![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 2, 2022, 3:41 PM IST
ಸಾಗರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಪ್ರವಾಸಿ ಮಂದಿರದ ಎದುರು ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಪೇಪರ್ ಹಂಚಲು ಬರುತ್ತಿದ್ದ ಗಣೇಶ್(20) ಎಂಬ ಯುವಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಬೆಳಲಮಕ್ಕಿಯ ಸುರೇಶ್ ಮತ್ತು ಉಮ ಅವರ ಪುತ್ರರಾಗಿದ್ದ ಗಣೇಶ್ ಶನಿವಾರ ಬೆಳಿಗ್ಗೆ 5;15 ರ ಸುಮಾರಿಗೆ ಮನೆಯಿಂದ ಸೈಕಲ್ ತೆಗೆದುಕೊಂಡು ಪೇಪರ್ ಹಂಚಲು ಬರುತ್ತಿದ್ದರು. ಈ ಸಂದರ್ಭದಲ್ಲಿ ಪ್ರವಾಸಿ ಮಂದಿರದ ಎದುರು ಬೆಂಗಳೂರಿನಿಂದ ಯಲ್ಲಾಪುರಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸೈಕಲ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸೈಕಲ್ನ ಮುಂದಿನ ಚಕ್ರವೇ ಬೇರ್ಪಟ್ಟಿದೆ. ಕೂಲಿಕಾರ ಕುಟುಂಬದ ಗಣೇಶ್ ತಂದೆ ಅನಾರೋಗ್ಯಪೀಡಿತರಾಗಿದ್ದರೆ, ಇಬ್ಬರು ಸಹೋದರಿಯರಿಗೆ ವಿವಾಹವಾಗಿದೆ. ಗಣೇಶ್ ಉತ್ತಮವಾಗಿ ಕೃಷಿ ಕೆಲಸದಲ್ಲೂ ಪಾರಂಗತನಾಗಿದ್ದ.
ಗಣೇಶನ ಜೊತೆ ಇನ್ನೊಂದು ಸೈಕಲ್ನಲ್ಲಿ ಪೇಪರ್ ಹಂಚಲು ಬರುತ್ತಿದ್ದ ಇನ್ನೋರ್ವ ಯುವಕ ಕೆಸರಿನಲ್ಲಿ ಹೋಗಿ ಬಿದ್ದಿದ್ದರಿಂದ ಯಾವುದೇ ಅಪಾಯವಾಗಿಲ್ಲ. ಕಳೆದ ಹತ್ತು ವರ್ಷಗಳಿಂದ ಗಣೇಶ್ ರಾಜ್ಯಮಟ್ಟದ ಪತ್ರಿಕೆಗಳನ್ನು ವಿತರಣೆ ಮಾಡುತ್ತಿದ್ದನು. ಅತ್ಯಂತ ನಿಷ್ಠೆಯಿಂದ ಪತ್ರಿಕೆ ವಿತರಣೆ ಮಾಡುತ್ತಿದ್ದ ಗಣೇಶ್ ಎಲ್ಲರ ಮೆಚ್ಚುಗೆಗೂ ಪಾತ್ರವಾಗಿದ್ದ ಯುವಕನಾಗಿದ್ದನು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಪ್ರಥಮ ಬಾರಿಗೆ ದ.ಕ ಭಾಗದಲ್ಲಿ ಭೂಕಂಪನ: ಸುಳ್ಯದ ತೊಡಿಕಾನದ ದೊಡ್ಡಕುಮೇರಿಯಲ್ಲಿ ಕಂಪಿಸಿದ ಭೂಮಿ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.