ರಾತ್ರೋರಾತ್ರಿ ಪೊಲೀಸ್‌ ಠಾಣೆಗೆ ಮುತ್ತಿಗೆ

ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ಆಶ್ಲೀಲವಾಗಿ ಚಿತ್ರಿಸಿ ಇನಸ್ಟಾಗ್ರಾಂನಲ್ಲಿ ಹಾಕಿದಕ್ಕೆ ಆಕ್ರೋಶ

Team Udayavani, Mar 27, 2022, 5:12 PM IST

20

ಹಳಿಯಾಳ: ಅನ್ಯಕೋಮಿನ ಯುವಕನಿಂದ ಶುಕ್ರವಾರ ಸಾಯಂಕಾಲ ಛತ್ರಪತಿ ಶಿವಾಜಿ ಮಹಾರಾಜರ ಚಿತ್ರವನ್ನು ಅಶ್ಲೀಲವಾಗಿ ಆ್ಯಡಿಟ್‌ ಮಾಡಿ ಸಾಮಾಜಿಕ ಜಾಲತಾಣ ಇನಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪಟ್ಟಣ ಪೋಲಿಸ್‌ ಠಾಣೆ ಎದುರು ಮಧ್ಯರಾತ್ರಿ ಪ್ರತಿಭಟನೆ ನಡೆದಿದೆ.

ಪಟ್ಟಣದ ದೇಶಪಾಂಡೆ ಆಶ್ರಯ ನಗರ ನಿವಾಸಿ, ಅನ್ಯಕೊಮಿನ ಅಪ್ರಾಪ್ತ ವಯಸ್ಸಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಈ ದುಷ್ಕೃತ್ಯ ನಡೆಸಿದ್ದಾನೆ ಎಂದು ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಶುಕ್ರವಾರ ತಡರಾತ್ರಿ ಬೆಳಕಿಗೆ ಬರುತ್ತಿದ್ದಂತೆ ಪೋಲಿಸ್‌ ಠಾಣೆ ಎದುರು ಹಾಗೂ ಶಿವಾಜಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು, ವಿಶ್ವ ಹಿಂದೂ ಪರಿಷತ್‌, ಭಜಂಗದಳ, ಶಿವಸೇನೆ, ಶಿವಪ್ರತಿಷ್ಠಾನ, ಜೀಜಾಮಾತಾ ಮಹಿಳಾ ಸಂಘಟನೆ, ಮರಾಠಾ ಸಂಘಟನೆಗಳವರು ಜಮಾಯಿಸಿ ಕೃತ್ಯ ಖಂಡಿಸಿ ಯುವಕನನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಮಧ್ಯರಾತ್ರಿವರೆಗೆ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಸುನೀಲ್‌ ಹೆಗಡೆ ಮಾತನಾಡಿ, ಅನ್ಯಕೊಮಿನ ಯುವಕರಿಂದ ಮೇಲಿಂದ ಮೇಲೆ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಸಮಾಜದಲ್ಲಿ ಶಾಂತಿ ಕದಡಲೆಂದೇ ಈ ರೀತಿ ಕೃತ್ಯ ಎಸಗಲಾಗುತ್ತಿದೆ ಎಂಬ ಸಂಶಯ ಮೂಡುತ್ತಿದೆ ಹಾಗೂ ಎಲ್ಲ ಸಮಯದಲ್ಲಿ ಹಿಂದೂಗಳ ಸಹನೆ ಪರೀಕ್ಷಿಸಲಾಗುತ್ತಿದ್ದು, ಇನ್ನೂ ಮುಂದೆ ಇಂತಹ ಘಟನೆ ನಡೆದರೆ ಹಿಂದೂಗಳು ಠಾಣೆಗೆ ಬರುವುದಿಲ್ಲ, ಬದಲಾಗಿ ಕೃತ್ಯ ಎಸಗಿದವರ ಮನೆಗೆ ತೆರಳಬೇಕಾಗುತ್ತದೆ.

