ವಿದ್ಯುತ್‌ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಿ  

ವಿಧವಾ-ವೃದ್ಧಾಪ್ಯ ವೇತನ, ಮನೆಗಳ ಸಕ್ರಮಾತಿ ಸಮಸ್ಯೆ ನಿವಾರಿಸಲು ತಹಶೀಲ್ದಾರ್‌ಗಳಿಗೆ ಡಿಸಿ ಆದೇಶ

Team Udayavani, Mar 30, 2022, 6:02 PM IST

office

ಕಾರವಾರ: ಸಾರ್ವಜನಿಕ ಸ್ಮಶಾನ ಭೂಮಿ ಸಮಸ್ಯೆ, ಗನ್‌ ಲೈಸೆನ್ಸ್‌ ನವೀಕರಣ, ಗೋಮಾಳ, ಪಿಂಚಣಿ, ರೇಶನ್‌ ಕಾರ್ಡ್‌, ಆಧಾರ ಕಾರ್ಡ್‌ ದೊರೆಯದೇ ಇರುವ ಮತ್ತು ಫಾರ್ಮ್ 57 ಸಮಸ್ಯೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಮೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಆದೇಶಿಸಿದರು.

ಅವರು ಡಿಸಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಏ.16 ರ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ನಡೆಸಿ ಮಾತನಾಡಿದರು. ಕಂದಾಯ ಸಚಿವರ ಗ್ರಾಮ ವಾಸ್ತವ್ಯ, ಸಚಿವರು ವಾಸ್ತವ್ಯ ಮಾಡುವ ಗ್ರಾಮಕ್ಕೆ ಮಾತ್ರ ಸೀಮಿತವಾಗಿಲ್ಲ, ಜಿಲ್ಲೆಯ ಎಲ್ಲ ಗ್ರಾಮಗಳನ್ನು ಅದು ಅಂದು ಪ್ರತಿನಿಧಿಸುತ್ತದೆ. ಆದ್ದರಿಂದ ಎಲ್ಲ ಇಲಾಖೆಗಳು ಭಾಗವಹಿಸಬೇಕು ಮತ್ತು ಆಯಾ ಇಲಾಖೆಗಳು ವಿವಿಧ ಯೋಜನೆಗಳ ಫಲಾನುಭವಿಗಳನ್ನು ತರಬೇಕು. ಇದಕ್ಕಾಗಿ ಗ್ರಾಮಗಳಲ್ಲಿ ಯಾವ ಅರ್ಹ ಫಲಾನುಭವಿಗೆ ಪಿಂಚಣಿ ಸಿಗುತ್ತಿಲ್ಲ ಮತ್ತು ನಿಂತು ಹೋಗಿದೆ, ಯಾವ ಮನೆಗೆ ವಿದ್ಯುತ್‌ ಸೌಕರ್ಯವಿಲ್ಲ ಎಂಬುದನ್ನು ಮತ್ತು ವಿಕಲಚೇತನರ ಕುರಿತು ಏ.5 ಅಥವಾ 6 ರೊಳಗೆ ಸಮೀಕ್ಷೆ ಮಾಡಿ, ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯವನ್ನು ಸಚಿವರಿಂದ ಕೊಡಿಸುವ ಕಾರ್ಯವಾಗಬೇಕು ಎಂದರು.

ಜನ ಸೇವೆಗಳಿಗೆ ಸಂಬಂಧಿಸಿದ ಗ್ರಾಮ ಒನ್‌ ಸೆಂಟರ್‌ ಮುಖ್ಯಮಂತ್ರಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ 221 ಕೇಂದ್ರಗಳು ಕೆಲಸ ಮಾಡುತ್ತಿದ್ದು, ಕೇವಲ 15 ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಸ್ವೀಕೃತವಾಗಿರುತ್ತವೆ. ನಿರೀಕ್ಷೆ ಮಟ್ಟದಲ್ಲಿ ಅರ್ಜಿಗಳು ಬಂದಿಲ್ಲ, ಯಾವ ಇಲಾಖೆಯ ಯಾವ ಯಾವ ಸೇವೆಯನ್ನು ಗ್ರಾಮ ಒನ್‌ ಸೆಂಟರ ಮೂಲಕ ಅರ್ಜಿ ಸಲ್ಲಿಸಬಹುದು ಎಂಬುದನ್ನು ಪ್ರಚಾರಗೊಳಿಸಿ, ಗ್ರಾಮದ ಪ್ರತಿಯೊಬ್ಬರಿಗೂ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ಒದಗಿಸುವಂತಾಗಬೇಕು. ಇದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು. ಇನ್ನುಳಿದಂತೆ ಅಂದಿನ ಕಾರ್ಯಕ್ರಮವನ್ನು ಅತ್ಯಂತ ಸುವ್ಯವಸ್ಥಿತವಾಗಿ ಆಯೋಜಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿ, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅವರು ಸಲಹೆ ನೀಡಿದರು.

ಜಿಪಂ ಸಿಇಒ ಪ್ರಿಯಾಂಕಾ, ಎಡಿಸಿ ರಾಜು ಮೊಗವೀರ, ಎಸಿ ಜಯಲಕ್ಷ್ಮೀ ರಾಯಕೋಡ, ತಹಶೀಲ್ದಾರ್‌ ಎನ್‌.ಎಫ್‌. ನೊರೋನಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.