Shirur Landslide; ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆಯ ಮಾಹಿತಿ ಪಡೆದ ಸಂಸದ ಕಾಗೇರಿ
Team Udayavani, Jul 27, 2024, 5:34 PM IST
ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ಭೇಟಿ ನೀಡಿದರು.
ಕಣ್ಮರೆಯಾದವರ ಪೈಕಿ ಇನ್ನೂ ಪತ್ತೆಯಾಗದ ಭಾರತ್ ಬೆಂಜ್ ಚಾಲಕ ಅರ್ಜುನ್, ಉಳುವರೆಯ ಜಗನ್ನಾಥ, ಗಂಗೆಕೊಳ್ಳದ ಲೋಕೇಶ್ ನಾಯ್ಕ ಬಗ್ಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಸಂಸದರಿಗೆ ಮಾಹಿತಿ ನೀಡಿದರು. ಲಾರಿ ಹಾಗೂ ಕಾಣೆಯಾದವರ ಹುಡುಕಾಟಕ್ಕೆ ಕೈಗೊಂಡ ಕ್ರಮದ ಬಗ್ಗೆ ಶನಿವಾರದ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದರು.
ನೇವಿ, ಎಸ್ ಡಿಆರ್ಎಫ್, ಎನ್ ಡಿಆರ್ ಎಫ್ ಹಾಗೂ ಅಡ್ವಾನ್ಸ್ಡ್ ಐ ಬೋರ್ಡ್ ಡ್ರೋಣ್ ಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ಮಾಹಿತಿ ನೀಡಲಾಯಿತು. ರಕ್ಷಣಾ ತಂಡಗಳ ಮಾಹಿತಿ ಪಡೆದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಾಪತ್ತೆಯಾದ ಸ್ಥಳೀಯ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಹಾಗೂ ಕೇರಳದ ಚಾಲಕ ಅರ್ಜುನ್ ಅವರನ್ನು ಶೀಘ್ರ ಪತ್ತೆ ಮಾಡುವಂತೆ ರಕ್ಷಣಾ ತಂಡಕ್ಕೆ ವಿನಂತಿಸಿದರು.
ನಾಪತ್ತೆಯಾದ ಜಗನ್ನಾಥ ನಾಯ್ಕ ಅವರ ಮನೆಗೆ ಭೇಟಿ ನೀಡಿದ ಸಂಸದರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಶಿರೂರು ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಲಾಯಿತು. ಸರ್ಕಾರದಿಂದ ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಯಿತು.
ಆಗಾಗ ಪ್ರವಾಹ ಬರುವುದರಿಂದ ಸ್ಥಳೀಯರಿಗೆ ಗಂಗಾವಳಿ ತಟದಲ್ಲಿ ಜೀವನ ನಡೆಸುವುದು ಕಷ್ಟವಾಗುತ್ತದೆ. ಅವರಿಗೆ ಕಂದಾಯ ಇಲಾಖೆಯ ಜಾಗಗಳನ್ನು ಗುರುತಿಸಿ ಮನೆ ನಿರ್ಮಿಸಿ ಕೊಡುವುದು, ಅವರ ಜೀವನಕ್ಕೆ ಆಧಾರ ಕಲ್ಪಿಸಿಕೊಡುವ ಕುರಿತು ಸಂಸದರೊಂದಿಗೆ ಸ್ಥಳೀಯರು ಚರ್ಚಿಸದರು. ತಹಶೀಲ್ದಾರ್ ಶಂಕರ್, ಸಹಾಯಕ ಕಮಿಷನರ್ ಕಾಂಬ್ಳೆ ಇದ್ದರು. ಮಾಜಿ ಶಾಸಕಿ ರೂಪಾಲಿ ನಾಯ್ಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?
Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.