ಆ ಸಂದರ್ಭದಲ್ಲಿ ಏನಾದರೂ ಅನಾಹುತಗಳಾದರೆ ಅದಕ್ಕೆ ಸಮಾಜ ಹಾಗೂ ನಾವು ಜವಾಬ್ದಾರರಲ್ಲ ಎಂದು ಖಡಕ್‌ ಎಚ್ಚರಿಕೆ ನೀಡಿದರು. ಪ್ರತಿಭಟನಾಕಾರರ ಮನವೊಲಿಸುವುದೇ ಪೊಲೀಸರಿಗೆ ದೊಡ್ಡ ತಲೆನೊವಾಗಿ ಪರಿಣಮಿಸಿತು. ಬಳಿಕ ಮಾಜಿ ಶಾಸಕರು ಶನಿವಾರ ಸಾಯಂಕಾಲದ ಒಳಗೆ ಯುವಕನ ಬಂಧನವಾಗದಿದ್ದರೆ ಪಟ್ಟಣದಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು ಹಾಗೂ ಪೋಲಿಸರು ಕೂಡ ಬಂಧಿಸುವ ಭರಸವೆ ನೀಡಿದ್ದರಿಂದ ಪ್ರತಿಭಟನಾಕಾರರು ಪ್ರತಿಭಟನೆ ಸ್ಥಗಿತಗೊಳಿಸಿದರು.

ಪ್ರಮುಖರಾದ ಚೂಡಪ್ಪ ಬೋಬಾಟಿ, ವಿಲಾಸ ಯಡವಿ, ಸಂತೋಷ ಘಟಕಾಂಬಳೆ, ಶಾಂತಾ ಹಿರೆಕರ, ಚಂದ್ರಕಾಂತ ಕಮ್ಮಾರ, ಮಂಗಲಾ ಕಶೀಲಕರ, ತಾನಾಜಿ ಪಟ್ಟೇಕರ, ಸರ್ವೆàಶ ಖಾಂದೊಳಕರ, ಪ್ರವೀಣ ನಾಯ್ಕೋಜಿ, ರಾಕೇಶ ವಾಣಿ, ರಾಘವೇಂದ್ರ ಆನೆಗುಂದಿ, ನಾಗರಾಜ ಪಾಟೀಲ್‌, ವಿಜಯ ಬೋಬಾಟಿ, ಗಣಪತಿ ಕುಂದೆಕರ ಮೊದಲಾದವರು ಇದ್ದರು.

ಅಪ್ರಾಪ್ತ ಆಪಾದಿತ ಪೊಲೀಸ್‌ ವಶಕ್ಕೆ

ಹಳಿಯಾಳ: ಅನ್ಯಕೋಮಿನ ಯುವಕನಿಂದ ಛತ್ರಪತಿ ಶಿವಾಜಿ ಚಿತ್ರವನ್ನು ಆಶ್ಲೀಲವಾಗಿ ಪೋಸ್ಟ್‌ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಅಪ್ರಾಪ್ತ ವಯಸ್ಸಿನ ಆಪಾದಿತನನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ಪಟ್ಟಣದ ದೇಶಪಾಂಡೆ ಆಶ್ರಯ ನಗರ ನಿವಾಸಿ ಯುವಕನನ್ನು ಮಹಾರಾಷ್ಟ್ರದಿಂದ ವಶಕ್ಕೆ ಪಡೆದಿರುವ ಹಳಿಯಾಳ ಪೊಲೀಸರು, ವಿಚಾರಣೆ ನಡೆಸುವ ವೇಳೆ ತಾನು ಮೊಬೈಲ್‌ ರಿಪೇರಿಗೆ ಕೊಟ್ಟಿದ್ದೆ, ಪೋಸ್ಟ್‌ ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾನೆ. ಯುವಕನ ಹೇಳಿಕೆಯ ನೈಜತೆ ಸಾಬೀತು ಪಡಿಸಲು ಎಫ್‌ಎಸ್‌ ಎಲ್‌ ರಿಪೋರ್ಟ್‌ ಮೂಲಕ ಯುಆರ್‌ಎಲ್‌ ಪರೀಕ್ಷೆಗೆ ಪೊಲೀಸರು ಕಳುಹಿಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಸಿಂಹಪಾಲು ಮರಾಠಾ ಸಮುದಾಯವನ್ನು ಹೊಂದಿರುವ ಹಳಿಯಾಳದಲ್ಲಿ ಶಿವಾಜಿ ಮಹಾರಾಜರು ಆರಾಧ್ಯ ದೈವವೇ ಸರಿ. ಇಂತಹ ಕ್ಷೇತ್ರದಲ್ಲಿ ಅನ್ಯಕೋಮಿನ ಯುವಕರಿಂದ ಮೇಲಿಂದ ಮೇಲೆ ಇಂತಹ ಘಟನೆ ನಡೆಯುತ್ತಿರುವುದು ಹಿಂದೂಗಳನ್ನು ಕೆರಳಿಸಿದೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.