![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 2, 2021, 4:40 PM IST
ಶಿರಸಿ: ಉತ್ತರ ಕನ್ನಡ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ, ಕಡಲ ಅಭಿವೃದ್ಧಿ, ಬೃಹತ್ ಸರಕು ಸಾಗಣೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 4 ಬೃಹತ್ ಯೋಜನೆಗಳ ಕುರಿತಂತೆ ಸಮಗ್ರ ಕಾರ್ಯಸಾಧ್ಯತಾ ವರದಿಗಳನ್ನು ಸಾಗರಮಾಲಾ ಸೆಲ್ ಮತ್ತು ಸಾಗರಮಾಲಾ ಅಭಿವೃದ್ಧಿ ಕಂಪನಿ ಲಿಮಿಟೆಡ್ಗೆ ಸಲ್ಲಿಸಲಾಗಿದೆ ಎಂದು ಸಂಸದ ಅನಂತಕುಮಾರ ಹೆಗಡೆ ತಿಳಿಸಿದ್ದಾರೆ.
ಇನ್ನೂ ಎರಡು ಅಭಿವೃದ್ಧಿ ಯೋಜನೆಗಳಿಗಾಗಿ ಸಮಗ್ರ ವರದಿಯನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು. ಈ ಯೋಜನೆಗಳು ಕಾರವಾರ ಬಂದರುಗಳಲ್ಲಿ ಅಗತ್ಯ ಸಲಕರಣೆಗಳನ್ನು ಸ್ಥಾಪಿಸುವುದು, ಕಾರವಾರ ಬಂದರಿನ ಯಾಂತ್ರೀಕರಣ, ಸೀಪ್ಲೇನ್ ಸೌಲಭ್ಯಗಳು ಮತ್ತು ಜಲಮಾರ್ಗ ಅಭಿವೃದ್ಧಿಯಂತಹ ಘಟಕಗಳಗೆ ಮಾತ್ರ ಸೀಮಿತವಾಗಿರದೇ, ಆರ್ಥಿಕ ನೆರವಿನ ಕುರಿತ ಒಪ್ಪಂದಗಳನ್ನು ಒಳಗೊಂಡಿರುವಂತಹ ಪ್ರಸ್ತಾವನೆಗಳನ್ನು ಸಾಗರಮಾಲಾ ಸೆಲ್ಗೆ ಸಲ್ಲಿಸಲಾಗಿದೆ ಎಂದಿದ್ದಾರೆ.
ಬಂದರುಗಳು, ಹಡಗು ಮತ್ತು ಜಲಮಾರ್ಗಗಳು, ಸ್ಥಳೀಯ ಜನಸಂಖ್ಯೆ ಹಾಗೂ ಸರಿಸುಮಾರು 30 ಲಕ್ಷ ಪ್ರವಾಸಿಗರನ್ನು ಸಂಪರ್ಕಿಸುವ ಜೊತೆಗೆ ಸಾರಿಗೆ ಮತ್ತು ಬೃಹತ್ ಸರಕು ಸಾಗಾಣಿಕೆ ಅಗತ್ಯತೆಗಳನ್ನು ಪೂರೈಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಇದಲ್ಲದೆ, ಅಭಿವೃದ್ಧಿಪಡಿಸಿದ ಸೌಲಭ್ಯಗಳು ಪಶ್ಚಿಮ ಕರಾವಳಿಯಲ್ಲಿ ಕಡಲ ಕಾರ್ಯಾಚರಣೆಗಳಿಗೆ ಪ್ರಮುಖ ಮುಖ್ಯ ಭೂಮಿಕೆಯಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಆ ಮೂಲಕ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಆದ್ದರಿಂದ, ಭಾರತದ ಸಾಗರ ವಲಯವನ್ನು ಬಲಪಡಿಸುವ ಪ್ರಧಾನ ಮಂತ್ರಿಯವರ ದೂರದೃಷ್ಟಿ ಯೋಜನೆಗಳಿಗೆ ಅನುಮೋದನೆ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಕೇಂದ್ರದ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನವಾಲ ಅವರಿಗೆ ಅನಂತಕುಮಾರ ಹೆಗಡೆ ಅವರು ಪತ್ರ ಮುಖೇನ ವಿನಂತಿಸಿದ್ದಾರೆ ಎಂದು ಪ್ರಕಟನೆಯಲ್ಲಿ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ತಿಳಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.