Shiruru hill collapse; ಮಣ್ಣು ತೆಗೆಯುವ ಕಾರ್ಯಾಚರಣೆ ವೇಳೆ ಸಿಕ್ಕ ಹೋಟೆಲ್ ಅವಶೇಷಗಳು

ಒಂದೆರಡು ದಿನದಲ್ಲಿಯೇ ಸ್ಪಷ್ಟ ಚಿತ್ರಣ ಕೊಡಬೇಕು: ಶಾಸಕ ಸತೀಶ್ ಸೈಲ್ ಮನವಿ

Team Udayavani, Jul 25, 2024, 9:04 PM IST

1–eewr-aa-aa

ಕಾರವಾರ : ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭಂದಿಸಿದಂತೆ ಮಣ್ಣಿನ ಅಡಿ ಇದ್ದ ಲಕ್ಷ್ಮಣ್ ನಾಯ್ಕ ಹೋಟೆಲ್ ಅವಶೇಷಗಳು ಪತ್ತೆಯಾಗಿದೆ. ಪೋಕ್ ಲೈನ್ ಮೂಲಕ ಮಣ್ಣನ್ನ ತೆಗೆಯುವ ವೇಳೆ ಪತ್ತೆಯಾಗಿದ್ದು ನಾಪತ್ತೆಯಾಗಿರುವ ಮೂವರ ದೇಹಗಳ ಅಲ್ಲೇ ಇರಬಹುದು ಎಂದು ಅಂದಾಜಿಸಲಾಗಿದೆ.

ಜುಲೈ 16 ರಂದು ಶಿರೂರಿನಲ್ಲಿ ಗುಡ್ಡ ಕುಸಿತವಾಗಿತ್ತು. ರಾಷ್ಟ್ರೀಯ ಹೆದ್ದಾರಿ 66ರ ಅವೈಜ್ಞಾನಿಕ ಅಗಲೀಕರಣದಿಂದ ಗುಡ್ಡ ಕುಸಿದು ಲಕ್ಷ್ಮಣ್ ನಾಯ್ಕ ಎಂಬಾತನ ಅಂಗಡಿ ಮೇಲೆ ಬಿದ್ದಿತ್ತು. ಹೆದ್ದಾರಿ ಪಕ್ಕದಲ್ಲೇ ಅಂಗಡಿ ಇದ್ದಿದ್ದರಿಂದ ಟೀ ಕುಡಿಯಲು ಬರುತ್ತಿದ್ದ ಲಾರಿ ಚಾಲಕರು ಈ ಘಟನೆಯಲ್ಲಿ ನಾಪತ್ತೆಯಾಗಿದ್ದರು.

ಘಟನೆಯಲ್ಲಿ ಈ ವರೆಗೆ ಹೋಟೆಲ್ ನಲ್ಲಿದ್ದ ಮಾಲಿಕ ಲಕ್ಷ್ಮಣ ನಾಯ್ಕ, ಆತನ ಪತ್ನಿ ಶಾಂತಿ ನಾಯ್ಕ, ಮಗ ರೋಷನ್, ಮಗಳು ಅವಂತಿಕಾ ಮೃತದೇಹಗಳು ಪತ್ತೆಯಾಗಿವೆ. ಅಲ್ಲದೇ ಲಾರಿ ಚಾಲಕರಾದ ಶರವಣ, ಚಿನ್ನನ್, ಮುರುಗನ್ ಹಾಗೂ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡರ ಶವ ಸಹ ಪತ್ತೆಯಾಗಿದೆ.

ಇದನ್ನೂ ಓದಿ: Shiruru hill collapse; ನದಿಯ ನಾಲ್ಕು ಕಡೆ ಅವಶೇಷಗಳು ಬೆಳಕಿಗೆ:ಇಂದ್ರಬಾಲನ್‌ ನಂಬಿಯಾರ್

ಇನ್ನು ಘಟನೆಯಲ್ಲಿ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಲಕ್ಷ್ಮಣ್ ನಾಯ್ಕ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಜಗನ್ನಾಥ್ ಹಾಗೂ ಅಂಗಡಿಗೆ ಬಂದಿದ್ದ ಲೊಕೇಶ್ ನಾಯ್ಕ ನಾಪತ್ತೆಯಾಗಿದ್ದು ಅವರ ದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.

