Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ


Team Udayavani, May 2, 2024, 10:52 PM IST

1-wwqewqe

ಯಲ್ಲಾಪುರ: ಲೋಕಸಭಾ ಚುನಾವಣೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುವ ಸಿಬಂದಿಗಳಿಗೆ ಯಲ್ಲಾಪುರ ತಾಲೂಕಿನ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ತರಬೇತಿಯಲ್ಲಿ ಊಟೋಪಚಾರದಲ್ಲಿ ಅವ್ಯವಸ್ಥೆಯ ಆಗರವಾಗಿ ಗೊಂದಲವೇರ್ಪಟ್ಟು ಗದ್ದಲದ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.

ಸುಮಾರು ಒಂದುವರೆ ಸಾವಿರದಷ್ಟು ಸಿಬಂದಿಗಳಿಗೆ ಇಲ್ಲಿ ತರಬೇತಿ ವ್ಯವಸ್ಥೆಗೊಳಿಸಲಾಗಿತ್ತು. ಬೆಳಗ್ಗೆ ನೀಡಿದ ರವಾ ಉಪ್ಪಿಟ್ಟು ಕೂಡಾ ಸರಿಯಾಗಿರಲಿಲ್ಲವಾದರೂ ಸುಮ್ಮನಿದ್ದರು.ಆದರೆ ಮಧ್ಯಾಹ್ನದ ಊಟವೂ ಕಳಪೆಯಾಗಿತ್ತು.ಅಲ್ಲದೇ ಊಟ ಅರ್ಧಕ್ಕೆ ಕಡಿಮೆ ಬಿದ್ದು ಕೋಲಾಹಲವೇರ್ಪಟ್ಟಿತು.ಸುಡುಬಿಸಿಲು ಸೆಕೆಯ ಬೇಗೆ ಒಂದು ಕಡೆ,ಹಸಿವು ಇನ್ನೊಂದು ಕಡೆ.ಜತೆಗೆ ತಾಟು ಹಿಡಿದು ಬಂದವನಿಗೆ ಅನ್ನಖಾಲಿಯಾಗಿ ಗೋಗೆರೆಯುವಂತಾಯ್ತು.

ಅನ್ನ ತಯಾರಿ ಆಗಿ ಬರುವಷ್ಟು ಹೊತ್ತು ನಿಂತುಕೊಳ್ಳುವಷ್ಡು ತಾಳ್ಮೆ ಕೂಡಾ ಹೊರಟುಹೋಗಿತ್ತು.ಗದ್ದಲ ತಾರಕಕ್ಕೇರಿದಾಗ ಸಿಬಂದಿಗಳನ್ನು ಬಸ್ಸಿನ ಮೂಲಕ ವಿವಿಧ ಹೊಟೇಲುಗಳಿಗೆ ಕಳಿಸಿಕೊಡುವ ವ್ಯವಸ್ಥೆ ಮಾಡಿದರು.ಆಗಲೆ ಎರಡೂವರೆ ಮೂರು ಗಂಟೆಯಾಗಿ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ತಮಗಾದ ತೊಂದರೆಯನ್ನು ಅಲ್ಲೇ ಪರಸ್ಪರ ತಮ್ಮವರಲ್ಲಿ ಹೇಳಿಕೊಂಡರು.ತರಬೇತಿಗೆ ಬರುವವರ ಸಂಖ್ಯೆ ನಿಶ್ಚಿತವಾಗಿ ಸಿಗುವಾಗ ಈ ತರಹನಾಗಿ ಊಟ ಕಡಿಮೆ ಬೀಳುವಂತಾದದ್ದು ಸಖೇಧಾಶ್ಚರ್ಯ ಸಂಗತಿ.ಅಂತೂ ತರಬೇತಿಗೆ ಬಂದ ಕೆಲ ಸಿಬಂದಿಗಳ ಮುಖ ಬಾಡಿ ಸಪ್ಪೆಯಾಗಿತ್ತು.ಚುನಾವಣಾಧಿಕಾರಿ ಅಜ್ಜಪ್ಪ ಸೊಗಲದ ಸ್ಥಳದಲ್ಲಿ ಇದ್ದು ಈ ಪರಿಸ್ಥಿತಿ ನಿಯಂತ್ರಣವಾಗಿದೆ. ಸಿಬ್ಬಂದಿಗಳ ಹಿಡಿಶಾಪ ಮಾತ್ರ ಮುಂದುವರೆದಿತ್ತು.

ಸ್ಥಳಕ್ಕೆ ಬಂದ ಸಿಬಂದಿಗೆ ಊಟೋಪಚಾರ ಅಲ್ಪೋಪಹಾರದ ವ್ಯವಸ್ಥೆಯನ್ನು ಚುನಾವಣ ಅಯೋಗದ ಅಧಿಕಾರಿಗಳು ನಿರ್ವಹಿಸಿದ್ದರು.ಜಿಲ್ಲಾಧಿಕಾರಿ ಹಂತದಲ್ಲಿ ಇದನ್ನು ಟೆಂಡರ್ ಕರೆಯಲಾಗಿತ್ತು. ಕುಂದಾಪುರದವರೊಬ್ಬರಿಗೆ ಗುತ್ತಿಗೆ ನೀಡಲಾಗಿತ್ತು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.