Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ


Team Udayavani, Jul 26, 2024, 6:50 PM IST

Shirur Landslide; ನದಿಯಾಳದ ಕಾರ್ಯಾಚರಣೆಗೆ ನದಿ ನೀರಿನ ವೇಗ ಅಡ್ಡಿ

ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ಶಿರೂರು ಬಳಿ ನಡೆದ ಗುಡ್ಡ ಕುಸಿತದ ರಕ್ಷಣಾ ಕಾರ್ಯಾಚರಣೆಗೆ ಶುಕ್ರವಾರ ಕೂಡಾ ಆಗಾಗ ಬಿದ್ದ ರಭಸದ ಮಳೆ ಹಾಗೂ ನದಿಯ ನೀರಿನ ವೇಗ ಅಡ್ಡಿಯಾಯಿತು.

ನದಿಯಾಳದಲ್ಲಿ ಸಿಲುಕಿರುವ ಭಾರತ್ ಬೆಂಜ್ ಟ್ರಕ್, ಗ್ಯಾಸ್ ಟ್ಯಾಂಕರ್ ಚೆಸ್ಸಿ ಇರುವ ಜಾಗವನ್ನು ಹುಡುಕಲು ಡ್ರೋನ್ ಯಶಸ್ವಿಯಾದರೂ ಟ್ರಕ್ ಇರುವ ಸ್ಥಳ ತಲುಪಲು ಮುಳುಗು ತಜ್ಞರಿಗೆ ಸಾಧ್ಯವಾಗಲಿಲ್ಲ. ನದಿ ನೀರಿನ ಅಂಡರ್ ಕರೆಂಟ್ 6.6 ನಾಟ್ಸ್ (nots) ವೇಗದ ಕಾರಣ ನದಿ ನೀರಿಗೆ ಧುಮುಕಿ ಟ್ರಕ್ ಇರುವ ಸ್ಥಳ ತಲುಪಲು ನೇವಿ ಮುಳುಗು ತಜ್ಞರಿಗೆ ಸಾಧ್ಯವಾಗಲಿಲ್ಲ. ನದಿ, ಸಮುದ್ರದಲ್ಲಿ ಈಜುವ ನೇವಿ ಪರಿಣಿತರು ಎರಡು ಸಲ ಗಂಗಾವಳಿ ನದಿಯ ಬಳಿಗೆ ಆಗಮಿಸಿ, ನದಿಗೆ ಇಳಿಯಲು ವಿಫಲ ಪ್ರಯತ್ನ ನಡೆಸಿದರು.

ಕಾರವಾರ ಶಾಸಕ ಸೈಲ್, ಕೇರಳದ ಲೋಕಪಯೋಗಿ ಸಚಿವರು, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಶಿರೂರು ಸ್ಥಳದಲ್ಲಿದ್ದು ಶುಕ್ರವಾರ ಡ್ರೋನ್ ಬಳಸಿ ನಡೆಸಿದ ಕಾರ್ಯಾಚರಣೆಯನ್ನು ಖುದ್ದಾಗಿ ವೀಕ್ಷಿಸಿದರು.

ನಾಳೆ ನದಿಯಲ್ಲಿ ಕಾರ್ಯಾಚರಣೆ ಮಾಡಲು ಶಾಸಕರು ಗೋವಾದಿಂದ ಬಾರ್ಜ ಹಾಗೂ ಪ್ಲಾಟ್ ಫಾರಂ ತರಿಸುತ್ತಿದ್ದು, ಶಿರೂರು ಗಂಗಾವಳಿ ನದಿಯ ಬಳಿ ಟ್ರಕ್ ಮೇಲೆ ತರಲು ಮತ್ತೊಂದು ‌ಪ್ರಯತ್ನ ನಡೆಯಲಿದೆ.

ಶಿರೂರು ಹೆದ್ದಾರಿ ಪಕ್ಕದ ಗುಡ್ಡ ಭೂಕುಸಿತದಲ್ಲಿ ಇನ್ನೂ ಮೂವರ ಶವ ದೊರೆಯಬೇಕಿದೆ. ಈಗಾಗಲೇ ದೊರೆತ ಲಕ್ಷ್ಮಣ ನಾಯ್ಕ ಕುಟುಂಬದ ನಾಲ್ವರು ಹಾಗೂ ತಮಿಳು ನಾಡಿನ ಮೂವರು ಲಾರಿ ಚಾಲಕರು ಹಾಗೂ ಸಣ್ಣಿ ಹನುಮಂತ ಗೌಡ ಕುಟುಂಬದ ಸದಸ್ಯರಿಗೆ ತಲಾ‌ 5 ಲಕ್ಷದಂತೆ ಪರಿಹಾರ ವಿತರಿಸಲಾಗಿದೆ. ಗುರುವಾರ ಗುರುತು ಪತ್ತೆಯಾದ ಶರವಣನ್ ಕುಟುಂಬದ ಸದಸ್ಯರಿಗೆ ಐದು ಲಕ್ಷ ರೂ. ನೀಡಲಾಗಿದೆ.

ಶಿರೂರು ಹೆದ್ದಾರಿಯ ಎರಡು ಬದಿಗೆ ಬಿದ್ದ ಮಣ್ಣು ತೆರವಿನ ಕಾರ್ಯ ಮುಂದುವರಿದಿದೆ. ಎನ್ಎಚ್ಎಐ ಹಾಗೂ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರಿಂಗ್ ವಿಭಾಗ ಶಿರೂರು ಬಳಿ ಹಲವು ಮುಂಜಾಗ್ರತಾ ಕ್ರಮಗಳನ್ನು ಆರಂಭಿಸಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.