![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 26, 2019, 11:54 AM IST
ಅಂಕೋಲಾ: ತೀವ್ರ ಹದಗೆಟ್ಟ ಮಲಗೇರಿ ರಸ್ತೆ
ಅಂಕೋಲಾ: ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ವಂದಿಗೆ ಗ್ರಾಪಂ ವ್ಯಾಪ್ತಿಯ, ಬೊಳೆ ಗ್ರಾಮ ಜಮಗೋಡದ ಮಲಗೇರಿ ರಸ್ತೆ ತೀವ್ರ ಹದಗೆಟ್ಟಿದ್ದು ಸಂಚಾರಕ್ಕೆ ಅಡಚಣೆಯಾಗಿದೆ.
ರಸ್ತೆ ತೀವ್ರ ಹದಗೆಟ್ಟಿರುವ ಪರಿಣಾಮ ಇಲ್ಲಿ ವಾಸಿಸುವ 40ಕ್ಕೂ ಹೆಚ್ಚು ಕುಟುಂಬಗಳಿಗೆ ಸಂಚಾರಕ್ಕೆ ಅಯೋಗ್ಯವಾಗಿ ಪ್ರತಿನಿತ್ಯ ಅಪಘಾತಕ್ಕೆ ದಾರಿ ಮಾಡಿಕೊಡುತ್ತಿದೆ. ಈ ರಸ್ತೆಯನ್ನೆ ಅವಲಂಬಿಸಿರುವ ವಿದ್ಯಾರ್ಥಿಗಳು, ಪಾದಚಾರಿಗಳು, ವಾಹನ ಸವಾರರು ಪರದಾಡುವಂತಾಗಿದೆ. ಗ್ರಾಪಂ ಸದಸ್ಯೆ ಸರೋಜಾ ನಾಯಕ ಗ್ರಾಮ ವಿಕಾಸ ಯೋಜನೆಯಡಿ ಈ ರಸ್ತೆಯ ಅಭಿವೃದ್ಧಿಗೆ ಈ ಹಿಂದೆ 15 ಲಕ್ಷ ರೂ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದ್ದರು. ಆದರೆ ಗ್ರಾಮ ವಿಕಾಸ ಯೋಜನೆಯಿಂದ ದೊರೆಕಿದ್ದು ಮಾತ್ರ 8 ಲಕ್ಷ ರೂ ಮಾತ್ರ. ಹೀಗಾಗಿ ಈ ಅನುದಾನ ರಸ್ತೆಯ ಅಭಿವೃದ್ಧಿಗೆ ಸಮರ್ಪಕವಾಗಿ ಸಾಕಾಗದೆ ರಸ್ತೆ ಕಾಮಗಾರಿ ಅರ್ಧಕ್ಕೆ ನಿಲ್ಲುವಂತಾಯಿತು.
ಇನ್ನು 500 ಮೀ ರಸ್ತೆ ಆದಲ್ಲಿ ಗ್ರಾಮಸ್ಥರ ರೋಧನೆ ನಿಲ್ಲಲಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಮಲಗೇರಿ ರಸ್ತೆ ಅಭಿವೃದ್ಧಿಗೆ ಆಡಳಿತ ವ್ಯವಸ್ಥೆ ಮುಂದಾಗುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.