![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 21, 2023, 7:59 PM IST
ಅಂಕೋಲಾ : ನನ್ನ ಮೇಲೆ ಪತ್ರಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿದವರಿಗೆ ನ್ಯಾಯಾಲಯದಲ್ಲಿ ಪುರಾವೆ ಒದಗಿಸಲು ಸಾಧ್ಯವಾಗಿಲ್ಲವೇಕೆ? ಇವರೆಲ್ಲ ಪತ್ರಿಕೆಯಲ್ಲಿ ಹೀರೋ, ನ್ಯಾಯಾಲಯದಲ್ಲಿ ಜೀರೋ ಎಂದು ಶಾಸಕಿ ರೂಪಾಲಿ ನಾಯ್ಕ ವ್ಯಂಗ್ಯವಾಡಿದ್ದಾರೆ.
ಶನಿವಾರ ಸಂಜೆ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನದ ಹಿನ್ನೆಲೆಯಲ್ಲಿ ಬೇಳಾಬಂದರದ ವೀರಭದ್ರದೇವಸ್ಥಾನದ ಬಳಿ ಜರುಗಿದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಮತ್ತು ಕ್ಷೇತ್ರದ ಸಾಧನೆಗಳ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.
ನನ್ನ ಶಾಸಕತ್ವದ ಅವಧಿಯಲ್ಲಿ ಎರಡು ವರ್ಷ ನೆರೆಯಲ್ಲಿ ತೊಂದರೆಯಾದರೆ, ಒಂದು ವರ್ಷ ಕೊರೋನಾ ಭಾದಿಸಿದೆ. ಇರುವ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ, ಸಚಿವರ ಮೇಲೆ ಒತ್ತಡ ಹಾಕಿ ಅನುದಾನ ತಂದು ಅಭಿವೃದ್ದಿ ಮಾಡಿದ್ದೇನೆ. ನಾನು ತಂದ ಅನುದಾನಕ್ಕೆ ಕರಪತ್ರ ಬಿಡುಗಡೆ ಮಾಡಿದ್ದೇನೆ. ಆದರೂ ವಿನಾಕಾರಣ ಪತ್ರಿಕೆಯಲ್ಲಿ ನನ್ನ ಮೇಲೆ ಶೇ. 40 ರ ಭ್ರಷ್ಟಾಚಾರದ ಆರೋಪ ಮಾಡಿ ನನ್ನನ್ನು ಕುಗ್ಗಿಸುವ ಹುನ್ನಾರ ನಡೆಸಿದ್ದಾರೆ. ಆದರೆ ಇವರಿಗೆ ನ್ಯಾಯಾಲಯದಲ್ಲಿ ಇನ್ನೂ ಪುರಾವೆ ಒದಗಿಸಲು ಸಾಧ್ಯವಾಗಿಲ್ಲ ಎಂದರು. ಯಾವುದೇ ಆರೋಪದ ಬಗ್ಗೆ ನಾನು ತಲೆಕೆಡಿಸಿಕೊಳ್ಳಲಾರೆ. ಮನಸಾಕ್ಷಿಗೆ ಬದ್ಧಳಾಗಿ ಕೆಲಸ ಮಾಡುತ್ತಿದ್ದೇನೆ. ಬಿಜೆಪಿ ಕಾರ್ಯಕರ್ತರು ಮನೆಮನೆಗೆ ಹೋಗಿ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ದಿಯನ್ನು ಜನರಿಗೆ ತಲುಪಿಸಬೇಕು ಎಂದರು.
ಹಿಂದುಳಿದ ವಿಭಾಗದ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ ಮಂಡಲಾಧ್ಯಕ್ಷ ಸಂಜಯ ನಾಯ್ಕ, ಪ್ರಮುಖರಾದ ಜಗದೀಶ ನಾಯಕ ಮೊಗಟಾ, ಸದಾನಂದ ನಾಯಕ, ಅನುರಾಧಾ ನಾಯ್ಕ, ಶಾಂತಾ ಬಾಂದೇಕರ್, ಮಾರುತಿ ಗೌಡ, ರವಿ ನಾಯ್ಕ ಬೇಳ, ಶ್ರೀಧರ ನಾಯ್ಕ, ಹೂವಾ ಖಂಡೇಕರ್ ಮತ್ತಿತರರು ಇದ್ದರು. ರಾಘು ಭಟ್ಟ ನಿರ್ವಹಿಸಿದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.