ಸೇತುವೆಗೆ ಹಾಕಿದ್ದ ಮಣ್ಣಿನಿಂದ ನೆರೆ ಭೀತಿ

ವಿವಿಧ ಸಂಘಟನೆ-ಮಂಜಗುಣಿ-ಗಂಗಾವಳಿ ಭಾಗದ ನಾಗರಿಕರಿಂದ ಪ್ರತಿಭಟನೆ ನಾಡಿದ್ದು

Team Udayavani, Jun 2, 2022, 11:48 AM IST

6

ಅಂಕೋಲಾ: ಮಂಜಗುಣಿ-ಗಂಗಾವಳಿ ನಡುವಿನ ಸೇತುವೆ ನಿರ್ಮಾಣ ಹಾಗೂ ಕೋಡ್ಸಣಿಯಲ್ಲಿ ಸೇತುವೆ ನಿರ್ಮಾಣಕ್ಕೆ ಹಾಕಲಾದ ಬೃಹತ್‌ ಪ್ರಮಾಣದ ಮಣ್ಣಿನಿಂದ ಮಳೆಗಾಲದಲ್ಲಿ ನೆರೆಯ ಭೀತಿಯಿದ್ದು, ಮಣ್ಣನ್ನು ತುರ್ತಾಗಿ ತೆಗೆಸುವಂತೆ ಒತ್ತಾಯಿಸಿ ಜೂ.3 ರಂದು ಬೆಳಗ್ಗೆ 11ಕ್ಕೆ ವಿವಿಧ ಸಂಘಟನೆಗಳು ಮತ್ತು ನಾಗರಿಕರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಲಿದ್ದಾರೆ.

ಕಳೆದ ಮೂರು ವರ್ಷಗಳಿಂದ ಗಂಗಾವಳಿ ನದಿಗೆ ನೆರೆ ಬರುತ್ತಿದ್ದು, ಇಲ್ಲಿಯ ಜನರ ಜೀವನ ಸಂಕಷ್ಟಕ್ಕೆ ದೂಡಿದಂತಾಗಿದೆ. 1962ರಲ್ಲಿ ಗಂಗಾವಳಿ ನದಿಗೆ ಒಮ್ಮೆ ಮಹಾಪೂರ ಬಂದದ್ದು ಬಿಟ್ಟರೆ ಇನ್ನು ಯಾವುದೇ ಕಾರಣಕ್ಕೂ ನೆರೆ ಬಂದಿರಲಿಲ್ಲ. ಆದರೆ ಕೋಡ್ಸಣಿ ಸಮೀಪ ಗಂಗಾವಳಿ ನದಿಗೆ ಐಆರ್‌ಬಿಯವರು ಸೇತುವೆ ನಿರ್ಮಿಸಲು ಹಾಕಿದ ಮಣ್ಣು ತೆಗೆಯದೆ ಇರುವುದು ಮತ್ತು ಮಂಜಗುಣಿ-ಗಂಗಾವಳಿ ನಡುವಿನ ಸೇತುವೆ ನಿರ್ಮಾಣಕ್ಕೆ ಹಾಕಿದ್ದ ಮಣ್ಣನ್ನು ತೆಗೆಯದೆ ಇರುವುದರಿಂದ ಕೃತಕ ನೆರೆ ಉಂಟಾಗುತ್ತಿದೆ. ಹೀಗಾಗಿ ತಹಶೀಲ್ದಾರರು ತಕ್ಷಣ ಮಣ್ಣನ್ನು ತೆಗೆಸುವಂತೆ ಒತ್ತಾಯಿಸಿದ್ದಾರೆ.

