ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಪ್ರತಿಭೆ: ನಯನಾ


Team Udayavani, Oct 15, 2021, 6:00 PM IST

14

ಮುಂಡಗೋಡ: ತಾಲೂಕಿನ ಪುಟ್ಟ ಗ್ರಾಮ ಚಳಗೇರಿಯ ಧನಗರ ಗೌಳಿ ಕುಟುಂಬದ ಯುವತಿಯೊಬ್ಬರು ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಮಿಂಚುವ ಮೂಲಕ 18 ವರ್ಷದ ವಯೋಮಿತಿಯಲ್ಲಿ ಕರ್ನಾಟಕದಿಂದ ಪ್ರತಿನಿಧಿಸಿದ ಏಕೈಕ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಚಳಗೇರಿಯ ನಯನಾ ಕೊಕರೆ ಈ ಯುವತಿ. ಪ್ರಸ್ತುತ ಮುಂಡಗೋಡದ ಜೂನಿಯರ್ ಕಾಲೇಜ್‌ನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದು, ಬ್ರಿಜಸ್ ಆಫ್ ಸ್ಟೋಟ್ಸ್ ನಲ್ಲಿ ತರಬೇತಿ ಪಡೆದ ನಯನಾ 2021ರ ಅಕ್ಟೋಬರ್ 11ರಂದು ದೆಹಲಿಯ ಜವಾಹರಲಾಲ ನೆಹರು ಕ್ರೀಡಾಂಗಣದಲ್ಲಿ ನಡೆದ 3ನೇ ನ್ಯಾಷನಲ್ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಿ 400ಮೀಟರ್ ಓಟದ ಸ್ಫರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ, ಜಿಲ್ಲೆ ಮತ್ತು ತಾಲೂಕಿನ ಕೀರ್ತಿ ಪತಾಕೆ ಹಾರಿಸಿದ್ದಾರೆ.

ಇವರು ದಟ್ಟ ಅಡವಿಯಲ್ಲಿ ವಾಸಿಸುವ ದನಗರ ಗೌಳಿ ಜನಾಂಗದ ಗಂಗಾರಾಮ ಕೊಕರೆ ಮತ್ತು ಗಂಗುಬಾಯಿ ದಂಪತಿಯ ಪುತ್ರಿ. ತಮ್ಮ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಚಳಗೇರಿ ಗ್ರಾಮದಲ್ಲಿ ಮುಗಿಸಿದರು. ಕಾತೂರಿನ ಪ್ರೌಢಶಾಲೆಯಲ್ಲಿ8 ಮತ್ತು 9ನೇ ತರಗತಿವರೆಗೆ ವ್ಯಾಸಂಗ ಮಾಡಿ ನಂತರ ಲೊಯೋಲ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ.ಯನ್ನು ಮುಗಿಸಿದರು. 7ನೇ ತರಗತಿಯಲ್ಲಿದ್ದಾಗ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ 100ಮೀ., 200ಮೀ., ಮತ್ತು 400ಮೀ. ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡಿದ್ದಾರೆ. 10ನೇ ತರಗತಿಯಲ್ಲಿ ಓದುತ್ತಿರುವಾಗ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿ 4ನೇ ಸ್ಥಾನ ಪಡೆದಿದ್ದಾರೆ. ಬಾಲ್ಯದಿಂದಲೂ ಅಥ್ಲೆಟಿಕ್ಸ್ ನಲ್ಲಿ ತುಂಬಾ ಆಸಕ್ತಿ ಹೊಂದಿದ್ದರು. ಅವರ ತಂದೆ-ತಾಯಿ ಕಷ್ಟದಲ್ಲಿಯೂ ಅವರಿಗೆ ಆತ್ಮಸ್ಥೈರ್ಯ ತುಂಬುತ್ತಾ ಬಂದಿದ್ದಾರೆ.

