ ನಾಗುಂದ ಬೃಹತ್‌ ಹಳ್ಳ ಮಳೆಗಾದಲ್ಲಿ ಗ್ರಾಮಸ್ಥರಿಗೆ ಆಚೆ-ಈಚೆ ಹೋಗುವುದಾದರೆ ಸಾವಿನ ನೆನಪಾಗುತ್ತದೆ. ನಾಗುಂದ ಮಜರೆಯ ಆರೆಂಟು ಮನೆಗಳು ಮಳೆಗಾಲದಲ್ಲಿ ತುಂಬಿ ಹರಿಯುವ ಹಳ್ಳದಿಂದಾಗಿ ಅತಂತ್ರಸ್ಥಿತಿ ಅನುಭವಿಸಬೇಕಾಗುತ್ತದೆ. ಸಣ್ಣ ವಸ್ತುಗಳನ್ನು ತರಲು ಕನಿಷ್ಠ 5-6 ಕಿ.ಮೀ ದೂರದ ಉಪಳೇಶ್ವರಕ್ಕೆ ಬರಬೇಕು. ಮಕ್ಕಳು ಶಾಲೆಗೆ ಬರಬೇಕೆಂದರೆ ಹಳ್ಳ ಮಳೆಗಾಲದಲ್ಲಿ ಅಡ್ಡಿಯಾಗಿ ನಿಲ್ಲುತ್ತದೆ. ಅಪಾಯಕಾರಿ ಹಳ್ಳ ದಾಟಿದರೆ ಎರಡೂವರೆ ಕಿಮೀ ಕೃಮಿಸಿ ಯಲ್ಲಾಪುರ-ಶಿರಸಿ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಮಳಲಗಾಂವ್‌ ಶಾಲೆಗೆ ಬರಬೇಕು. ಏರಿಳಿತದ ಬೆಟ್ಟ-ಗುಡ್ಡ ಕಾಡು ಕಣಿವೆಯ ದಾರಿಯಲ್ಲಿ ಬರಬೇಕು. ಕೃಷಿಯನ್ನು ನಂಬಿಕೊಂಡು ಬಂದಿರುವ ಇಲ್ಲಿನವರ ಏಕೈಕ ಬೇಡಿಕೆ ಎಂದರೆ ಹಳ್ಳಕ್ಕೆ ಸೇತುವೆ ನಿರ್ಮಿಸಿಕೊಡಿ ಎಂಬುದಾಗಿದೆ.

ಸೇತುವೆಯ ಸಲುವಾಗಿ ಮನವಿ ಕೊಟ್ಟು ಸಾಕಾಗಿದೆ. ಗ್ರಾಮಸ್ಥರು ಹಳ್ಳದಲ್ಲಿರುವ ಮರಕ್ಕೆ ಸಂಕಕಟ್ಟಿ ಹಳ್ಳದಾಟಲು ತಾತ್ಕಾಲಿಕ ಕಾಲುಸಂಕ ನಿರ್ಮಿಸಿಕೊಂಡಿದ್ದಾರೆ. ಶಿಥಿಲಗೊಂಡ ಕಾಲುಸಂಕ ಮೇಲೆ ಮಳೆಗಾಲದ ಸಂದರ್ಭದಲ್ಲಿ ತುಂಬಿ ಹರಿಯುವ ಹಳ್ಳವನ್ನು ಜೀವ ಕೈಯಲ್ಲಿ ಹಿಡಿದು ದಾಟಬೇಕಾದ ಸ್ಥಿತಿ ಇದೆ. ಶಾಲೆಯ ಮಕ್ಕಳು ಇಂತಹ ಸ್ಥಿತಿಯಲ್ಲಿ ಶಾಲೆಗೆ ಹೋಗುವುದು ದುಸ್ತರವಾಗಿದೆ. ಕಾರಣ ಸೇತುವೆ ನಿರ್ಮಿಸಿಕೊಡಬೇಕಾಗಿದೆ. ಕೆಲವರು ಈ ಹಳ್ಳದ ಕಾಲುಸಂಕದ ಹಿನ್ನೆಲೆಯಲ್ಲಿ ಜಮೀನನ್ನೇ ಬಿಟ್ಟು ಬಂದಿದ್ದಾರೆ. ಕೆಲವೇ ಜನರಿರುವ ಹಳ್ಳಿಯಾದ್ದರಿಂದ ಇವರ ಕೂಗು ಈವರೆಗೆ ಯಾರಿಗೂ ಕೇಳಿಸಿಲ್ಲ.

