ಜೋಯಿಡಾಗೆ ಮೊದಲು ನೀರು ಕೊಡಿ 

ಸಾರಿಗೆ ಅವ್ಯವಸ್ಥೆ ಸರಿಪಡಿಸಲು ಒತ್ತಾಯ­! ವೈದ್ಯಾಧಿಕಾರಿಗಳ ಸಮಸ್ಯೆ ಬಗೆಹರಿಸಲು ಮನವಿ

Team Udayavani, Mar 12, 2021, 9:07 PM IST

yojiya water problem

ಜೋಯಿಡಾ: ತಾಪಂ ಅಧ್ಯಕ್ಷೆ ನರ್ಮದಾ ಪಾಕ್ಲೃಕರ್‌ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾಳಿ ನದಿ ನೀರನ್ನು ನಮಗೆ ಮೊದಲು ನೀಡಿ, ನಂತರ ಬೇರೆಯವರಿಗೆ ಕೊಡಿ ಎನ್ನುವ ಕೂಗು ಒಕ್ಕೋರಲಿನಿಂದ ಕೇಳಿಬಂದಿತ್ತು.

ಸಭೆ ಆರಂಭಗೊಳ್ಳುತ್ತಿದ್ದಂತೆ ಜೋಯಿಡಾ ಕಾಳಿ ಬ್ರಿಗೇಡ್‌ ಮುಖ್ಯಸ್ಥ ರವಿರೇಡ್ಕರ್‌ ಹಾಗೂ ಸಂಘಟಕರು ಸಭಾಧ್ಯಕ್ಷರಿಗೆ ಮನವಿ ನೀಡಿ, ಜೋಯಿಡಾ ತಾಲೂಕಿನ ಜೋಯಿಡಾ, ರಾಮನಗರ ಪ್ರತಿವರ್ಷವೂ  ಕುಡಿಯುವ ನೀರಿನ ಹಾಹಾಕಾರದಲ್ಲಿದೆ. ಇಲ್ಲಿ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ ಕಾಳಿ ನೀರನ್ನು ಮೊದಲು ನಮ್ಮ ತಾಲೂಕಿನ ಜನತೆಗೆ ಕೊಡಿ ಎಂದು ವಿನಂತಿಸಿದರು. ಅಲ್ಲೆ ಕಾಳಿ ನೀರನ್ನು ಹೊರ ಜಿಲ್ಲೆಗೆ ಒಯ್ಯುವ ಕಾಮಗಾರಿಗೆ ಕಾಳಿ ಬ್ರಿಗೇಡ್‌ ಸಂಘಟನೆ ಸಂಪೂರ್ಣವಾಗಿ ವಿರೋಧಿಸುತ್ತಿದ್ದಾಗಿ ಸಭೆಯಲ್ಲಿ ಹೇಳಲಾಯಿತು.

ಈ ಕುರಿತು ಸಮಗ್ರ ಚರ್ಚೆ ನಡೆಯಿತು. ತಾಪಂ ಸದಸ್ಯ ಗುರಜರ, ತಾಲೂಕಿನಲ್ಲಿಯೇ ಹುಟ್ಟುವ ಕಾಳಿ ನದಿ ನೀರನ್ನು ನಮ್ಮ ತಾಲೂಕಿನ ಜನರಿಗೆ ಕುಡಿಯಲು ಪೂರೈಸುವ ಸರಿಯಾದ ವ್ಯವಸ್ಥೆ ಇನ್ನೂ ಇಲ್ಲ. ರಾಮನಗರ, ಜೋಯಿಡಾ ಜನರು ನೀರಿನ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಸೂಪಾ ಜಲಾಶಯಕ್ಕಾಗಿ ತ್ಯಾಗಮಾಡಿದ ತಾಲೂಕಿನ ಜನರಿಗೆ  ಕನಿಷ್ಟ ಪಕ್ಷ ಸರಿಯಾಗಿ ಕುಡಿಯುವ ನೀರನ್ನಾದರು ಸರಕಾರ ಕೊಡಬೇಕಿತು. ನಮ್ಮ ತಾಲೂಕಿನಲ್ಲಿ ಯಾರೂ ಹೇಳುವವರು, ಕೇಳುವವರು ಇಲ್ಲದಂತಾಗಿದೆ  ಎಂದು  ಬೇಷರ ವ್ಯಕ್ತಪಡಿಸಿದರು. ಸಭೆಯಲ್ಲಿ ಉಳಿದ ಸದಸ್ಯರೂ ಇದಕ್ಕೆ ಬೆಂಬಲ ಸೂಚಿಸಿದ್ದು, ತಾಲೂಕಿನ ಕುಡಿಯುವ ನೀರಿನ ವ್ಯವಸ್ಥೆಗೆ ಕಾಳಿ ನೀರನ್ನು ಬಳಸಲು ಯೋಜನೆ ರೂಪಿಸಬೇಕೆನ್ನುವ ಅಭಿಪ್ರಾಯ ಕೇಳಿಬಂದಿತು.

