ವೇತನ ಪರಿಷ್ಕರಣೆ ಆಗ್ರಹಿಸಿ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆ ಕಾರ್ಮಿಕರಿಂದ ಪ್ರತಿಭಟನೆ


Team Udayavani, Aug 16, 2021, 9:36 PM IST

fgrdtr

ದಾಂಡೇಲಿ : ವೇತನ ಪರಿಷ್ಕರಣೆ ಒಪ್ಪಂದಕ್ಕೆ ಆಗ್ರಹಿಸಿ ನಗರದ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಕಾರ್ಮಿಕರು ಇದೇ ಮೊದಲ ಬಾರಿಗೆ ಕಾರ್ಖಾನೆಯ ಕೇಂದ್ರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ವೇತನ ಪರಿಷ್ಕರಣೆ ಒಪ್ಪಂದಕ್ಕಾಗಿ ಕಳೆದ 33 ತಿಂಗಳುಗಳಿಂದ ಚಾತಕ ಪಕ್ಷಿಯಂತೆ ಕಾಯುತ್ತಿದ್ದೇವೆ. ಆದರೆ ಕಾರ್ಖಾನೆಯ ಆಡಳಿತ ಮಂಡಳಿ ಕುಂಟು ನೆಪ ಹೇಳಿ ವೇತನ ಪರಿಷ್ಕರಣೆಗೆ ಕಾಲಹರಣ ಮಾಡುತ್ತಿದೆ. ನ್ಯಾಯೋಚಿತ ಹಾಗೂ ಅರ್ಹ ರೀತಿಯಲ್ಲಿ ವೇತನ ಪರಿಷ್ಕರಣೆಯಾಗಬೇಕೆಂದು ಆಗ್ರಹಿಸಿ ಕಾರ್ಮಿಕರೇ ಸ್ವಯಂ ನೇತೃತ್ವ ವಹಿಸಿ ಪ್ರತಿಭಟನೆಗೆ ಇಳಿದಿದ್ದಾರೆ.

ದೈನಂದಿನ ಪಾಳಿ ಪ್ರಕಾರ ಕೆಲಸ ಮುಗಿಸಿ ಹೊರಬಂದ ಕಾರ್ಮಿಕರು ಕಾರ್ಖಾನೆಯ ಮುಖ್ಯ ಗೇಟಿನಿಂದ ಹೊರಬಂದು ಕೇಂದ್ರ ಕಚೇರಿಯವರೆಗೆ ಮೆರವಣಿಗೆಯ ಮೂಲಕ ಸಾಗಿ ಕೇಂದ್ರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಜೊತೆ ಸಭೆ ನಡೆಸಿ ಪ್ರತಿಭಟನಾಕಾರರಲ್ಲಿಗೆ ಬಂದ ಜಂಟಿ ಸಂಧಾನ ಸಮಿತಿಯ ಸದಸ್ಯರುಗಳಾದ ಸಿ.ವಿ.ಲೋಕೇಶ, ಉದಯ ನಾಯ್ಕ, ಬಿ.ಡಿ.ಹಿರೇಮಠ ಮತ್ತು ಶ್ರೀನಿವಾಸ ಘೋಟ್ನೇಕರ ಅವರು, ಕಾರ್ಖಾನೆಯ ಆಡಳಿತ ಮಂಡಳಿ ರೂ:3300/- ರಂತೆ ವೇತನ ಪರಿಷ್ಕರಣೆ ಮಾಡಲಾಗುವುದು ಎಂದಿದೆ. ಆದರೆ, ನಾವದಕ್ಕೆ ಒಪ್ಪಿಲ್ಲ. ನಮ್ಮ ಬೇಡಿಕೆಯಾನುಸಾರವಾಗಿ ವೇತನ ಪರಿಷ್ಕರಣೆಯಾಗಬೇಕೆಂದು ಒತ್ತಾಯಿಸಿ ಹೊರಬಂದಿದ್ದೇವೆ. ಈ ಬಗ್ಗೆ ನಾಳೆಯೆ ಜಂಟಿ ಸಂಧಾನ ಸಮಿತಿಯ ಸದಸ್ಯರೆಲ್ಲರೂ ಬೆಳಗಾವಿಯಲ್ಲಿರುವ ಉಪ ಕಾರ್ಮಿಕ ಆಯುಕ್ತರ ಬಳಿ ಹೋಗಿ ಚರ್ಚೆ ನಡೆಸಿ, ನ್ಯಾಯೋಚಿತವಾಗಿ ವೇತನ ಒಪ್ಪಂದ ಪರಿಷ್ಕರಣೆಯನ್ನು ಮಾಡಲು ಕಾಗದ ಕಾರ್ಖಾನೆಯ ಆಡಳಿತ ಮಂಡಳಿಗೆ ಕಾನೂನಾತ್ಮಕವಾಗಿ ನಿರ್ದೇಶಿಸಬೇಕೆಂದು ಒತ್ತಾಯಿಸುತ್ತೇವೆ ಎಂದರು.

ಜಂಟಿ ಸಂಧಾನ ಸಮಿತಿಯ ಸದಸ್ಯರುಗಳ ಮಾತಿನ ನಂತರವೂ ಕಾರ್ಮಿಕರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ಕೋವಿಡ್ ಸಂದರ್ಭದಲ್ಲಿಯೂ ಜೀವಭಯ ಬಿಟ್ಟು ಕೆಲಸ ನಿರ್ವಹಿಸಿದ್ದೇವೆ. ಕಾರ್ಖಾನೆ ಲಾಭದಲ್ಲಿದೆ. ಬೇಡದಿರುವುದಕ್ಕೆ ಬೇಕಾದಷ್ಟು ಖರ್ಚು ಮಾಡುತ್ತದೆ. ಆದರೆ ಕಾರ್ಖಾನೆಗಾಗಿ ಜೀವದಂಡಿಸುವ ಕಾರ್ಮಿಕರಿಗೆ ಕಡಿಮೆ ವೇತನ ನೀಡಿ ದುಡಿಸಿಕೊಳ್ಳಲಾಗುತ್ತದೆ. ನಮ್ಮ ಶ್ರಮಕ್ಕೆ ತಕ್ಕ ವೇತನ ಕೊಡಲೆಬೇಕು. ಬೇಡಿಕೆಯಂತೆ ವೇತನ ಪರಿಷ್ಕರಣೆಯಾಗಬೇಕೆಂದು ಪಟ್ಟು ಹಿಡಿದು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರ ಹಾಗೂ ಗ್ರಾಮೀಣ ಠಾಣೆಯ ಪಿಎಸೈಗಳು, ಪೊಲೀಸರು ಪ್ರತಿಭಟನಾ ಸ್ಥಳದಲ್ಲಿ ಹಾಜರಿದ್ದು, ಮುಂಜಾಗೃತೆ ವಹಿಸಿದ್ದಾರೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.