ಧರ್ಮಾ ಜಲಾಶಯ ಭರ್ತಿ : ರೈತರ ಮೊಗದಲ್ಲಿ ಹೆಚ್ಚಿದ ಸಂತಸ


Team Udayavani, Aug 2, 2021, 12:27 PM IST

Udayavai Uttara Kannada News

ಮುಂಡಗೋಡ : ತಾಲೂಕಿನ ಮಳಗಿ ಪಂಚಾಯಿತಿ ವ್ಯಾಪ್ತಿಯ ಧರ್ಮಾ ಜಲಾಶಯ ಭರ್ತಿಯಾಗಿ ಕೋಡಿ ಹರಿಯುತ್ತಿದ್ದು ರೈತರಲ್ಲಿ ಸಂತಸ ಮೂಡಿದರೇ, ಪ್ರವಾಸಿಗರು ತಂಡೋಪತಂಡವಾಗಿ ಬಂದು ಜಲಾಶಯದ ಸೊಬಗನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಧರ್ಮಾ ಜಲಾಶಯ ಭರ್ತಿಯಾಗಿದೆ ಎಂಬ ಸುದ್ದಿಯಿಂದ ತಾಲೂಕಿನವರಿಗಿಂತ ಹಾನಗಲ್ ತಾಲೂಕಿನವರೇ ಹೆಚ್ಚು ಖುಷಿಯಲ್ಲಿದ್ದಾರೆ. ಏಕೆಂದರೆ ಈ ಧರ್ಮಾ ಜಲಾಶಯದ ನೀರು ಮುಂಡಗೋಡ ತಾಲೂಕಿನ ರೈತರಿಗಿಂತ ಹಾನಗಲ್ ತಾಲೂಕಿನ ರೈತರಿಗೇ ಹೆಚ್ಚು ಉಪಯೋಗ. ಧರ್ಮಾ ಜಲಾಶಯ ಭರ್ತಿಯಾಗಿರುವುದರಿಂದ ನೋಡುಗರ ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತಿದೆ. ಸತತ ಮೂರು ವರ್ಷದಿಂದ ಜಲಾಶಯ ಭರ್ತಿಯಾಗಿ ಕೋಡಿ ಬೀಳುತ್ತಿದ್ದು ಪ್ರತಿ ವರ್ಷದಂತೆ ಈ ವರ್ಷವು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬಂದು ಕೋಡಿ ಬೀಳುವ ಸ್ಥಳದಲ್ಲಿ ನಿಂತು ಪೋಟೊ ಕ್ಲಿಕಿಸಿಕೊಂಡು ಕೆಲ ಸಮಯ ಕಳೆದು ಜಲಾಶಯದ ಮನೋಹರ ದೃಶ್ಯವನ್ನು ಕಣ್ತುಂಬಿಸಿಕೊಂಡು ಹೋಗುತ್ತಿದ್ದಾರೆ.

ಇದನ್ನೂ ಓದಿ : ಪಕ್ಷ ಸಂಘಟನೆಗೆ ಅಧಿಕಾರವೇ ಬೇಕು ಎಂದೇನಿಲ್ಲ: ಸುಳಿವು ನೀಡಿದ ಈಶ್ವರಪ್ಪ

ತಾಲೂಕಿನಲ್ಲಿ ಯಮಗಳ್ಳಿ ಹಳ್ಳಿ ಬಳಿ ಧರ್ಮಾ ನದಿಗೆ 1964 ರಲ್ಲಿ ಆಣೆಕಟ್ಟು ಕಟ್ಟಲಾಯಿತು. ಈ ಜಲಾಶಯದಿಂದ ರೈತರ ಹೊಲಗದ್ದೆಗಳಿಗೆ ತುಂಬಾ ಉಪಯೋಗವಾಗಿದೆ. ಧರ್ಮಾ ಜಲಾಶಯ ಮುಂಡಗೋಡ ತಾಲೂಕಿನಲ್ಲಿದ್ದರು ಇದರ ಪ್ರಯೋಜನ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ರೈತರಿಗಾಗುತ್ತಿದೆ. ಅಂದರೆ ಮುಂಡಗೋಡ ತಾಲೂಕಿನ ನೂರಾರು ಎಕರೆ ಜಮೀನುಗಳಿಗಷ್ಟೇ ಈ ಜಲಾಶಯದ ನೀರು ಪೂರೈಕೆಯಾಗುತ್ತಿದ್ದರೆ, ಹಾನಗಲ್ ತಾಲೂಕಿನ ಸಾವಿರಾರು ಎಕರೆ ಪ್ರದೇಶದ ಜಮೀನುಗಳಿಗೆ ನೀರು ಉಪಯೋಗವಾಗುತ್ತಿದೆ.  ಈ ಜಲಾಶಯವು ಸದ್ಯ ಹಾನಗಲ್ ಚಿಕ್ಕ ನೀರಾವರಿ ಇಲಾಖೆಯ ಅಧೀನದಲ್ಲಿದೆ. ಒಟ್ಟಿನಲ್ಲಿ  ಈ ಜಲಾಶಯದಿಂದ ನೂರಾರು ರೈತರಿಗೆ ಅನುಕೂಲವಾಗುತ್ತಿದೆ.

