ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು


Team Udayavani, Jul 2, 2024, 12:57 PM IST

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಶಿರಸಿ: ಅತ್ಯಂತ‌ ಕಿರಿಯ ವಯಸ್ಸಿನಲ್ಲೇ ವಿಶ್ವಶಾಂತಿಗೆ ಯಕ್ಷ ನೃತ್ಯ ಮೂಲಕ ಕೊಡುಗೆ ನೀಡುತ್ತಿರುವ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಹೆಸರು ಇದೀಗ ಜಾಗತಿಕ ಮಟ್ಟದಲ್ಲೂ ದಾಖಲಾಗಿದೆ.

ಲಂಡನ್ ಮೂಲದ ಪ್ರತಿಷ್ಠಿತ ವಲ್ಡ್೯ ರೆಕಾರ್ಡ್ ಸಂಸ್ಥೆಯು ತುಳಸಿ ಹೆಗಡೆ ಹೆಸರನ್ನು ತನ್ನ ವಿಶ್ವದಾಖಲೆಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಂಡಿದೆ. ಯಕ್ಷಗಾನ ಕಲಾ‌ ಪ್ರಕಾರದ ಮೂಲಕ ವಿಶ್ವಶಾಂತಿಗೆ ಈವರೆಗೆ 9 ಕಲಾ ಕುಸುಮದ ಮೂಲಕ ನೀಡುತ್ತಿರುವ ಕೊಡುಗೆಗಳನ್ನು ಗಮನಿಸಿ ಮಕ್ಕಳ ವಿಭಾಗದ ತನ್ನ ದಾಖಲಾತಿಯಲ್ಲಿ ಸೇರಿಸಿಕೊಂಡಿದೆ.

ಬೆರಳ ತುದಿಯಲ್ಲಿ ನರ್ತನ ಮಾಡುವ ವಿದೇಶವೊಂದರ ನೃತ್ಯ ಕಲಾ ಪ್ರಕಾರ ಹೊರತು ಪಡಿಸಿದರೆ ಈವರೆಗೆ ಪ್ರಪಂಚದ ಯಾವುದೇ ಕಲಾ ಪ್ರಕಾರ ಈ‌ ದಾಖಲಾತಿ ಪಟ್ಟಿಗೆ ಸೇರ್ಪಡೆ ಆಗಿರಲಿಲ್ಲ ಎಂದು ಈ ಸಂಸ್ಥೆ ತಿಳಿಸಿದೆ. ಈ ದಾಖಲೆಗೆ ತುಳಸಿ ಹೆಗಡೆ ಹೆಸರು ಸೇರ್ಪಡೆಯಿಂದ ಯಕ್ಷ ರೂಪಕದ ಮೂಲಕ ಯಕ್ಷಗಾನದ ಹೆಸರೂ ಇದೇ ಪ್ರಥಮ ಬಾರಿಗೆ ಸೇರಿದಂತಾಗಿದೆ.

ಶಿರಸಿ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯಲ್ಲಿ 10ನೇಯ ವರ್ಗ ಓದುತ್ತಿರುವ ತುಳಸಿ ಹೆಗಡೆ ತನ್ನ ಮೂರು ವರ್ಷದಿಂದಲೇ ಯಕ್ಷಗಾನ ಕ್ಷೇತ್ರಕ್ಕೆ ಬಾಲ ಹೆಜ್ಜೆ ಇಟ್ಟವಳು.

ಐದೂವರೆ ವರ್ಷದಿಂದ ವಿಶ್ವ ಶಾಂತಿ ರೂಪಕಗಳನ್ನು ಪ್ರಸ್ತುತಗೊಳಿಸುತ್ತಿದ್ದಾಳೆ. ಪೌರಾಣಿಕ ಆಖ್ಯಾನಗಳ 9 ರೂಪಕಗಳನ್ನು ಪ್ರಸ್ತುತಗೊಳಿಸುವ ಈಕೆ, ರಾಜ್ಯ, ಹೊರ ರಾಜ್ಯಗಳಲ್ಲಿ 850ಕ್ಕೂ ಅಧಿಕ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾಳೆ. ಹಿರಿಯ ಕಲಾವಿದರ ಜೊತೆ ಬೇರೆ ಬೇರೆ ಯಕ್ಷಗಾನ ಆಖ್ಯಾನಗಳಲ್ಲೂ ಪಾತ್ರ ಮಾಡುತ್ತಿದ್ದಾಳೆ.

ಈಗಾಗಲೇ ಇಂಡಿಯಾ ಬುಕ್ ಆಪ್ ರೆಕಾರ್ಡನಲ್ಲಿಯೂ ದಾಖಲಾಗಿದ್ದು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೀಡುವ ರಾಜ್ಯ ಮಟ್ಟದ ಬಾಲ ಗೌರವ ಪ್ರಶಸ್ತಿ, ಟೈಮ್ಸಆಫ್ ಇಂಡಿಯಾದ ದೇಶ ಮಟ್ಟದ 21 ವರ್ಷದೊಳಗಿನ ಅನ್ ಸ್ಟಾಪೇಬಲ್ 21 ಅವಾರ್ಡ ಸೇರಿದಂತೆ ಅನೇಕ ಪ್ರಶಸ್ತಿ, ಪುರಸ್ಕಾರಗಳು ಅರಸಿ ಬಂದಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೂ ಅವಕಾಶ ಸಿಕ್ಕಿತ್ತು. ಈಗಿನ ವಿಶ್ವ ದಾಖಲಾತಿಗೆ ಸೇರಲು ದಿ ಟೈಮ್ಸ್ ಆಫ್ ಇಂಡಿಯಾ ಬಳಗ‌ ಕಳೆದ ಅಕ್ಟೋಬರ್ ನಲ್ಲಿ ನೀಡಿದ ಅನ್ ಸ್ಟಾಪೇಬಲ್‌ 21 ಪ್ರಶಸ್ತಿ ನೆರವಾಗಿದೆ ಎಂಬುದೂ ಉಲ್ಲೇಖನೀಯ.

ಇಂಥದೊಂದು ಗುರುತು ಸಿಕ್ಕಿದ್ದು ಖುಷಿ, ಸಂಭ್ರಮ. ಯಕ್ಷಗಾನದಿಂದಲೇ ಈ ಅವಕಾಶ ಸಿಕ್ಕಿದ್ದು ಅದಕ್ಕೇ ಇದನ್ನು ಅರ್ಪಿಸುವೆ. ಈ ದಾರಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಪ್ರೀತಿಯ ಕೃತಜ್ಞತೆ.
– ತುಳಸಿ ಹೆಗಡೆ, ಕಲಾವಿದೆ.

ಇದನ್ನೂ ಓದಿ: ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.