![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 24, 2023, 10:27 PM IST
ಶಿರಸಿ: ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ದಿ ತೋಟಗಾರ್ಸ್ ರೂರಲ್ ಕೋ-ಆಪರೇಟಿವ್ ಅಗ್ರಿಕಲ್ಚರಲ್ ಕ್ರೆಡಿಟ್ ಸೊಸೈಟಿ ಲಿ., (ಟಿಆರ್ಸಿ) ಶಿರಸಿ ಇದರ ಆಡಳಿತ ಮಂಡಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಸಂಸ್ಥೆಯ ಹಾಲಿ ಅಧ್ಯಕ್ಷ ಹಿರಿಯ ಸಹಕಾರಿ ರಾಮಕೃಷ್ಣ ಹೆಗಡೆ ಕಡವೆ ಬಳಗಕ್ಕೆ ಮತದಾರರು ಪ್ರಚಂಡ ಬಹುಮತ ನೀಡಿ ಗೆಲುವನ್ನು ದಾಖಲಿಸಿದ್ದಾರೆ.
ಸಾಮಾನ್ಯ ಕ್ಷೇತ್ರದಿಂದ ಗರಿಷ್ಟ ಮತ ಪಡೆದು ಆಯ್ಕೆಯಾದವರ ಪಟ್ಟಿ ಹೀಗಿದೆ.
ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ, ಗಣಪತಿ ಶೇಷಗಿರಿ ರಾಯ್ಸದ್, ರಮಾಕಾಂತ ವೆಂಕಟ್ರಮಣ ಹೆಗಡೆ ಚಿಪಗಿ, ವಿಘ್ನೇಶ್ವರ ರಾಮಚಂದ್ರ ಹೆಗಡೆ ಅಗಸಾಲ ಕಿಬ್ಬಳ್ಳಿ, ವಿಶ್ವನಾಥ ಗೋಪಾಲಕೃಷ್ಣ ಹೆಗಡೆ ಸೋಮ್ನಳ್ಳಿ, ವಿಶ್ವಾಸ ಪುಂಡಲೀಕ ಬಲ್ಸೆ ಚವತ್ತಿ, ಶಿವಾನಂದ ಗಣಪತಿ ಭಟ್ಟ ನಿಡಗೋಡ, ಸುಬ್ರಾಯ ನಾರಾಯಣ ಹೆಗಡೆ ಹಾವಳಿಮನೆ ವಿಜಯದ ನಗೆ ಬೀರಿದ್ದಾರೆ.
ಹಿಂದುಳಿದ ‘ಬ’ ವರ್ಗದಿಂದ ರಾಮಕೃಷ್ಣ ಹೆಗಡೆ ಕಡವೆ ಬಳಗದಿಂದ ಸ್ಪರ್ಧಿಸಿದ್ದ ಸಂತೋಷಕುಮಾರ ಚಾಮರಾಜ ಗೌಡರ ತೋಟದ ಕಸಗೆ ಗೆಲುವನ್ನು ಕಂಡಿದ್ದಾರೆ. ಒಟ್ಟೂ 2087 ಅರ್ಹ ಶೇರು ಮತದಾರರಲ್ಲಿ ಚಿತ್ರನಟ ನೀರ್ನಳ್ಳಿ ರಾಮಕೃಷ್ಣ, ಶಾಸಕ ಭೀಮಣ್ಣ ನಾಯ್ಕ ಸೇರಿದಂತೆ 1,702 ಶೇರುದಾರರು ಮತವನ್ನು ಚಲಾಯಿಸಿದ್ದರು.
ಇನ್ನುಳಿದಂತೆ ಹಿಂದುಳಿದ ‘ಅ’ 1 ಸ್ಥಾನಕ್ಕೆ ಈರಾ ನಾರಾಯಣ ಗೌಡ ಕಳವೆ, ಸಾಮಾನ್ಯ ಮಹಿಳಾ ಅಭ್ಯರ್ಥಿಗಳ 2 ಸ್ಥಾನಕ್ಕೆ ಹಾಲಿ ನಿರ್ದೇಶಕರುಗಳಾಗಿದ್ದ ಇಂದಿರಾ ಹೆಗಡೆ ಮತ್ತು ಕಲ್ಪನಾ ಕೊಪ್ಪಳ ಅವಿರೋಧವಾಗಿ ಆಯ್ಕೆಯಾಗಿದ್ದರು. ಸಾಮಾನ್ಯ ಕ್ಷೇತ್ರದಿಂದ 8 ಜನರಿಗೆ ಅವಕಾಶವಿದ್ದು, 11 ಜನ ಉಮೇದುವಾರಿಕೆ ತೋರಿದ್ದರು. ಹಿಂದುಳಿದ ವರ್ಗ ‘ಬ’ 1 ಸ್ಥಾನವಿದ್ದು, 2 ಜನರು ಮಾತ್ರ ಉಮೇದುವಾರಿಕೆ ತೋರಿಸಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.