ಕಾಂಗ್ರೆಸ್‌ ಭ್ರಷ್ಟಾಚಾರದ ಜನಕ ಎಂದಿದ್ದ ಸಿದ್ದರಾಮಯ್ಯನವರೂ ಈಗ ಭ್ರಷ್ಟ: ಕಾಗೇರಿ


Team Udayavani, Oct 22, 2024, 5:58 PM IST

ಕಾಂಗ್ರೆಸ್‌ ಭ್ರಷ್ಟಾಚಾರದ ಜನಕ ಎಂದಿದ್ದ ಸಿದ್ದರಾಮಯ್ಯನವರೂ ಈಗ ಭ್ರಷ್ಟ: ಕಾಗೇರಿ

■ ಉದಯವಾಣಿ ಸಮಾಚಾರ
ಶಿರಸಿ: ಹಿಂದೆಲ್ಲ ಇದ್ದ ಕಾಂಗ್ರೆಸ್‌ ಸರಕಾರದ ಭ್ರಷ್ಟಾಚಾರ, ಹಗರಣಗಳ ದಾಖಲೆ ಮುರಿದು ಸಿದ್ದರಾಮಯ್ಯ ಅವರು ಮುಡಾ ಹಗರಣದ ಮೂಲಕ ಹೊಸ ದಾಖಲೆ ಬರೆದಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಸೋಮವಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿ ಇಡಿ ಸಾಕಷ್ಟು ದಾಖಲೆ ಸಂಗ್ರಹಿಸಿದೆ. ಸಿದ್ದರಾಮಯ್ಯ ಅವರ ಪತ್ನಿಗೆ 14 ಸೈಟು ಕೊಟ್ಟಿರುವುದು ನಿಜ. ಈ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತ, ಇಡಿ ತನಿಖೆಗೆ ರಾಜ್ಯ ಸರಕಾರದ ಅ ಧಿಕಾರಿಗಳು ಸಹಕಾರ ಕೊಡಬೇಕು. ಹಾಗೂ ಸಮಗ್ರ ತನಿಖೆಗೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಸಿದ್ದರಾಮಯ್ಯ ಅವರು ಪ್ರತಿ ಪಕ್ಷದಲ್ಲಿ ಇದ್ದಾಗ ಮಾಡಿದ ಆರೋಪಗಳೆಲ್ಲ ಈಗ ಸತ್ಯ ಅನ್ನಿಸುತ್ತಿದೆ. ಕಾಂಗ್ರೆಸ್‌ ಭ್ರಷ್ಟಾಚಾರದ ಜನಕ, ಮೊದಲಿನಿಂದಲೂ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುತ್ತಲೇ ಬಂದಿದೆ. ಇದನ್ನು ಸಿದ್ದರಾಮಯ್ಯನವರು ಮೊದಲೆಲ್ಲ ಹೇಳಿದ್ದರು. ಆದರೆ ಕಾಂಗ್ರೆಸ್‌ ಸೇರಿದ ಬಳಿಕ ಅವರೂ ಭ್ರಷ್ಟಾಚಾರಿಯಾದರು. ಈಗ ಸಿದ್ದರಾಯಮಯ್ಯ ಅವರಿಗೆ ರಾಜೀನಾಮೆ ಕೊಡಲು ಮನಸ್ಸಿದ್ದರೂ ಹೈಕಮಾಂಡ್‌ ಕಾರಣದಿಂದ ರಾಜೀನಾಮೆ  ಕೊಡಲಾಗದ ಸ್ಥಿತಿ ಎದುರಾಗಿರಬೇಕು ಎಂದು
ಲೇವಡಿ ಮಾಡಿದರು.

