ಎಂಟು ದಿನಗಳಿಂದ ಶಾಲೆಗೆ ಹೋಗದಿದ್ದರೂ ಪಾಸಿಟಿವ್ ವರದಿ; ಆರೋಗ್ಯ ಸಿಬ್ಬಂದಿ ಎಡವಟ್ಟು ಬಹಿರಂಗ


Team Udayavani, Jan 23, 2022, 11:52 AM IST

ಎಂಟು ದಿನಗಳಿಂದ ಶಾಲೆಗೆ ಹೋಗದಿದ್ದರೂ ಪಾಸಿಟಿವ್ ವರದಿ; ಆರೋಗ್ಯ ಸಿಬ್ಬಂದಿ ಎಡವಟ್ಟು ಬಹಿರಂಗ

ಮುಂಡಗೋಡ: ಶಾಲೆಗೆ ಹೋಗದಿದ್ದರೂ ವಿದ್ಯಾರ್ಥಿನಿಯ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಆಕೆಯ ಕೋವಿಡ್ ವರದಿ ಪಾಸಿಟಿವ್ ಬಂದಿದೆ ಎಂದು ಪಾಲಕರೊಬ್ಬರಿಗೆ ಆರೋಗ್ಯ ಸಿಬ್ಬಂದಿ ಹೇಳಿ ಆತಂಕ ಮೂಡಿಸಿದ ಘಟನೆ ಜರುಗಿದೆ.

ಪಟ್ಟಣದ ಹಳೂರಿನ ಆರನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು, ಕರಗಿನಕೊಪ್ಪದ ಲೊಯೋಲ ಶಾಲೆಯ ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಯುತ್ತಿದ್ದಾಳೆ. ಆಕೆ, ಜನವರಿ 12ರಿಂದ 19ರವರೆಗೆ ಅನಾರೋಗ್ಯ ಇರುವುದರಿಂದ, ಶಾಲೆಗೆ ಹೋಗಿಲ್ಲ. ಆದರೆ, ಲೊಯೋಲ ಶಾಲೆಯಲ್ಲಿ ಜನವರಿ 17ರಂದು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಿರುವ ಆರೋಗ್ಯ ಸಿಬ್ಬಂದಿ, ಅದರಲ್ಲಿ ಶಾಲೆಗೆ ಹೋಗದ ಆರನೇ ತರಗತಿಯ ವಿದ್ಯಾರ್ಥಿನಿಯ ಕೋವಿಡ್ ಪರೀಕ್ಷೆ ಮಾಡಿರುವುದಾಗಿ ಹಾಗೂ ವರದಿಯು ಪಾಸಿಟಿವ್ ಅಂತ ಬಂದಿದೆ ಎಂದು ಆಕೆಯ ಪಾಲಕರಿಗೆ ಹೇಳಿ, ಶಾಲೆಗೆ ಪಾಲಕರಿಗೆ ಬರಲು ಹೇಳಿದ್ದಾರೆ.

ಒಮ್ಮೇಲೆ ಆತಂಕಗೊಂಡ ವಿದ್ಯಾರ್ಥಿನಿಯ ತಂದೆಯು, ಇದ್ದ ಕೆಲಸವನ್ನು ಬಿಟ್ಟು, ಲೊಯೋಲ ಶಾಲೆಗೆ ದೌಡಾಯಿಸಿದ್ದಾರೆ. ಅಲ್ಲಿ ಶಿಕ್ಷಕರು, ನಿಮ್ಮ ಮಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಕೂಡಲೇ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ತಿಳಿಸಿದ್ದಾರೆ. ಇದರಿಂದ ಆತಂಕಗೊಂಡ ವಿದ್ಯಾರ್ಥಿನಿಯ ತಂದೆಯು, ನನ್ನ ಮಗಳು ಎಂಟು ದಿನಗಳಿಂದ ಶಾಲೆಗೆ ಬಂದಿಲ್ಲ. ಕೋವಿಡ್ ಪರೀಕ್ಷೆ ಯಾವಾಗ ಮಾಡಿದ್ದೀರಿ. ನನ್ನ ಮಗಳು ಇವತ್ತು ಮಾತ್ರ ಶಾಲೆಗೆ ಬಂದಿದ್ದಾಳೆ ಎಂದು ವಿವರಿಸಿದ್ದಾರೆ.

