![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 27, 2024, 5:34 PM IST
ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ಭೇಟಿ ನೀಡಿದರು.
ಕಣ್ಮರೆಯಾದವರ ಪೈಕಿ ಇನ್ನೂ ಪತ್ತೆಯಾಗದ ಭಾರತ್ ಬೆಂಜ್ ಚಾಲಕ ಅರ್ಜುನ್, ಉಳುವರೆಯ ಜಗನ್ನಾಥ, ಗಂಗೆಕೊಳ್ಳದ ಲೋಕೇಶ್ ನಾಯ್ಕ ಬಗ್ಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಸಂಸದರಿಗೆ ಮಾಹಿತಿ ನೀಡಿದರು. ಲಾರಿ ಹಾಗೂ ಕಾಣೆಯಾದವರ ಹುಡುಕಾಟಕ್ಕೆ ಕೈಗೊಂಡ ಕ್ರಮದ ಬಗ್ಗೆ ಶನಿವಾರದ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದರು.
ನೇವಿ, ಎಸ್ ಡಿಆರ್ಎಫ್, ಎನ್ ಡಿಆರ್ ಎಫ್ ಹಾಗೂ ಅಡ್ವಾನ್ಸ್ಡ್ ಐ ಬೋರ್ಡ್ ಡ್ರೋಣ್ ಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ಮಾಹಿತಿ ನೀಡಲಾಯಿತು. ರಕ್ಷಣಾ ತಂಡಗಳ ಮಾಹಿತಿ ಪಡೆದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಾಪತ್ತೆಯಾದ ಸ್ಥಳೀಯ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಹಾಗೂ ಕೇರಳದ ಚಾಲಕ ಅರ್ಜುನ್ ಅವರನ್ನು ಶೀಘ್ರ ಪತ್ತೆ ಮಾಡುವಂತೆ ರಕ್ಷಣಾ ತಂಡಕ್ಕೆ ವಿನಂತಿಸಿದರು.
ನಾಪತ್ತೆಯಾದ ಜಗನ್ನಾಥ ನಾಯ್ಕ ಅವರ ಮನೆಗೆ ಭೇಟಿ ನೀಡಿದ ಸಂಸದರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಶಿರೂರು ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಲಾಯಿತು. ಸರ್ಕಾರದಿಂದ ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಯಿತು.
ಆಗಾಗ ಪ್ರವಾಹ ಬರುವುದರಿಂದ ಸ್ಥಳೀಯರಿಗೆ ಗಂಗಾವಳಿ ತಟದಲ್ಲಿ ಜೀವನ ನಡೆಸುವುದು ಕಷ್ಟವಾಗುತ್ತದೆ. ಅವರಿಗೆ ಕಂದಾಯ ಇಲಾಖೆಯ ಜಾಗಗಳನ್ನು ಗುರುತಿಸಿ ಮನೆ ನಿರ್ಮಿಸಿ ಕೊಡುವುದು, ಅವರ ಜೀವನಕ್ಕೆ ಆಧಾರ ಕಲ್ಪಿಸಿಕೊಡುವ ಕುರಿತು ಸಂಸದರೊಂದಿಗೆ ಸ್ಥಳೀಯರು ಚರ್ಚಿಸದರು. ತಹಶೀಲ್ದಾರ್ ಶಂಕರ್, ಸಹಾಯಕ ಕಮಿಷನರ್ ಕಾಂಬ್ಳೆ ಇದ್ದರು. ಮಾಜಿ ಶಾಸಕಿ ರೂಪಾಲಿ ನಾಯ್ಕ ಇದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.