ಶಿರಸಿ: ಭಾರತೀಯ ಸೇನಾ ಲೆಫ್ಟಿನೆಂಟ್ ಕೇವಲ್ ಹೆಗಡೆಗೆ ಸನ್ಮಾನ


Team Udayavani, Dec 7, 2021, 7:03 PM IST

ಶಿರಸಿ: ಭಾರತೀಯ ಸೇನಾ ಲೆಫ್ಟಿನೆಂಟ್ ಕೇವಲ್ ಹೆಗಡೆಗೆ ಸನ್ಮಾನ

ಶಿರಸಿ: ದೇಶಸೇವೆಗಾಗಿ ತಾಯ್ನಾಡಿಗೆ ಮರಳಿದೆ ಎಂದು ಭಾರತೀಯ ಸೇನೆಯ 15 ಗ್ರೆನೆಡರ್ಸ್ ಲೆಫ್ಟಿನೆಂಟ್ ಕೇವಲ್ ಹೆಗಡೆ ಹೇಳಿದರು.

ಸೋಮವಾರ ಅವರು ಶಿರಸಿ ಲಯನ್ಸ್ ಶಾಲೆಯ ಹಿರಿಯ ವಿದ್ಯಾರ್ಥಿ ಭಾರತೀಯ ಸೇನಾ ಲೆಫ್ಟಿನೆಂಟ್ ಕೇವಲ್ ಹೆಗಡೆಗೆ ಲಯನ್ಸ್ ಶಾಲೆಯ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಹೊರ ದೇಶಕ್ಕಿಂತಲೂ ಸ್ವದೇಶದಲ್ಲಿ ಏನನ್ನಾದರೂ ಸಾಧನೆ ಗೈದು  ದೇಶಕ್ಕೆ ಕೊಡುಗೆ ಕೊಡಬೇಕೆಂಬ  ಹಂಬಲ ತಾವು ಈ ಸ್ಥಾನಕ್ಕೆ ಬರಲು ಕಾರಣವಾಯಿತು.

ವಿದೇಶದಲ್ಲಿದ್ದು ಬೇಕಾದಷ್ಟು  ಗಳಿಕೆ ಮಾಡಿದರೂ ತನ್ನತನದ ಎನ್ನುವುದನ್ನು ಬದಿಗಿಟ್ಟು, ಆ ದೇಶದ ದ್ವಿತೀಯ ದರ್ಜೆಯ ಪ್ರಜೆಯ ಸ್ಥಾನ ಪಡೆದು ಒಟ್ಟಾರೆ ನಡೆಸುವ ಬಾಳ್ವೆಗಿಂತ ಇಡಿಯ ರಾಷ್ಟ್ರ ತನ್ನನ್ನು ಗುರುತಿಸುವ ರೀತಿಯಲ್ಲಿ ತಾನೇನಾದರೂ ಸಾಧನೆ ಮಾಡಬೇಕೆಂಬ ಹಂಬಲ ಭಾರತೀಯ ಸೇನಾ ನೇಮಕಾತಿಯ ಎಸ್.ಎಸ್.ಬಿ.ಪರೀಕ್ಷೆಗೆ ಕುಳಿತುಕೊಳ್ಳುವಲ್ಲಿ ಪ್ರೇರೇಪಣೆ  ನೀಡಿತು ಎಂದರು.

ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ಅವರಲ್ಲಿ ಸೇನೆಯಲ್ಲಿ ಸೇರಿದಾಗ ಅವರ ಮೂಲ ಪ್ರೇರಣೆ ಯಾರು ? ಎಂಬ ಪ್ರಶ್ನೆಗೆ ’ನನಗೆ ನಾನೇ ಪ್ರೇರಣೆ’ ಎಂಬ ಮಾರ್ಮಿಕ ಉತ್ತರ ಕೊಟ್ಟರು. ಸೈನ್ಯದಲ್ಲಿ ತನ್ನನ್ನು ನಂಬಿ ಧೈರ್ಯದಿಂದ ಮುನ್ನಡೆಯುವ ತನ್ನ ಮುಂದಿನ ಸೈನಿಕರುಗಳಿಗೆ ತನ್ನ ದಿಟ್ಟತನದ ಗಟ್ಟಿತನದ ವ್ಯಕ್ತಿತ್ವ ಪ್ರೇರಣೆಯಾಗಬೇಕೆನ್ನುವ ತನ್ನ ಅಂತಃಸತ್ವವೇ ತನಗೆ ಪ್ರೇರಣೆ ಎಂದು ಮಕ್ಕಳಿಗೆ ವಿವರಿಸಿದರು.