ಗುರುವಾರ ಸಹ ಲಕ್ಷ್ಮಣ್ ನಾಯ್ಕ ಅಂಗಡಿ ಹಿಂದೆ ಇದ್ದ ಮಣ್ಣನ್ನ ತೆರವು ಮಾಡುವ ಕಾರ್ಯಾಚರಣೆ ಮಾಡಲಾಯಿತು. ಈ ವೇಳೆ ಅಂಗಡಿಯಲ್ಲಿ ಬಳಸುತ್ತಿದ್ದ ಬಕೆಟ್, ಆಲದ ಮರ, ಬಾಳೆ ಗಿಡ, ಅಂಗಡಿಯ ಪೌಂಡೇಷನ್ ಗಳು ಪತ್ತೆಯಾಗಿದೆ. ರಾತ್ರಿ ಪೂರ್ಣ ಮಣ್ಣನ್ನ ತೆಗೆಯುವ ಮೂಲಕ ಉಳಿದ ಮೂವರ ದೇಹ ಅಲ್ಲೇ ಇರಬಹುದು ಎಂದು ಕಾರ್ಯಾಚರಣೆ ನಡೆಸಲಾಗಿದೆ.

ಶಾಸಕರ ಸಲಹೆಯಂತೆ ಕಾರ್ಯಾಚರಣೆ
ಕಳೆದ ಹತ್ತು ದಿನಗಳಿಂದ ಕಾರ್ಯಚರಣೆಯಲ್ಲಿ ಮೊಕ್ಕಾಂ ಹೂಡಿರುವ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅಂಗಡಿ ಮಣ್ಣು ಬಿದ್ದಂತಹ ಸಂದರ್ಭದಲ್ಲಿ ಕೆಳಗೆ ಬಿದ್ದಿರಬಹುದು. ನದಿಯಲ್ಲಿ ಯಾವುದೇ ಕಾರಣಕ್ಕೂ ಕೊಚ್ಚಿ ಹೋಗಿರುವುದಿಲ್ಲ. ಗಿಡಮರಗಳು ಕೊಚ್ಚಿಹೋಗಿದ್ದನ್ನ ಗಮನಿಸಿಲ್ಲ. ಈ ನಿಟ್ಟಿನಲ್ಲಿ ಸ್ಥಳವೊಂದನ್ನ ತೋರಿಸಿ ಕಾರ್ಯಾಚರಣೆ ಮಾಡುವಂತೆ ಸಿಬ್ಬಂದಿಗಳಿಗೆ ತಿಳಿಸಿದ್ದರು.

ಈ ನಿಟ್ಟಿನಲ್ಲಿ ಪೋಕ್ ಲೈನ್ ಮೂಲಕ ಕಾರ್ಯಾಚರಣೆ ಮಾಡುವ ವೇಳೆಯಲ್ಲಿ ಹೋಟೆಲ್ ಪೌಂಡೇಷನ್, ಚೀರಿಕಲ್ಲುಗಳು, ಬಕೆಟ್ ಸೇರಿದಂತೆ ಹಲವು ವಸ್ತು ಪತ್ತೆಯಾಗಿದೆ.

ಇನ್ನು ಕಾರ್ಯಾಚರಣೆ ನಿಲ್ಲಿಸದಂತೆ ಮಾಡಬೇಕು. ಒಂದೆರಡು ದಿನದಲ್ಲಿಯೇ ಎಲ್ಲಾ ಕಾರ್ಯಾಚರಣೆ ಮಾಡಿ ಸ್ಪಷ್ಟ ಚಿತ್ರಣ ಕೊಡಬೇಕು ಎಂದು ಸೈಲ್ ಸಿಬ್ಬಂದಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.