ಮಂಜಗುಣಿ, ಬಿಳಿಹೊಂಯ್ಗಿ ಹಿಚ್ಕಡ, ದಂಡೆಭಾಗ, ಅಗ್ರಗೋಣ, ಜೂಗ, ಸಗಡಗೇರಿ, ಶಿರೂರು, ಚಂದುಮಠ, ಉಳವರೆ, ಕೋಡ್ಸಣಿ, ವಾಸರಕುದ್ರಿಗೆ, ಹೊಸೂರು, ಮೊಗಟಾ, ಮೊರಳ್ಳಿ, ಶಿರಗುಂಜಿ, ಹೊಳೆಮಕ್ಕಿ, ಹಡಿನಗದ್ದೆ, ಹೊನ್ನಳ್ಳಿ, ಅಗಸೂರು, ಹಿಲ್ಲೂರು, ಹೊಸಕಂಬಿ, ಸುಂಕಸಾಳ, ಡೋಂಗ್ರಿ ಸೇರಿದಂತೆ ಹತ್ತಾರು ಗ್ರಾಮಗಳು ನೆರೆಯಿಂದ ಈಗಾಗಲೇ ಬಸವಳಿದಿದ್ದಾರೆ. ಈ ಬಾರಿಯೂ ನೆರೆ ಉಂಟಾದರೆ ಇನ್ನು ಅವರ ಜೀವನ ಹೇಳತೀರದ್ದಾಗಿದೆ.

ಈ ಬಗ್ಗೆ ಸ್ಥಳೀಯರು ತಹಶೀಲ್ದಾರ್‌ ಗೆ ಕೇಳಿದರೆ ತಾವು ಗುತ್ತಿಗೆದಾರರಿಗೆ ಮಣ್ಣು ತೆಗೆಯಲು ನೋಟಿಸ್‌ ನೀಡಿದ್ದೇವೆ ಎನ್ನುತ್ತಿದ್ದಾರೆ. ಆದರೆ ಮಳೆಗಾಲ ಸಮೀಪಿಸಿದರೂ ಕೂಡ ಇನ್ನುವರೆಗೂ ಮಣ್ಣು ತೆಗೆಯದೆ ಹಾಗೆಯೇ ಬಿಡಲಾಗಿದೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಜೂ.3ರ ಬೆಳಗ್ಗೆ 11ಕ್ಕೆ ಮನವಿ ಸಲ್ಲಿಸಿ ಜತೆಗೆ ತಹಶೀಲ್ದಾರರನ್ನು ಸ್ಥಳಕ್ಕೆ ಕರೆದುಕೊಂಡು ಹೋಗಲು ತೀರ್ಮಾನಿಸಿದ್ದಾರೆ.

ಸರಿಯಾದ ಸಮಯಕ್ಕೆ ಅಂಕೋಲಾ ತಹಶೀಲ್ದಾರ್‌ ಕಚೇರಿಗೆ ಜನರು ಆಗಮಿಸುವಂತೆ ಪುನೀತ ರಾಜಕುಮಾರ ಅಭಿಮಾನಿ ಬಳಗದ ಅಧ್ಯಕ್ಷ ನಾಗರಾಜ ಮಂಜಗುಣಿ, ಗೌರವಾಧ್ಯಕ್ಷ ಶ್ರೀಪಾದ ನಾಯ್ಕ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ನವೋದಯ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಮಧುಕರ ಗೌಡ, ಕಾರ್ಯದರ್ಶಿ ಮಂಜುನಾಥ ಗೌಡ, ಪ್ರಮುಖರಾದ ಬೀರಾ ಗೌಡ, ರಮೇಶ ಗೌಡ, ಜಿಲ್ಲಾ ಗ್ರಾಮೀಣ ಯುವ ಹೋರಾಟ ಸಮಿತಿ ಅಧ್ಯಕ್ಷ  ದೇವರಾಯ ನಾಯಕ ವಿನಂತಿಸಿದ್ದಾರೆ.

ಟಾಪ್ ನ್ಯೂಸ್

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-asdsada

Yellapur; ಪಣಸಗುಳಿ ಸೇತುವೆ ಮುಳುಗಡೆ: ಸಂಚಾರ ಸ್ಥಗಿತ

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.