ಅಷ್ಟೊಂದು ಕಲಿತು.. ಬಹುದೊಡ್ಡ ಕಂಪನಿಯಲ್ಲಿ ಒಳ್ಳೆಯ ಗಳಿಕೆಯಲ್ಲಿ ಇರಬಹುದಾದ ಸಂದರ್ಭದಲ್ಲಿಯೂ ಸೇನೆಗೆ ಸೇರುವ ತಮ್ಮ ನಿರ್ಧಾರಕ್ಕೆ ಹೆತ್ತವರ ತಡೆ ಬಂದಿಲ್ಲವೇ? ಎಂಬ ಮಕ್ಕಳ ಪ್ರಶ್ನೆಗೆ, ಕೇವಲ್ ಅವರ ತಂದೆ ನಿವೃತ್ತ ಜೀವನ ನಡೆಸುತ್ತಿರುವ ಡಾಕ್ಟರ್ ಜೀ.ವಿ. ಹೆಗಡೆ ಉತ್ತರಿಸಿದರು. ಬದುಕಿನಲ್ಲಿ ಹೇಗೆ ಮುಂದುವರಿಯಬೇಕು, ಯಾವುದನ್ನು ಆಯ್ಕೆ ಮಾಡಬೇಕು ಎಂದು ನಿರ್ಧಾರಿಸುವುದು ಮಕ್ಕಳ ಆಯ್ಕೆಗೆ ಬಿಟ್ಟಿದ್ದು, ಮಗನ ಸ್ವತಂತ್ರ ನಿರ್ಧಾರವನ್ನು ತಾನು ಗೌರವಿಸಿದೆ ಎಂಬ ನೇರ ಉತ್ತರವನ್ನು ನೀಡಿದರು.

ತಾಯಿ, ಪ್ರಾಂಶುಪಾಲೆ ಕೋಮಲಾ ಭಟ್, ಮಗನ ನಿರ್ಧಾರದಿಂದ ತಾವು ಕೊಂಚ ಭಾವುಕರಾಗಿದ್ದು ನಿಜ, ಆದರೆ ಕೋಟ್ಯಂತರ ಜನರ ನಡುವೆ ತನ್ನ ಹೆಜ್ಜೆಯ ಗುರುತು ಮೂಡಿಸಿ- ಸರ್ವರಿಗೂ ಮಾದರಿಯಾಗುವ ರೀತಿಯಲ್ಲಿ ಬಾಳುವ ಮಗನ ನಿರ್ಧಾರವನ್ನು ತಾನು ಗೌರವಿಸಿದೆ,  ಹಾರೈಸಿದೆ ಎಂದರು. ಲೆಫ್ಟಿನೆಂಟ್ ಕೇವಲ್ ಅವರು ಭಾರತೀಯ ಸೇನೆಯ ತರಬೇತಿ ಚಟುವಟಿಕೆಗಳ ಚಿತ್ರಣವನ್ನು ದೃಶ್ಯೀಕರಿಸಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿಕೊಟ್ಟರು. ಚೆನ್ನೈನಲ್ಲಿ ತಾವು ತರಬೇತಿ ಪಡೆಯುವಾಗ ತಾವು ಪಡೆದ ಅನುಭವಗಳನ್ನು, ರೋಚಕ ಕ್ಷಣಗಳನ್ನು ಸೆರೆ ಹಿಡಿದ ಚಿತ್ರಣವನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಿ ಮಕ್ಕಳ ಮನಗೆದ್ದರು.

ಅಧ್ಯಕ್ಷತೆ ವಹಿಸಿದ್ದ ಲಯನ್ ಎನ್.ವಿ.ಜಿ ಭಟ್ ಕೇವಲ ಹೆಗಡೆಯವರ ಅವರ ವ್ಯಕ್ತಿತ್ವ ಮುಂದಿನ ವಿದ್ಯಾರ್ಥಿಗಳಿಗೆ  ಮಾದರಿಯಾಗಲಿ ಎಂದರು. ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಪ್ರೊಫೆಸರ್ ರವಿ ನಾಯಕ್, ನಮ್ಮಲ್ಲಿ ಕಲಿತ ವಿದ್ಯಾರ್ಥಿ ಇಂದು ಇಂತಹ ಹಿರಿಮೆ-ಗರಿಮೆಯನ್ನು ಸಾಧಿಸಿ ಸಮಾಜಕ್ಕೆ ಮಾದರಿಯಾಗಿರುವುದು ಸ್ತುತ್ಯಾರ್ಹ, ಮುಂದಿನ ಎಳೆಯರಿಗೆ ಕೇವಲ ವ್ಯಕ್ತಿತ್ವ ಮಾದರಿಯಾಗಲಿ ಎಂದರು.

ಶಾಲೆಯ ಮುಖ್ಯಾಧ್ಯಾಪಕ ಶಶಾಂಕ ಹೆಗಡೆ ಸ್ವಾಗತಿಸಿದರು. ಸಹಶಿಕ್ಷಕಿ ಮುಕ್ತ ನಾಯಕ್ ನಿರ್ವಹಿಸಿದರು. ಚೈತ್ರ ಹೆಗಡೆ ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಪ್ರಭಾಕರ್ ಹೆಗಡೆ, ಶಿಕ್ಷಣ ಸಂಸ್ಥೆಯ ಸದಸ್ಯ ಕೆ.ಬಿ.ಲೋಕೇಶ್ ಹೆಗಡೆ, ಕ್ಲಬ್ಬಿನ ಖಜಾಂಚಿ ಅನಿತಾ ಹೆಗಡೆ, ಲಯನ್ಸ್ ಕ್ಲಬ್ಬಿನ ಕಾರ್ಯದರ್ಶಿ ವಿನಯ್ ಹೆಗಡೆ, ಜ್ಯೋತಿ ಭಟ್, ತ್ರಿವಿಕ್ರಮ್ ಪಟವರ್ಧನ್, ಅಶೋಕ್ ಹೆಗಡೆ, ಅಶ್ವತ್ಥ ಹೆಗಡೆ ಇತರರು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.