ತಾಲೂಕಿನಲ್ಲಿ ನಿರ್ಮಾಣಗೊಂಡ ಪ್ರಥಮ ಆಣೆಕಟ್ಟು ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಧರ್ಮಾ ಜಲಾಶಯ ಇಂದು ತುಂಬಿ ಹರಿಯುತ್ತಿರುವ ಕಾರಣ ಈ ಜಲಾಶಯ ಪ್ರದೇಶದ ರೈತರಲ್ಲಿ ಸಂತೋಷವನ್ನುಂಟು ಮಾಡಿದೆ. ಜಲಾಶಯದ ಅಕ್ಕ-ಪಕ್ಕದ ರೈತರು, ಹಾಗೂ  ಹಾನಗಲ್‌ದ ರೈತರು ಬಂದು ತುಂಬಿರುವ ಜಲಾಶಯಕ್ಕೆ ಪೂಜೆ ಸಲ್ಲಿಸಿ ಹೋಗುತ್ತಿದ್ದಾರೆ.

ವಡಕಪ್ಪ ನಿಗೂಣಿ, ಮಳಗಿ ಗ್ರಾಮದ ನಿವಾಸಿ: ಪ್ರಕೃತಿಯ ವಿಶಿಷ್ಟ ಕೊಡುಗೆಯಿಂದಾಗಿ ಕಂಗೊಳಿಸುತ್ತಿರುವ ಜಲಾಶಯಕ್ಕೆ ಪ್ರತಿ ವರ್ಷವು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಈ ಸ್ಥಳದಲ್ಲಿ ಉತ್ತಮ ಉದ್ಯಾನವನ, ವಿದ್ಯುತ್ ಅಲಂಕಾರಗಳೊAದಿಗೆ ಈ ಜಲಾಶಯದ ಸೊಬಗನ್ನು ಹೆಚ್ಚಿಸಬಹುದಾಗಿದೆ. ಈ ಜಲಾಶಯದತ್ತ ಪ್ರವಾಸಿಗರನ್ನು ಆಕರ್ಷಿಸಲು ಹಲವಾರು ಯೋಜನೆಗಳನ್ನು ಇಲಾಖೆ ಹಮ್ಮಿಕೊಂಡು ಇದನ್ನು ಪ್ರವಾಸಿ ತಾಣವಾಗಿ ರೂಪಿಸಿದರೇ ಇದೊಂದು ಪ್ರವಾಸ ಸ್ಥಳವಾಗಿ ಪ್ರಸಿದ್ಧಗೊಳ್ಳುತ್ತದೆ.

ಧರ್ಮಾ ಜಲಾಶಯದ ನಿರಾಶ್ರಿತರಿಗೆ ಹಂಚಿಕೆ ಮಾಡಿದ ಜಮೀನುಗಳ ಹಾಗೂ ಮನೆಯ ಜಾಗದ ಆರ್.ಟಿ.ಸಿ. ಮಾತ್ರ ತಯಾರಿಸಿ ಕೆ.ಜೆ.ಪಿ. ಮಾಡದೇ ಹಾಗೆಯೇ ಬಿಟ್ಟಿದ್ದ ಪರಿಣಾಮ ಸರಕಾರದ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ಫಲಾನುಭವಿಗಳಿಗೆ ಹಿನ್ನಡೆಯಾಗುತ್ತಿದೆ.

ಇದನ್ನೂ ಓದಿ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 333 ಅಂಕ ಜಿಗಿತ, 15,850ರ ಗಡಿ ತಲುಪಿದ ನಿಫ್ಟಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.