![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 2, 2024, 5:23 PM IST
ಕಾರವಾರ: ರಾಮನ ವಿಗ್ರಹಕ್ಕೆ ಮೊದಲ ಪೂಜೆ ಬ್ರಾಹ್ಮಣರಿಂದ ಆಗಬೇಕು, ಅದು ನಮ್ಮ ಸಂಪ್ರದಾಯ ಎಂದು ಮೀನುಗಾರಿಕೆ ಮತ್ತು ಬಂದರು ಸಚಿವ ಮಾಂಕಾಳು ವೈದ್ಯ ಕಾರವಾರದಲ್ಲಿ ಹೇಳಿದರು.
ಮಾಧ್ಯಮಗಳ ಜೊತೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು ಬಿಜೆಪಿ ಪ್ರತಿಯೊಂದರಲ್ಲೂ ರಾಜಕೀಯ ಮಾಡುತ್ತದೆ. ರಾಮನ ವಿಷಯದಲ್ಲೂ ಅದು ರಾಜಕೀಯ ಮಾಡುತ್ತದೆ. ನಾವು ಜನರ ಬಡತನ ಹೋಗಲಾಡಿಸಲು ರಾಜಕೀಯ ಮಾಡುತ್ತೇವೆ. ರಾಮ ಎಲ್ಲರಿಗೂ ಸೇರಿದವನು. ಬಿಜೆಪಿಯವರ ಕ್ಷುಲ್ಲಕತನವನ್ನು ರಾಮನೇ ನೋಡಿಕೊಳ್ಳುತ್ತಾನೆ ಎಂದರು.
ನಾನು ಸಹ ಆಯೋಧ್ಯೆಗೆ ಹೋಗುವೆ. ಹೇಗೂ ವಿಮಾನ ನಿಲ್ದಾಣವಾಗಿದೆ. ಟಿಕೆಟ್ ಸಿಕ್ಕರೆ ಜ.22ಕ್ಕೆ ಹೋಗುವೆ ಎಂದರು.
ನಾನು ಕಾಂಗ್ರೆಸ್ ಮನುಷ್ಯ. ರಾಮಮಂದಿರ ನಿರ್ಮಾಣಕ್ಕೆ ನಾನು ಹಣ ಕೊಟ್ಟಿದ್ದೇನೆ. ರಾಮ ಎಲ್ಲರಿಗೂ ಸೇರಿದವ. ನಮ್ಮ ಹೈಕಮಾಂಡ್ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹೈಕಮಾಂಡ್ ಸಹ ಆಯೋಧ್ಯಗೆ ಹೋಗಬಹುದು. ನಾನು ಜ.22 ಕ್ಕೆ ಆಗದಿದ್ದರೂ ಮುಂದಿನ ದಿನಗಳಲ್ಲಿ ಹೋಗಿ ಬರುವೆ. ದೇವರ ಭಕ್ತಿ ವೈಯಕ್ತಿಕ ನೆಲೆಯದ್ದು ಎಂದರು.
ಆಯೋಧ್ಯೆ ಬಾಬರಿ ಮಸೀದಿ ಕೆಡವಿದವರನ್ನು ಬಂಧಿಸಲಾಗುತ್ತಿದೆಯಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ವೈದ್ಯ, ಕೋರ್ಟ್ ಮಾರ್ಗದರ್ಶನದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಅಪಾರಾಧ ಎಷ್ಟೇ ಹಳೆಯದಾಗಿರಲಿ, ಅವರನ್ನು ಹಾಗೆ ಬಿಡಲು ಸಾಧ್ಯವಾ? ಕಾನೂನು ಪ್ರಕಾರ ಪೊಲೀಸರು ಕ್ರಮ ತೆಗೆದುಕೊಂಡಿರುತ್ತಾರೆ. ಇದರಲ್ಲೂ ಬಿಜೆಪಿಗರು ರಾಜಕೀಯ ಹುಡುಕುತ್ತಾರೆ ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.