ಪಟ್ಟಾ ಕೊಡದಿದ್ದರೆ ಸೇವೆ ಸ್ಥಗಿತ

•ಮೀನಮೇಷ ಎಣಿಸುತ್ತಿರುವ ಕಂದಾಯ ಇಲಾಖೆ•ವರ್ಷದಿಂದ ತಪ್ಪದ ಅಲೆದಾಟ

Team Udayavani, Jul 24, 2019, 12:51 PM IST

uk-tdy-02

ಶಿರಸಿ: ನಗರ ಸ್ವಚ್ಛಗೊಳಿಸುವ ಪೌರ ಕಾರ್ಮಿಕರು ಶತಮಾನಗಳಿಂದ ವಾಸ ಇರುವ ಪ್ರದೇಶ

ಶಿರಸಿ: ಶತಮಾನಗಳಿಂದ ವಾಸವಿರುವ ಪೌರ ಕಾರ್ಮಿಕರು ನಗರ ಸರ್ವೇ ನಂಬರ್‌ನ ಕಂದಾಯ ಭೂಮಿಯಲ್ಲಿದ್ದರೂ ಅವರಿಗೆ ಈವರೆಗೆ ನ್ಯಾಯಯುತವಾಗಿ ಸಿಗಬೇಕಿದ್ದ ಪಟ್ಟಾ ಲಭಿಸಿಲ್ಲ. ಕಳೆದೆರಡು ವರ್ಷಗಳಿಂದ ಅಲೆದಾಟ ನಡೆಸಿದರೂ ಸಣ್ಣ ಸಣ್ಣ ಕಾರಣ ಇಟ್ಟು ಹಿಂಬರಹ ನೀಡುತ್ತಿದ್ದಾರೆ. ಜು.31 ರೊಳಗೆ ಪಟ್ಟಾ ಕುರಿತು ಅಧಿಕೃತ ತೀರ್ಮಾನ ಹೊರ ಬೀಳದೇ ಇದ್ದರೆ ಆ.1 ರಿಂದ ಅನಿರ್ದಿಷ್ಟ ಅವಧಿಗೆ ಪೌರ ಕಾರ್ಮಿಕ ಸೇವೆ ಸ್ಥಗಿತಗೊಳಿಸುವ ತೀರ್ಮಾನಕ್ಕೆ ಬಂದಿದ್ದಾರೆ.

ರಾಜೀವ ನಗರದ ಪೌರ ಕಾರ್ಮಿಕರ ವಸತಿ ಪ್ರದೇಶದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ನಗರಸಭೆ ಮಾಜಿ ಅಧ್ಯಕ್ಷ, ವಾರ್ಡ್‌ ಸದಸ್ಯ ಪ್ರದೀಪ ಶೆಟ್ಟಿ, ಇಡೀ ನಗರದ ಆರೋಗ್ಯ, ಸ್ವಚ್ಛತೆ ಕಾಪಾಡುವವರ ಸ್ಥಿತಿ ಹೀಗಾಗಿದೆ. ಅವರಿಗೆ ಸ್ವಂತ ಭೂಮಿಯಲ್ಲಿ ಸೂರೂ ಇಲ್ಲದಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪೌರ ಕಾರ್ಮಿಕರ ಪಾದ ತೊಳೆಯುತ್ತಾರೆ. ಕೇಂದ್ರ, ರಾಜ್ಯ ಸರಕಾರದ ನೆರವಿನ ಯೋಜನೆ ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾರ್ಮಿಕರ ತನಕ ಬಾರದೇ ಕಲ್ಯಾಣ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಳಗ್ಗೆ ಆರಕ್ಕೆ ನಗರ ಸ್ವಚ್ಛಗೊಳಿಸಲು ಮುಂದಾಗುವ ಪೌರ ಕಾರ್ಮಿಕರಿಗೆ ಪಟ್ಟಾ ಪಡೆಯಬೇಕು ಎಂಬ ಜ್ಞಾನ, ತಿಳಿವಳಿಕೆ ಕೂಡ ಇರಲಿಲ್ಲ. ಒಂದು ಎಕರೆ ಪ್ರದೇಶದಲ್ಲಿ ಸಿಟಿ ಸರ್ವೆ ನಂ.26/37ನಲ್ಲಿ 35 ಕುಟುಂಬಗಳು ವಾಸ್ತವ್ಯ ಮಾಡಿವೆ. ಕಳೆದೆರಡು ವರ್ಷದ ಹಿಂದೆ ತಹಶೀಲ್ದಾರ್‌ಗೆ ಮನವಿ ಮಾಡಿಕೊಂಡಿದ್ದೆವು. ಅವರು ಹೋಗಲು ರಸ್ತೆ ಇಲ್ಲ ಎಂದು ಅರ್ಜಿ ತಿರಸ್ಕಾರ ಮಾಡಿದ್ದರು. ಉಳಿದ ಅನೇಕರಿಗೆ ಅದೇ ಅವಧಿಯಲ್ಲಿ ಆಗಿತ್ತಾದರೂ ಪೌರ ಕಾರ್ಮಿಕರಿಗೆ ಈ ಭಾಗ್ಯ ಸಿಗಲಿಲ್ಲ. ಈಗಿನ ತಹಶೀಲ್ದಾರ್‌ಗೆ ಮನವಿ ಮಾಡಿದಾಗ ಸಹಾಯಕ ಆಯುಕ್ತರಿಗೆ ಮೇಲ್ಮನವಿ ಹಾಕಲು ಸೂಚಿಸಿದ್ದರು. ಅಂದಿನ ಸಹಾಯಕ ಆಯುಕ್ತ ರಾಜು ಮೊಗವೀರರು ಮೂರು ವಿಚಾರಣೆ ನಡೆಸಿ ಆದೇಶ ಬರೆಯುವ ಮೊದಲು ವರ್ಗಾವಣೆ ಆಗಿ ಹೋದರು ಎಂದರು.