ರಾಜ್ಯದಲ್ಲಿರೋದು ಮರ್ಯಾದಗೆಟ್ಟ ಸರಕಾರ. ಸಿದ್ದರಾಮಯ್ಯ ಅವರು ಸೈಟ್‌ ವಾಪಸ್‌ ಕೊಟ್ಟ ಬಳಿಕ ಹಗರಣ ಮುಗದೋಗತ್ತಾ? ರಾಜ್ಯದ ಜನರಲ್ಲಿ ಇಂತಹ ಭ್ರಮೆ ಸೃಷ್ಟಿಸುವುದು ಬಿಡಬೇಕು. ಕಾಂಗ್ರೆಸ್‌ನದ್ದು ಹತಾಶ ಸ್ಥಿತಿ ಆಗಿದೆ. ದ್ವೇಷ ರಾಜಕಾರಣ, ಎಫ್‌ಐಆರ್‌, ನ್ಯಾಯಾಲಯದಲ್ಲಿ ದಾವೆ ಇದನ್ನೇ ಮಾಡುತ್ತಿದ್ದು ಇದು ಕಾನೂನು ಕಟ್ಲೆ ಹೆಚ್ಚು ಮಾಡಿಕೊಂಡ ಸರಕಾರವಾಗಿದೆ.

ಭ್ರಷ್ಟಾಚಾರದಲ್ಲೇ ಮುಳುಗಿರುವ ಕಾಂಗ್ರೆಸ್‌ ಕೇಂದ್ರ ಸಚಿವರ ವಿರುದ್ಧ ಬೇಜವಾಬ್ದಾರಿಯಿಂದ ಮಾತನಾಡುವುದು, ಬಿಜೆಪಿ ನಾಯಕರ ಮೇಲೆ ಮಸಿ ಬಳಿಯುವ ಕಾರ್ಯ ಮಾಡಲು ಮುಂದಾಗಿರುವುದು ಖಂಡನೀಯ ಎಂದರು. ಪ್ರಮುಖರಾದ ಗುರುಪ್ರಸಾದ ಹೆಗಡೆ, ಸದಾನಂದ ಭಟ್ಟ, ಶರ್ಮಿಳಾ ಮಾದನಗೇರಿ, ರಮಾಕಾಂತ ಭಟ್ಟ, ಗಣಪತಿ ನಾಯ್ಕ, ನಂದನ ಸಾಗರ, ನಾಗರಾಜ್‌ ನಾಯ್ಕ, ಆರ್‌.ವಿ.ಹೆಗಡೆ, ರವಿಕಾಂತ ಶೆಟ್ಟಿ ಇತರರು ಇದ್ದರು.

ಅಡಿಕೆ ಅಕ್ರಮ ಆಮದಿಗೆ ಬಿಗಿ ಕ್ರಮ

ಅಡಿಕೆ ಸೇರಿದಂತೆ ಇತರ ಬೆಳೆಗಳಿಗೆ ಬಂದಿರುವ ರೋಗ ನಿಯಂತ್ರಣ ಮಾಡಬೇಕಿದೆ. ರೈತ ಸಮುದಾಯದ ಹಿತ ಕಾಯಬೇಕು. ಅಂತಾರಾಷ್ಟ್ರೀಯ ಒಪ್ಪಂದದ ಕಾರಣದಿಂದ ಅನೇಕ ವಸ್ತುಗಳ ಆಮದು-ರಫ್ತು ಆಗುತ್ತಿದೆ. ಅಧಿಕೃತವಾಗಿ ತರುವುದಕ್ಕೆ ಅಧಿಕ ತೆರಿಗೆ ಹಾಕಲಾಗುತ್ತದೆ.

ಅಡಿಕೆ ಅಕ್ರಮ ಆಮದಿಗೆ ಕೇಂದ್ರ ಸರಕಾರ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲಿದೆ. ದರ ಹೆಚ್ಚಾಯಿತು ಎನ್ನುವ ಹೊತ್ತಿನಲ್ಲಿ
ನಿಯಂತ್ರಣ ತಪ್ಪಿ ಬೆಳೆ ಬೆಳೆದಿದ್ದರಿಂದಲೂ ಸಮಸ್ಯೆ ಆಗುತ್ತಿದೆ. ಕದ್ದು ತರೋದನ್ನು ನಿಯಂತ್ರಿಸಬಹುದು. ಆದರೆ ಅಡಿಕೆ
ಬೆಳೆಯ ಕ್ಷೇತ್ರ ವಿಸ್ತರಣೆ ಒಂದು ದೊಡ್ಡ ಸವಾಲು.

