Sirsi: 800 ವರ್ಷಗಳ ಹಿಂದಿನ ವೀರಗಲ್ಲು ಶಾಸನ ಪತ್ತೆ!


Team Udayavani, Jul 11, 2024, 2:56 PM IST

6-sirsi

ಶಿರಸಿ: ಐತಿಹಾಸಿಕ ಪ್ರದೇಶವಾದ ಸೋಂದದ ಕಡೇಗುಂಟದಲ್ಲಿ 800 ವರ್ಷಗಳ ಹಿಂದಿನ ವೀರಗಲ್ಲು ಶಾಸನ ಬೆಳಕಿಗೆ ಬಂದಿದೆ.

ಕಡೇಗುಂಟದ ಶಶಾಂಕ್ ಮರಾಠೆ ಎಂಬವರು ನೀಡಿದ ಮಾಹಿತಿಯ ಮೇರೆಗೆ ಇತಿಹಾಸಕಾರ ಡಾ. ಲಕ್ಷ್ಮೀಶ್ ಸೋಂದಾ ಮತ್ತು ಪ್ರೊ. ನಾಗರಾಜ್ ರಾವ್ ಮೈಸೂರು ಅವರು ಅಧ್ಯಯನ ನಡೆಸಿದ ಹಿನ್ನೆಲೆ ಮಹತ್ವದ ಸಂಗತಿಗಳು ಗಮನಕ್ಕೆ ಬಂದಿದೆ.

ಇದೊಂದು ವೀರಗಲ್ಲು ಶಾಸನವಾಗಿದ್ದು, ಹಳೆಗನ್ನಡ ಲಿಪಿ ಮತ್ತು ಭಾಷೆಯಲ್ಲಿದೆ. ಯುದ್ಧದಲ್ಲಿ ಮಡಿದ ಕಡೇಗುಂಟದ ವೀರಯೋಧನ ನೆನಪಿಗೆ ಈ ಸ್ಮಾರಕ ಶಿಲೆಯನ್ನು ನಿರ್ಮಿಸಲಾಗಿತ್ತು. ಇದರಲ್ಲಿನ ಚಿತ್ರಗಳು, ಶಿಲ್ಪಗಳು ವಿಶೇಷವಾಗಿವೆ.

ಬಹುತೇಕ ಅಕ್ಷರಗಳು ತೃಟಿತಗೊಂಡಿದೆ. ಆದರೆ ತಿಳಿದು ಬರುವ ಕೆಲವು ವಿಷಯಗಳೇನೆಂದರೆ ಬನವಾಸಿ ನಾಡನ್ನು ಮಹಾಮಂಡಳೇಶ್ವರ ಆಳ್ವಿಕೆ ಮಾಡುತ್ತಿದ್ದಾಗ ಮಾರ್ಗಶಿರ ಮಾಸ ಕೃಷ್ಣ ಪಕ್ಷದ ಕುಜವಾರದಂದು ನಡೆದ ಯುದ್ಧದಲ್ಲಿ ಕಡೇಗುಂಟದ ವೀರನಾದ ಮಸಣ್ಣನು ವೀರ ಮರಣವನ್ನಪ್ಪಿದ ಎಂಬುದಾಗಿದೆ. ಇದರಲ್ಲಿ ಕಾರವಾರ ಮತ್ತು ಮಣಲಿಯ ವೀರರಾದ ಕಲಗೌಡ ಮತ್ತು ಬೊಮ್ಮಗೌಡರ ಹೆಸರಿನ ಉಲ್ಲೇಖವು ಇದೆ.

ಸೋದೆ ಅರಸರ ಕಾಲದ ಪೂರ್ವದ ಈ ಶಾಸನ ಸೋಂದಾದ ಕಡೇಗುಂಟದಲ್ಲಿ ಸಿಕ್ಕಿರುವುದು ಸೋದೆ ಅರಸರ ಪೂರ್ವ ಕ್ರಿ.ಶ 12ನೇ ಶತಮಾನದಲ್ಲೇ ಸೋಂದಾ ಒಂದು ಆಡಳಿತಾತ್ಮಕ ಪ್ರದೇಶವಾಗಿತ್ತು ಎಂಬುದನ್ನ ಗಟ್ಟಿಗೊಳಿಸಲು ಸಹಾಯಕವಾಗಿದೆ. 12ನೇ ಶತಮಾನದಿಂದ ಇಂದಿನವರೆಗೂ ʼಕಡೆಗುಂಟʼ ಶಬ್ದ ಪ್ರಯೋಗ ಬದಲಾಗದೆ ಹಾಗೆ ಉಳಿದಿರುವುದು ವಿಶೇಷವಾಗಿದೆ.

ಇಲ್ಲಿರುವ ರಾಮಲಿಂಗೇಶ್ವರ ಗುಡಿ ಕೂಡಾ ಪುರಾತನವಾಗಿದ್ದು, ಇದು ಕೂಡಾ 800 ವರ್ಷಗಳ ಹಿಂದೆಯೇ ನಿರ್ಮಾಣವಾಗಿತ್ತು ಎಂದು ಇತಿಹಾಸಕಾರ ಡಾ.ಲಕ್ಷ್ಮೀಶ್ ಸೋಂದಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.