ಕಸ್ತೂರಿರಂಗನ್‌ ವರದಿ ಜಾರಿ ವಿರೋಧಿಸಿ ಪ್ರತಿಭಟನೆ

ವರದಿ ಜಾರಿಯಿಂದ ಜಿಲ್ಲೆಯ ಜನರಿಗೆ ತೀವೃ ತೊಂದರೆ ; ಸರಕಾರ ಶೀಘ್ರ ಆಕ್ಷೇಪಣಾ ಅರ್ಜಿ ಸಲ್ಲಿಸಲಿ: ದೇಶಪಾಂಡೆ

Team Udayavani, Jul 26, 2022, 5:03 PM IST

17

ಜೋಯಿಡಾ: ಕಸ್ತೂರಿ ರಂಗನ್‌ ವರದಿ ಬಹಳಷ್ಟು ಲೋಪದೋಷಗಳಿಂದ ಕೂಡಿದ್ದು, ವರದಿ ಜಾರಿಯಿಂದ ಜಿಲ್ಲೆಯ ಜನ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಎಂದು ಜೋಯಿಡಾ ಶಾಸಕ ಆರ್‌.ವಿ.ದೇಶಪಾಂಡೆ ಹೇಳಿದರು.

ಕಸ್ತೂರಿ ರಂಗನ್‌ ವರದಿ ಜಾರಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯವೂ ಸೇರಿದಂತೆ ದೇಶದ 6 ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟದ 56823 ಚದರ ಕಿ.ಮೀ ವಿಸ್ತೀರ್ಣದ ಪ್ರದೇಶವನ್ನು ಸುಪ್ರೀಂ ಕೋರ್ಟನ ಆದೇಶದನ್ವಯ ಪರಿಸರ ಸೂಕ್ಷ ವಲಯ ಎಂದು ಗುರುತಿಸಿ ಕೇಂದ್ರ ಸರ್ಕಾರ ಜು. 6 ರಂದು ಕರಡು ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 3 ಬಾರಿ ಅಧಿಸೂಚನೆಯನ್ನು ಹೊರಡಿಸಿದ್ದ ಕೇಂದ್ರದ ಈ ಪ್ರಯತ್ನಕ್ಕೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಲೇ ಇದೆ. ಈಗ ಇನ್ನೊಮ್ಮೆ ಅಧಿಸೂಚನೆ ಹೊರಡಿಸಿರುವುದು ರಾಜ್ಯದ ಜನತೆಗೆ ಆತಂಕವನ್ನು ತಂದೊಡ್ಡಿದೆ ಎಂದರು.

ಪಶ್ಚಿಮ ಘಟ್ಟದ ಜೀವ ವೈವಿಧ್ಯ ರಕ್ಷಣೆ ಮತ್ತು ಸಂರಕ್ಷಣೆ ಉದ್ದೇಶದಿಂದ ಕೇಂದ್ರ ಪರಿಸರ, ಅರಣ್ಯ ಸಚಿವಾಲಯವು ಕಸ್ತೂರಿ ರಂಗನ್‌ ವರದಿಯಂತೆ ಪರಿಸರ ಸೂಕ್ಷ್ಮ ವಲಯವೆಂದು ಗುರುತಿಸಲಾದ ಪ್ರದೇಶದಲ್ಲಿ ನಮ್ಮ ರಾಜ್ಯದ 10 ಜಿಲ್ಲೆಗಳ 1112 ಗ್ರಾಮಗಳನ್ನು ಮತ್ತು ನಮ್ಮ ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳಿಂದ 704 ಗ್ರಾಮಗಳು ಸೇರ್ಪಡೆಗೊಂಡಿವೆ. ಅತಿ ಹೆಚ್ಚು ಭೂಪ್ರದೇಶ ಸುಮಾರು 206681 ಚದರ ಕಿ.ಮೀ ವಿಸ್ತೀರ್ಣ ಪ್ರದೇಶವು ನಮ್ಮ ರಾಜ್ಯದ ಭಾಗವೇ ಆಗಿದೆ ಎಂದರು.