ಏನೋ ಎಡವಟ್ಟು ಆದಂತೆ ಕಂಡುಬಂದ ಶಿಕ್ಷಕರು ತರಗತಿಯ ಅಟೆಂಡೆನ್ಸ್ ನೋಡಿದಾಗ, ವಿದ್ಯಾರ್ಥಿನಿಯು ಶಾಲೆಗೆ ಬಂದಿಲ್ಲದಿರುವುದು ಕಂಡುಬಂದಿದೆ. ಆಗ, ಶಿಕ್ಷಕರು ಆರೋಗ್ಯ ಸಿಬ್ಬಂದಿಗೆ ಕರೆ ಮಾಡಿ, ಆ ವಿದ್ಯಾರ್ಥಿನಿ ಶಾಲೆಗೆ ಬಂದಿಲ್ಲ. ಆಕೆಯ ಕೋವಿಡ್ ಟೆಸ್ಟ್ ವರದಿ ಅದಲ್ಲ. ಯಾರದೋ ಮಿಸ್ ಆಗಿ ಬಂದಿರಬಹುದು ಚೆಕ್ ಮಾಡಿ ಎಂದಿದ್ದಾರೆ. ಆರೋಗ್ಯ ಸಿಬ್ಬಂದಿಯು ವಿದ್ಯಾರ್ಥಿನಿಯ ತಂದೆಗೆ ಕರೆ ಮಾಡಿ, ಬೇರೆಯವರ ವರದಿ ಆಗಿದೆ. ನಿಮ್ಮ ಮಗಳದಲ್ಲ. ಈ ವಿಷಯವನ್ನು ಯಾರಿಗೂ ಹೇಳ್ಬೇಡಿ ಎಂದು ವಿದ್ಯಾರ್ಥಿನಿಯ ತಂದೆಗೆ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಆದರೂ, ಆರೋಗ್ಯ ಸಿಬ್ಬಂದಿಯ ಎಡವಟ್ಟು ಶನಿವಾರ ಸಂಜೆ ಬಹಿರಂಗಗೊಂಡಿದೆ.

ವರದಿ ಯಾರದ್ದು? :

ಶಾಲೆಗೆ ಹೋಗದ ಆರನೇ ತರಗತಿಯ ವಿದ್ಯಾರ್ಥಿನಿಯ ಕೋವಿಡ್ ಟೆಸ್ಟ್ ವರದಿ ಪಾಸಿಟಿವ್ ಬಂದಿರುವುದು ನಿಜಕ್ಕೂ ಯಾವ ವಿದ್ಯಾರ್ಥಿಯದ್ದು? ಎಂಬುದನ್ನು ಆರೋಗ್ಯ ಇಲಾಖೆ ಸ್ಪಷ್ಟಪಡಿಸಬೇಕಿದೆ. ನಿಜವಾಗಿ ಪಾಸಿಟಿವ್ ಇದ್ದಂತ ವಿದ್ಯಾರ್ಥಿ ಗೊತ್ತಾಗದೇ, ಇಡಿ ಶಾಲೆಯಲ್ಲಿ ತಿರುಗಾಡಿದರೇ? ಯಾರು ಹೊಣೆ ಎಂದು ಪಾಲಕರು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪಾಲಕರು ಒತ್ತಾಯಿಸಿದ್ದಾರೆ.

ಬಹಿರಂಗ ಮಾಡ್ಬೇಡಿ ಎಂದ ಆರೋಗ್ಯ ಸಿಬ್ಬಂದಿ: ಆರನೇ ತರಗತಿ ವಿದ್ಯಾರ್ಥಿನಿಯ ಕೋವಿಡ್ ಪಾಸಿಟಿವ್ ವರದಿ ಸುಳ್ಳು ಆಗಿರುವುದನ್ನು ಯಾರಿಗೂ ಹೇಳದಂತೆ, ಆರೋಗ್ಯ ಸಿಬ್ಬಂದಿ ವಿದ್ಯಾರ್ಥಿನಿಯ ತಂದೆಗೆ ಎರಡೆರಡು ಬಾರಿ ಕರೆ ಮಾಡಿ ಮನವಿ ಮಾಡಿಕೊಂಡಿದ್ದಾರೆ. ಗೊತ್ತಲ್ಲದೇ ತಪ್ಪು ಆಗಿದೆ ಎನ್ನುವದಕ್ಕಿಂತ. ಬೇಜವಾಬ್ದಾರಿಯಿಂದ ವಿದ್ಯಾರ್ಥಿನಿಯ ಭವಿಷ್ಯದ ಜೊತೆ ಚೆಲ್ಲಾಟ ಆಡಿರುವ ಬಗ್ಗೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.