ಸಾಮಾಜಿಕ ಕಾರ್ಯಕರ್ತರಾದ ಎನ್‌.ಎನ್‌. ಹೆಬ್ಟಾರ ಕಳಚೆ, ಮಹಾಬಲೇಶ್ವರ ಭಟ್ಟ, ಗ್ರಾ.ಪಂ. ಸದಸ್ಯ ಎಸ್‌.ಕೆ. ಭಾಗ್ವತ್‌, ಗ್ರಾಮಸ್ಥರಾದ ನಾರಾಯಣ ಗೌಡ, ಮಂಜುನಾಥ ಭಂಡಾರಿ, ರಾಜು ಭಂಡಾರಿ ಮುಂತಾದವರು ಸ್ಥಳಿಯರಿಗೆ, ಶಾಲಾ ಮಕ್ಕಳ ಓಡಾಟದ ಅನುಕೂಲತೆಯ ಸಲುವಾಗಿ ಹಳ್ಳಕ್ಕೆ ಸೇತುವೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಹಲವಾರು ವರ್ಷಗಳಿಂದ ಗ್ರಾಮಸ್ಥರು ಕಾಲುಸಂಕ ನಿರ್ಮಿಸುವಂತೆ ಮನವಿ ಸಲ್ಲಿಸುತ್ತಿದ್ದಾರೆ. ಮನವಿಯನ್ನು ಮೇಲಾಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಒಮ್ಮೆ ಇದಕ್ಕೆ 3 ಲಕ್ಷ ರೂ. ಬಂದಿತ್ತು. ಅನುದಾನ ಸಾಲದೆಂದು ಹೇಳಲಾಗಿದ್ದು, ಹಣ ವಾಪಾಸ್‌ ಹೋಯಿತು. ಸಂಸದರ ಗಮನಕ್ಕೆ ತರಲಾಗಿ ಕಳೆದವರ್ಷ 15 ಲಕ್ಷ ಮಂಜೂರಿ ಆಗಿತ್ತು. ಆಗ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಹಣ ಸಾಲುವುದಿಲ್ಲ. ಇದಕ್ಕೆ ಕನಿಷ್ಠ 28-30 ಲಕ್ಷ ರೂ ಬೇಕಾಗಬಹುದೆಂದು ಅಂದಾಜಿಸಿದ್ದರು. ಈ ಬಗ್ಗೆ ತಾವು ಅಧಿಕಾರಿಗಳಲ್ಲಿ ಇರುವ ಹಣದಲ್ಲಿ ಫಿಲ್ಲರ್‌ ನಿರ್ಮಿಸಿ ಎರಡೂಕಡೆ ಪಿಚ್ಚಿಂಗ್‌ ನಿರ್ಮಿಸಿಕೊಟ್ಟರೆ ಜನರೇ ಮೇಲೆ ಸಂಕವಾದರೂ ಹಾಕಿಕೊಂಡು ಓಡಾಡಲು ಸಾಧ್ಯವಾಗುತ್ತದೆ ಎಂಬುದಾಗಿ ಮನವರಿಕೆ ಮಾಡಿದ್ದೇನೆ. ಆದರೆ ಬಂದ ಹಣ ಎಲ್ಲಿ ಹೋಯಿತು ಎಂಬುದು ಗೊತ್ತಿಲ್ಲ. ಅಧಿಕಾರಿಗಳು ಇತ್ತ ತಲೆ ಹಾಕಿಲ್ಲ ಕಾಮಗಾರಿ ಆಗಿಲ್ಲ ಎನ್ನುತ್ತಾರೆ ಚಂದ್ಗುಳಿ ಗ್ರಾಪಂ ಅಧ್ಯಕ್ಷ ಅಪ್ಪು ವಾಸದೇವ ಆಚಾರಿ.
ನರಸಿಂಹ ಸಾತೊಡ್ಡಿ

ಟಾಪ್ ನ್ಯೂಸ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.