Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ ನಾಯ್ಕ
Team Udayavani, Sep 30, 2024, 12:42 PM IST
ಶಿರಸಿ: ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ರಾಜ್ಯ ಸರ್ಕಾರ ಪ್ರಸ್ತಾವನೆ ತಿರಸ್ಕರಿಸಿದ್ದು, ಜನರ ಜೀವನಕ್ಕೆ ಅನುಕೂಲ ಆಗುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೂಡ ಸಹಮತ ನೀಡಬೇಕು. ಇದಕ್ಕಾಗಿ ರಾಜ್ಯದ ಹತ್ತು ಜಿಲ್ಲೆಗಳ ಸಂಸದರಿಗೆ ನಾನೂ ಪತ್ರ ಬರೆದು ಒತ್ತಾಯಿಸುವದಾಗಿ ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಗೆ ನಡೆಸಲಾದ ಸಮೀಕ್ಷೆಯೇ ಸಮರ್ಪಕವಾಗಿಲ್ಲ. ವಾಸ್ತವವಾಗಿ ಹಳ್ಳಿಗಳಿಗೆ ತೆರಳಿ ಇಲ್ಲಿಯ ಸ್ಥಿತಿಗತಿ ಸಮೀಕ್ಷೆ ನಡೆಸದೇ ಉಪಗ್ರಹ ಆಧಾರಿತ ಚಿತ್ರ ಬಳಸಿ ಜಾಗ ಗುರುತಿಸಲಾಗಿದೆ. ಇದರಿಂದಾಗಿ ಶಿರಸಿ ತಾಲೂಕಿನ 29 ಗ್ರಾಮ ಪಂಚಾಯಿತಿಗಳು, ಸಿದ್ದಾಪುರ ತಾಲೂಕಿನ 26 ಗ್ರಾಮ ಪಂಚಾಯಿತಿಗಳು ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೆ ಒಳಪಡುತ್ತಿವೆ. ಈ ಬಗ್ಗೆ ರವೀಂದ್ರ ನಾಯ್ಕ ಅವರೂ ಹೋರಾಟ ಮಾಡಿದ್ದಾರೆ. ನಾನೂ ಶಾಸಕನಾಗಿ ಶಾಸನ ಸಭೆಯಲ್ಲೂ ಪ್ರಸ್ತಾಪ ಮಾಡಿದ್ದೆ. ಈಗ ರಾಜ್ಯ ಸರಕಾರ ಇದನ್ನು ತಿರಸ್ಕರಿಸಿದೆ. ಕೇಂದ್ರ ಸರಕಾರ ಇದನ್ನು ಒಪ್ಪುವಂತೆ ಸಂಸದರು ಮಾಡಬೇಕಿದೆ ಎಂದರು.
ಪಶ್ಚಿಮ ಘಟ್ಟದ ಅರಣ್ಯ ಪ್ರದೇಶ ಉಳಿಯಬೇಕು. ಈಗಾಗಲೇ ಇರುವ ಕಾನೂನು, ನೀತಿ ನಿಯಮದಿಂದ ಕಾಡನ್ನು ಅನಾದಿಕಾಲದಿಂದಲೂ ಉಳಿಸಿಕೊಂಡು ಬರಲಾಗಿದೆ. ಮತ್ತೆ ಕಸ್ತೂರಿ ರಂಗನ್ ವರದಿ ಹೇರಿಕೆಯಿಂದ ಸಮಸ್ಯೆ ಆರಂಭವಾಗಲಿದೆ ಹೊರತೂ ಬೇರಾವ ಪ್ರಯೋಜನವಾಗುವುದಿಲ್ಲ ಎಂದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಪ್ರಮುಖರಾದ ಎಸ್.ಕೆ. ಭಾಗ್ವತ್, ಅಬ್ಬಾಸ್ ತೋನಸೆ ಇತರರು ಇದ್ದರು.
ಇದನ್ನೂ ಓದಿ: Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ
Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು
Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Toxic Movie: ಯಶ್ ʼಟಾಕ್ಸಿಕ್ʼ ಅಖಾಡಕ್ಕೆ ಖಡಕ್ ಬ್ರಿಟೀಷ್ ನಟ ಎಂಟ್ರಿ
Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ
Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ
45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್ 45 ಬಗ್ಗೆ ಶಿವಣ್ಣ ಮಾತು
Bunts Hostel ವೃತ್ತ: ಫುಟ್ಪಾತ್ ಇಲ್ಲದೆ ಅಪಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.