Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ
Team Udayavani, Sep 14, 2024, 9:26 AM IST
ದಾಂಡೇಲಿ : ನಗರದ ಲೆನಿನ್ ರಸ್ತೆಯ ಕೆಪಿಸಿ ವಸತಿಗೃಹ ಪ್ರದೇಶ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಿಂಡೊಂದು ಬಾಲಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.
ಬಾಲಕ ಸ್ಥಳಿಯ ನಿವಾಸಿ ಯೋಗೇಶ್ ಕುಮಾರ್ ಅವರ ಮಗನಾದ ಎಂಟು ವರ್ಷ ವಯಸ್ಸಿನ ಓಂವೀರ್ ಯೋಗೇಶ್ ಕುಮಾರ್ ಎಂಬಾತನಾಗಿದ್ದಾನೆ. ಈತನು ಮನೆಯ ಹತ್ತಿರದ ಅಂಗಡಿಗೆ ಹೋಗಿ ಹಿಂದಿರುಗಿ ಬರುತ್ತಿರುವ ಸಂದರ್ಭದಲ್ಲಿ ಏಕಾಏಕಿ ಬೀದಿನಾಯಿಗಳು ದಾಳಿ ಮಾಡಿವೆ. ಈ ಸಂದರ್ಭದಲ್ಲಿ ಸ್ಥಳೀಯರು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಬೀದಿ ನಾಯಿಗಳು ಬಾಲಕನಿಗೆ ಮೂರ್ನಾಲ್ಕು ಕಡೆ ಕಚ್ಚಿದ್ದು, ತಕ್ಷಣವೇ ಆತನನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಕಳೆದ ಮೂರ್ನಾಲ್ಕು ತಿಂಗಳಿನಿಂದ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿ ಇದ್ದು, ಪ್ರತಿ ರಸ್ತೆಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಹಿಂಡುಗಟ್ಟಲೆ ಬೀದಿ ನಾಯಿಗಳಿದ್ದು, ಭಯದ ವಾತಾವರಣವನ್ನು ನಿರ್ಮಿಸುತ್ತಿದೆ. ಇದನ್ನು ನಿಯಂತ್ರಿಸದೇ ಇದ್ದಲ್ಲಿ ಮುಂದೆ ಬಹುದೊಡ್ಡ ಅನಾಹುತ ನಡೆಯಬಹುದಾದ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಬೀದಿ ನಾಯಿಗಳ ನಿಯಂತ್ರಣಕ್ಕೆ ತ್ವರಿತ ಕ್ರಮವನ್ನು ಕೈಗೊಳ್ಳಬೇಕೆಂದು ಪ್ರವಾಸೋದ್ಯಮಿ ರವಿಕುಮಾರ್ ನಾಯಕ ಮತ್ತು ಮುಖಂಡರಾದ ರವೀಂದ್ರ ಶಾ ಅವರು ಮಾಧ್ಯಮದ ಮೂಲಕ ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಇದನ್ನೂ ಓದಿ: US Election: ಬಾಹ್ಯಾಕಾಶದಿಂದಲೇ ಮತ ಚಲಾಯಿಸಲಿದ್ದಾರಂತೆ ಸುನೀತಾ ವಿಲಿಯಮ್ಸ್ ಮತ್ತು ಬುಚ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.