![Sharad pawar (2)](https://www.udayavani.com/wp-content/uploads/2024/07/Sharad-pawar-2-415x244.jpg)
Pune ಸ್ಫೋಟ ಪ್ರಕರಣ: ಭಟ್ಕಳದ ಯುವಕನ ಮನೆಗೆ ನೋಟಿಸ್ ಅಂಟಿಸಿದ ಎಟಿಎಸ್
Team Udayavani, Jun 21, 2024, 8:26 PM IST
![police crime](https://www.udayavani.com/wp-content/uploads/2024/06/police-crime-8-620x382.jpg)
ಭಟ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ನಡೆಸಿದ ಉಗ್ರ ಚಟುವಟಿಕೆಗೆ ಸಂಬಂಧಿಸಿ ಆರೋಪಿ ಭಟ್ಕಳ ನವಾಯತ ಕಾಲೋನಿಯ ಯುವಕನಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಎಟಿಎಸ್ ತಂಡ ಮನೆಗೆ ನೋಟೀಸು ಅಂಟಿಸಿರುವ ಕುರಿತು ತಿಳಿದು ಬಂದಿದೆ.
ಮೂಲತಃ ಭಟ್ಕಳ ನವಾಯತ್ ಕಾಲೋನಿ ಹಾಜಿ ಮಂಜಿಲ್ ನಿವಾಸಿಯಾಗಿರುವ ಅಬ್ದುಲ್ ಕಾದಿರ್ ಸುಲ್ತಾನ ಅಲಿಯಾಸ್ ಮೌಲಾನಾ ಸುಲ್ತಾನ ಎನ್ನುವ ಶಂಕಿನ ಮೇಲೆ ಪುಣೆಯಲ್ಲಿ ಕಾನೂನು ಬಾಹಿರ ಕೃತ್ಯ ಎಸಗಿದ್ದಕ್ಕಾಗಿ ಕಲಂ 10 ಮತ್ತು 13 ರನ್ವಯ ಪ್ರಕರಣ ದಾಖಲಾಗಿದ್ದು ಪುಣೆಯ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜೂ.21 ಕ್ಕೆ ವಿಚಾರಣೆಗೆ ಇಡಲಾಗಿದ್ದು ಹಾಜರಾಗುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.
ಭಟ್ಕದಲ್ಲಿ ಶೋಧ ನಡೆಸಿದ ತಂಡ ಅಂತಿಮವಾಗಿ ಆತನ ಮನೆಗೆ ನೋಟೀಸು ಅಂಟಿಸಿ ಹೋಗಿದ್ದಾಗಿ ತಿಳಿದು ಬಂದಿದ್ದು ಜೂನ್ 6 ನೇ ತಾರೀಕನ್ನು ನಮೂದಿಸಿರುವ ನೋಟೀಸ್ ಅಂಟಿಸಿದ್ದಾರೆ. ಭಟ್ಕಳಕ್ಕೆ ಮಹಾರಾಷ್ಟ್ರ ಎಟಿಎಸ್ ತಂಡ ಆತನ ಮನೆಯನ್ನು ಹುಡುಕಿಕೊಂಡು ಹೋಗಿದ್ದು ಆತ ಮನೆಯಲ್ಲಿ ಇಲ್ಲದ ಕಾರಣ ನೋಟೀಸು ಅಂಟಿಸಿ ಸಾರ್ವಜನಿಕವಾಗಿ ಜಾಹೀರ ಮಾಡಿ ತೆರಳಿದ್ದಾರೆ ಎನ್ನಲಾಗಿದೆ.
2008 ರಲ್ಲಿ ಪುಣೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದಲ್ಲಿ ಆರೋಪಿಯಾಗಿರುವ ಅಬ್ದುಲ್ ಕಾದಿರ್ ಸುಲ್ತಾನ ಅಲಿಯಾಸ್ ಮೌಲಾನಾ ಸುಲ್ತಾನ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದಾನೆ.
ಟಾಪ್ ನ್ಯೂಸ್
![Sharad pawar (2)](https://www.udayavani.com/wp-content/uploads/2024/07/Sharad-pawar-2-415x244.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![9-sirsi](https://www.udayavani.com/wp-content/uploads/2024/06/9-sirsi-150x90.jpg)
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
![6-honnavar](https://www.udayavani.com/wp-content/uploads/2024/06/6-honnavar-150x90.jpg)
Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್
![Egret ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!](https://www.udayavani.com/wp-content/uploads/2024/06/egret-150x100.jpg)
Egret: ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!
![1-weqwwe](https://www.udayavani.com/wp-content/uploads/2024/06/1-weqwwe-150x79.jpg)
Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ
![ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ](https://www.udayavani.com/wp-content/uploads/2024/06/DC-UTTAR-KARNATAKA-150x95.jpg)
DC Order; ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.