ಪಶ್ಚಿಮ ಘಟ್ಟಗಳಿಂದಲೇ ಆವರಿಸಿರುವ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ, ವಿಶೇಷವಾಗಿ ಜೋಯಿಡಾ ತಾಲೂಕಿನಲ್ಲಿ ಈಗಾಗಲೇ ಹಲವು ಯೋಜನೆಗಳು, ಅಭಯಾರಣ್ಯಗಳು ಇದ್ದು, ಈ ಯೋಜನೆಗಳಿಂದ ಇಲ್ಲಿಯೇ ಬದುಕನ್ನು ಕಟ್ಟಕೊಂಡ ಜನಸಾಮಾನ್ಯರು, ನಿರಾಶ್ರಿತರಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ 96 ಗ್ರಾಮಗಳು ಪರಿಸರ ಸೂಕ್ಷ್ಮ ವಲಯದಲ್ಲಿ ಗುರುತಿಸಿಕೊಂಡಿದ್ದು, ತಾಲೂಕಿನ ಕೇಂದ್ರ ಸ್ಥಾನವೂ ಸೇರಿದಂತೆ ಶೇ.90 ರಷ್ಟು ಹೆಚ್ಚಿನ ಪ್ರದೇಶ ಈ ವಲಯದ ವ್ಯಾಪ್ತಿಯಲ್ಲಿ ಬರುತ್ತದೆ.

ಇದರಿಂದ ತಾಲೂಕಿನಲ್ಲಿ ಕೈಗೊಳ್ಳುವ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಆತಂಕ ಎದುರಾಗಿದೆ. ತಾಲೂಕಿನಲ್ಲಿ ಕಾಡು ಉಳಿದಿರುವುದು ಇಲ್ಲಿಯ ಜನರಿಂದ. ಆದರೆ ಈ ವರದಿ ಜಾರಿಯಾದಲ್ಲಿ ತಾಲೂಕಿನ ಮುಗ್ಧ ಜನ ತೊಂದರೆ ಅನುಭವಿಸಬೇಕಾಗಿದೆ. ಘಟ್ಟಗಳ ಪ್ರದೇಶದ ಅರಣ್ಯ, ಜೀವಸಂಕುಲಗಳ ಸಂರಕ್ಷಣೆ ಮತ್ತು ಪರಿಸರದ ಸಮತೋಲನದ ಜೊತೆಗೆ ಅಭಿವೃದ್ಧಿಯೂ ಆಗಬೇಕು ಎಂದರು.

ಆದ್ದರಿಂದ ರಾಜ್ಯ ಸರ್ಕಾರ ಈ ಯೋಜನೆ ಜಾರಿ ಬಗ್ಗೆ ಶೀಘ್ರ ಆಕ್ಷೇಪಣಾ ಅರ್ಜಿ ಸಲ್ಲಿಸಿ ಪಶ್ಚಿಮ ಘಟ್ಟದಲ್ಲಿ ವಾಸಿಸುವವರ ಹಿತರಕ್ಷಣೆಗೆ ಮುಂದಾಗಬೇಕು. ಪರಿಸರ, ಅರಣ್ಯ ಸಂರಕ್ಷಣೆ, ಜೀವ ವೈವಿಧ್ಯತೆಗಳ ಸಂರಕ್ಷಣೆ ಆದ್ಯತೆಯ ಜೊತೆಗೆ ಇವುಗಳೊಂದಿಗೆ ಸಂಬಂಧ ಬೆಳೆದುಕೊಂಡಿರುವ ಜನರ ಹಿತರಕ್ಷಣೆ ಆಗಬೇಕು. ಸರಕಾರ ನಿಗದಿತ ಅವಧಿಯೊಳಗೆ ಆಕ್ಷೇಪಣಾ ಅರ್ಜಿ ಸಲ್ಲಿಸಬೇಕಾಗಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಕರಡು ಪ್ರಕಟವಾದ 60 ದಿನಗಳಲ್ಲಿ ಆಕ್ಷೇಪ ಅರ್ಜಿ ಸಲ್ಲಿಸುವ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಪಕ್ಷದ ಸದಾನಂದ ದಬ್ಗಾರ, ರಮೇಶನಾಯ್ಕ, ಸಂಜಯ ಹಣಬರ, ಮಂಗೇಶ ಕಾಮತ್‌,ದತ್ತಾ ನಾಯ್ಕ, ದಿಗಂಬರ ದೇಸಾಯಿ, ಅರುಣ ಭಗವತಿರಾಜ್‌, ಅಜಿತ್‌ ತೋರವತ್‌,ವಿಜಯ ಪಂಡಿತ, ವಿನಯ ದೇಸಾಯಿ, ಕೃಷ್ಣಾ ದೇಸಾಯಿ, ನಂದು ತೇಲಿ, ಸೇರಿದಂತೆ ಸಾವಿರಾರು ಜನ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.