ಗ್ಯಾರಂಟಿ ಹೆಸರಲ್ಲಿ ಮೋಸ-ಅಶಿಸ್ತಿನ ಸರಕಾರ
ಆರ್ಥಿಕವಾಗಿ ರಾಜ್ಯ ದಿವಾಳಿ ಆಗುತ್ತದೆ. ತೆರಿಗೆ ಹೆಚ್ಚಿಸಿ, ಬೆಲೆ ಏರಿಕೆಗೆ ಕಾರಣವಾಗಿ ಜನರ ಜೀವನ ದುಸ್ತರಗೊಳಿಸುತ್ತಿದೆ. ಗ್ಯಾರೆಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದೆ. ಜನ ವಿರೋಧಿ  ಸರಕಾರ ಎನ್ನಲು ಹಾಪ್‌ಕಾಮ್ಸ್‌ ಮಳಿಗೆ ಬಂದ್‌ ಮಾಡಿದ್ದು ಉದಾಹರಣೆ. ರಾಜ್ಯದಲ್ಲಿ ನೂರಾರು ಮಳಿಗೆ ಬಂದ್‌ ಆಗಿದ್ದಕ್ಕೆ ರಾಜ್ಯ ಸರಕಾರ ಸರಕಾರಕ್ಕೆ ಏನು ಹೇಳುತ್ತದೆ? ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರು ಉದ್ಘಾಟನೆ ಮಾಡುವುದನ್ನು ನೋಡಿದ್ದೇವೆ. ಆದರೆ, ಭೂಮಿಪೂಜೆ ಮಾಡಿದ್ದು ಯಾವುದು ಇದೆ? ರಾಜ್ಯದಲ್ಲಿ ಅಭಿವೃದ್ಧಿ ನಿಂತು ಹೋಗಿದೆ. ಇದರ ಬಗ್ಗೆ ಯೋಚಿಸದ ಸರಕಾರ ದೇಶ  ದ್ರೋಹಿಗಳಿಗೆ, ಅಪರಾಧ ಮನೋವೃತ್ತಿಯವರಿಗೆ
ಬೆಂಬಲ, ರಕ್ಷಣೆ ಕೊಡುತ್ತಿದೆ. ಇದೊಂದು ಅಶಿಸ್ತಿನ ಸರಕಾರ ಎಂದು ಕಾಗೇರಿ ಕಿಡಿಕಾರಿದರು.

ಮುಡಾ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಲು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು. ಕಾಂಗ್ರೆಸ್‌ ನಲ್ಲಿ ಪರ್ಯಾಯ ಸಿಎಂ ಮಾಡಿಕೊಳ್ಳಲಿ. ಇಡೀ ಪ್ರಕರಣದ ಸಮಗ್ರ ತನಿಖೆಗೆ ಸಿಬಿಐಗೆ ವಹಿಸಲಿ. ಶಿರಸಿ ಪ್ರತ್ಯೇಕ ಜಿಲ್ಲೆಗೆ ಜನಾಭಿಪ್ರಾಯ ರೂಪಿತವಾದರೆ ಸರಕಾರ ಆ ಕಾಲದ ತೀರ್ಮಾನ ಕೈಗೊಳ್ಳುತ್ತದೆ. ಜನಪ್ರತಿನಿ ಧಿಗಳಲ್ಲಿ, ಜನರಲ್ಲಿ ಹೋರಾಟಗಾರರು ಪ್ರತ್ಯೇಕ
ಜಿಲ್ಲೆಯ ಸ್ಪಷ್ಟತೆ ಮೂಡಿಸುವ ಕಾರ್ಯ ಆಗಲಿ.
●ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ

 

ಟಾಪ್ ನ್ಯೂಸ್

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sirsi-2

Sirsi: ಮೇಘ ಸ್ಪೋಟದಿಂದ ಅಪಾರ ಹಾನಿ: ಭೀಮಣ್ಣ ವೀಕ್ಷಣೆ

13

Dandeli: ಬೀದಿ ನಾಯಿಗಳ ನಿಯಂತ್ರಣಕ್ಕೆ ವಿಳಂಬ

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

15

Dandeli: ಆಲೂರು-ಕೆರವಾಡದ ಮಧ್ಯೆ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

12

Mangaluru: ಪಟಾಕಿ ಮಾರಾಟಕ್ಕೆ 13 ಸ್ಥಳ ನಿಗದಿ; ಬೆಳಕಿನ ಹಬ್ಬಕ್ಕೆ ಭರದ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.