ಕಳೆದ ಮೂರು ವರ್ಷದಿಂದ ಬ್ರಿಜಸ್ ಆಫ್ ಸ್ಟೋಟ್ಸ್ ನಿಂದ ಅಥ್ಲೆಟಿಕ್ಸ್ ತರಬೇತಿ ಪಡೆಯುತ್ತಾ ಬಂದಿದ್ದೇನೆ. ಕ್ರೀಡೆಯಲ್ಲಿ ಆಸಕ್ತಿ ಇದ್ದವರು ತಾಲೂಕಿನಲ್ಲಿ ಬಹಳಷ್ಟು ಕ್ರೀಡಾಪಟುಗಳು ಇದ್ದಾರೆ. ಅದರಲ್ಲಿಯೂ ಚೆನ್ನಾಗಿ ಸಾಧನೆ ಮಾಡುವವರು 13 ಪ್ರತಿಭೆಗಳು ಇದ್ದಾರೆ. ಉತ್ತಮ ಅಭ್ಯಾಸಕ್ಕಾಗಿ ತಾಲೂಕಿನ ಕ್ರೀಡಾಂಗಣದ ಓಡುವ ಟ್ರ್ಯಾಕ್ ಸರಿಪಡಿಸಿದರೆ ಇನ್ನೂ ಹೆಚ್ಚಿನ ಪ್ರತಿಭೆಗಳು ಸಾಧನೆ ಮಾಡಬಹುದು. ದೆಹಲಿಯಲ್ಲಿ ನಡೆದ ಕ್ರೀಡಾಕೂಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ್ದೇನೆ. ಮುಂಬರುವ ಒಲಂಪಿಕ್ಸ್ ಗೆ ಹೆಚ್ಚಿನ ತರಬೇತಿ ಪಡೆದು ಗುರಿ ಮುಟ್ಟುವ ಪ್ರಯತ್ನ ಮಾಡುತ್ತೇನೆ. -ನಯನಾ ಕೊಕರೆ, ಅಥ್ಲೀಟ್

 

ಇದನ್ನೂ ಓದಿ: ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

ನಯನಾ ಅವರ ಹಾಗೆ ತಾಲೂಕಿನಲ್ಲಿ ಬಹಳಷ್ಟು ಪ್ರತಿಭೆಗಳು ಇದ್ದಾರೆ. ಅವರು ಕೂಡ ಮುಂದೆ ಬರಬೇಕು. ಅಂತಹ ಕ್ರೀಡಾಪಟುಗಳಿಗೆ ಬ್ರಿಜಸ್ ಆಫ್ ಸ್ಟೋರ್ಟ್ಸ್ ಬೆನ್ನೆಲುಬು ಆಗಿ ನಿಲ್ಲುತ್ತದೆ. ಗ್ರಾಮೀಣ ಭಾಗದ ಕೆಲವು ಕಡೆ ಹೆಣ್ಣು ಮಕ್ಕಳಿಗೆ ಬಾಲ್ಯದಲ್ಲಿಯೇ ಬೇಗ ಮದುವೆ ಮಾಡಿ ಬಿಡುತ್ತಾರೆ. ಅಂತಹ ಸಾಧನೆ ಮಾಡುವ ಪ್ರತಿಭೆಗಳ ಆಸೆಗೆ ತಣ್ಣೀರೆರೆಚಿದಂತಾಗುತ್ತದೆ. ಕ್ರೀಡೆಯಲ್ಲಿ ಆಸಕ್ತಿ ಇದ್ದ ಮಕ್ಕಳಿಗೆ ಪಾಲಕರು ಪ್ರೋತ್ಸಾಹ ನೀಡಬೇಕು. ಮುಂದೆ ಅವರು ನಿಮ್ಮ ಹೆಸರು ತರುತ್ತಾರೆ. -ರಿಜ್ವಾನ್ ಬೆಂಡಿಗೇರಿ, ಬ್ರಿಜಸ್ ಆಫ್  ಸ್ಟೋಟ್ಸ್ ತರಬೇತುದಾರ

ಮುನೇಶ ಬಿ. ತಳವಾರ.

 

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.