ಈಗಿನ ಎಸಿ ಈಶ್ವರ ಉಳ್ಳಾಗಡ್ಡಿ ಅವರು ರಸ್ತೆ ಇದೆ ಎಂಬ ದಾಖಲೆ ಕೊಡಿ ಎಂದು ಕೇಳಿದ್ದರು. ತಲುಪಿಸಿದ ಬಳಿಕ ನಗರಸಭೆಗೆ ಈ ರಸ್ತೆ ಹಸ್ತಾಂತರ ಆದ ದಾಖಲೆ ಕೇಳಿದ್ದಾರೆ. ನಿತ್ಯವೂ ನಗರ ಸ್ವಚ್ಛತೆಯೇ ಧ್ಯೇಯವಾಗಿಟ್ಟುಕೊಂಡು ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ನಿಜವಾಗಿ ಪಟ್ಟಾ ಸಿಗಬೇಕು. ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸಿದರೆ ಮೇಲಿನ ಹಂತದ ತನಕ ದೂರು ಒಯ್ಯಲಾಗುತ್ತದೆ. ಇಂಥ ಬಡವರಿಗೂ ನ್ಯಾಯ ಕೊಡಲಾಗದೇ ಇದ್ದರೆ ಹೇಗೆ ಎಂದೂ ಪ್ರದೀಪ ಶೆಟ್ಟಿ ಕೇಳಿದ್ದಾರೆ. ವೇದಿಕೆಯಲ್ಲಿ ಪೌರ ಕಾರ್ಮಿಕರಿಗೆ ನ್ಯಾಯ ಕೊಡಿಸುವ ಮಾತುಗಳನ್ನು ಆಡುತ್ತಾರೆ. ಆದರೆ ವಾಸ್ತವ ಬೇರೆ. ಬಡ ಪೌರ ಕಾರ್ಮಿಕರಿಗೆ ಪಟ್ಟ ಪ್ರಕ್ರಿಯೆ ಆರಂಭವಾಗದೇ ಇದ್ದರೆ ನಗರದಲ್ಲಿ ಇವರಿಂದ ಸ್ವಚ್ಛತಾ ಕಾರ್ಯ ನಿಲುತ್ತದೆ. ಇದಕ್ಕೆ ಅಧಿಕಾರಿಗಳೇ ಹೊಣೆ ಆಗುತ್ತಾರೆ ಎಂದೂ ಹೇಳಿದರು. ಸುಭಾಸ ಮಂಡೂರು ಇತರರು ಇದ್ದರು.

ಟಾಪ್ ನ್ಯೂಸ್

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.