Anantkumar Hegde ನಡೆ‌ ನೋಡಿ ಕಾಂಗ್ರೆಸ್ ಚುನಾವಣಾ ತಂತ್ರ ಹಣೆಯಲಿದೆ: ಆರ್.ವಿ.ದೇಶಪಾಂಡೆ


Team Udayavani, Mar 25, 2024, 5:13 PM IST

Anantkumar Hegde ನಡೆ‌ ನೋಡಿ ಕಾಂಗ್ರೆಸ್ ಚುನಾವಣಾ ತಂತ್ರ ಹಣೆಯಲಿದೆ: ಆರ್.ವಿ.ದೇಶಪಾಂಡೆ

ಶಿರಸಿ: ಸಂಸದ ಅನಂತಕುಮಾರ ಹೆಗಡೆ ಅವರ‌ ನಡೆ ಇನ್ನೆರಡು ದಿನಗಳಲ್ಲಿ ಗೊತ್ತಾಗುತ್ತದೆ. ಅವರ ನಡೆ ನೋಡಿ ಕಾಂಗ್ರೆಸ್ ಚುನಾವಣಾ ತಂತ್ರ ಹಣೆಯಲಿದೆ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‌ ಬಿಜೆಪಿ ಅಭ್ಯರ್ಥಿ ಆಯ್ಕೆ ಅವರ ಆಂತರಿಕ ಸಂಗತಿ. ಆದರೆ ಅನಂತಕುಮಾರ ಅವರ ನಡೆ ನೋಡಬೇಕು. ಕಾಂಗ್ರೆಸ್ ಮನೆಯಲ್ಲಿ ಒಗ್ಗಟ್ಟಿದೆ. ಯಾವುದೇ ಅಸಮಾಧಾನ ಇಲ್ಲ. ಎಲ್ಲರೂ ಒಂದಾಗಿ‌ ಬರಲಿರುವ ಲೋಕಸಭಾ ಚುನಾವಣೆ ಎದುರಿಸಲು ಸಿದ್ಧ ಎಂದರು.

ಚುನಾವಣಾ ರೂಪುರೇಷೆ ಸಿದ್ದ ಮಾಡಲು ಕಾರ್ಯಕರ್ತರ, ಪ್ರಮುಖರ ಸಭೆ ಕರೆದಿದ್ದೇವೆ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಅವರೂ ಓಡಾಟ ನಡೆಸಲಿದ್ದಾರೆ. ಗೆಲ್ತೇವೆ ಎಂಬ ವಿಶ್ವಾಸವಿದೆ. ಕಳೆದ ಸಲ ಸೋಲಿಗೆ ಬೇರೆ ಕಾರಣಗಳಿದ್ದವು. ಜೆಡಿಎಸ್ ಅಭ್ಯರ್ಥಿ ಹಾಕಿದ್ದೆವು ಎಂದರು.

ಕಿತ್ತೂರು ಸೇರಿ ಐದು ಶಾಸಕರು, ಸರಕಾರದ ಪಂಚ ಭಾಗ್ಯ ಯೋಜನೆಗಳು ನಮಗೆ ಕೈ ಹಿಡಿಯಲಿವೆ. ಎಐಸಿಸಿ ಪ್ರಣಾಳಿಕೆಯಲ್ಲೂ ಪಂಚ ನ್ಯಾಯ ಯೋಜನೆಗಳಿವೆ. ಸಿದ್ಧರಾಮಯ್ಯ ಅವರು ಅನೇಕ ಒಳ್ಳೆಯ ಯೋಜನೆ ನೀಡುತ್ತಿದ್ದಾರೆ. ಅಭಿವೃದ್ದಿ ವೇಗದಲ್ಲಿ ಆಗುತ್ತಿದೆ. ರಾಜ್ಯದ ಐದೂ ಭಾಗ್ಯಗಳಿಗೂ ಹಣವಿದೆ. ಪ್ರತಿಪಕ್ಷದವರು ವಿನಾಕಾರ, ಟೀಕೆ ಮಾಡಬಾರದು ಎಂದರು.

ಕೇಂದ್ರ ಸರಕಾರದ ನಿರುದ್ಯೋಗ, ಬೆಲೆ ಏರಿಕೆ ಜನ ಸಾಮಾನ್ಯರಿಗೆ‌ ಕಷ್ಟವಾಗುವಂತಾಗಿದೆ. ಕಾಂಗ್ರೆಸ್ ಸರಕಾರದ ಅನೇಕ ಯೋಜನೆಗಳು ನಮ್ಮ ಪಕ್ಷಕ್ಕೆ ಮತಗಳ‌ನ್ನು ತಂದುಕೊಡಲಿವೆ ಎಂದರು.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ‌ ನಿಂಬಾಳ್ಕರ್‌, ಶಾಸಕ ಭೀಮಣ್ಣ ನಾಯ್ಕ, ದೀಪಕ್ ದೊಡ್ಡೂರು, ವೆಂಕಟೇಶ ಹೊಸಬಾಳೆ ಇದ್ದರು.

ರವೀಂದ್ರ ನಾಯ್ಕ ಅವರ ಜೊತೆ ಮಾತನಾಡಿದ್ದೇನೆ. ಅವರೂ ಕಳೆದ ನಾಲ್ಕು ದಶಕಗಳಿಂದ ಹೋರಾಟ‌ ಮಾಡುತ್ತಿದ್ದಾರೆ. ಅವರು ಅಸಮಾಧಾನದ‌ ಪ್ರಸ್ತಾಪ‌ ಮಾಡಿಲ್ಲ.
-ಆರ್.ವಿ.ದೇಶಪಾಂಡೆ

ಕ್ಷೇತ್ರದ ಅಭಿವೃದ್ದಿ ನಮ್ಮ‌ ಕನಸು. ರಾಜ್ಯ ಸರಕಾರದ ಯೋಜನೆಗಳು ಮತಗಳಾಗಿ ಬರಲಿವೆ. ಕಾರ್ಯಕರ್ತರ ಶ್ರಮ‌ದಿಂದ ಲೋಕಸಭೆಯಲ್ಲೂ ಪಕ್ಷ ಗೆಲ್ಲಲಿದೆ.
-ಡಾ. ಅಂಜಲಿ‌ ನಿಂಬಾಳ್ಕರ್‌, ಕಾಂಗ್ರೆಸ್ ಅಭ್ಯರ್ಥಿ

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

3-sirsi

Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.