ರಾಮನಗರ, ಜೋಯಿಡಾ ಭಾಗದ ಗ್ರಾಪಂ ಸದಸ್ಯರು, ಸಾರಿಗೆ ಅವ್ಯವಸ್ಥೆಯಿಂದಾಗಿ ಶಾಲಾ ಮಕ್ಕಳಿಗೆ ಬಸ್‌ಗಳು ಸರಿಯಾಗಿ ಇರದೆ ತೊಂದರೆ ಪಡುವಂತಾಗಿದೆ ಎಂದು ದೂರಿದರು. ತಾಲೂಕು ಆಸ್ಪತ್ರೆಯಲ್ಲಿ ರಾತ್ರಿ ವೇಳೆಯಲ್ಲಿ ವೈದ್ಯಾಧಿಕಾರಿಗಳು ಇರದೆ ತುರ್ತು ಸೇವೆಗೆಂದು ಬರುವ ರೋಗಿಗಳಿಗೆ, ಅಪಘಾತದಂತ ಪ್ರಕರಣಗಳಿಗೆ ದಾಂಡೇಲಿ, ಇಲ್ಲವೇ ಧಾರವಾಡ-ಕಾರವಾರಕ್ಕೆ ಕಳಿಸಿಕೊಡುವ ಪ್ರಸಂಗ ಏರ್ಪಡುತ್ತಿದೆ. ಕೆಲವರಿಗೆ ಸಮಯಕ್ಕೆ ಸರಿಯಾದ ಚಿಕಿತ್ಸೆ ಇಲ್ಲದೆ ಜೀವ ಕಳೆದುಕೊಳ್ಳುವ ಪ್ರಸಂಗವೂ ನಡೆದಿದೆ ಎಂದು ವೈದ್ಯಾಧಿಕಾರಿಗಳ ಬೇಜವಾಬ್ದಾರಿತನವನ್ನು ಗ್ರಾಪಂ ಸದಸ್ಯ ಸಂತೋಷ ಮತೇರೋ, ದತ್ತಾ ನಾಯ್ಕ ಕುಂಬಾರವಾಡಾ ಸಭೆ ಗಮನಕ್ಕೆ ತಂದರು. ತಾಲೂಕು ವೈದ್ಯಾಧಿಕಾರಿ ಸುಜಾತಾ ಉಕ್ಕಲಿ, ವೈದ್ಯಾಧಿಕಾರಿಗಳ ಲಭ್ಯತೆಗೆ ವ್ಯವಸ್ಥೆಗೊಳಿಸುವ ಮೂಲಕ ಈ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಡಿಗ್ಗಿ ಭಾಗದ ರಸ್ತೆ ಸಂಪೂರ್ಣ ಹಾಳಾಗಿದ್ದು, ದುರುಸ್ತಿ ಮಾಡಿಸುವಂತೆ ಡಿಗ್ಗಿ ಭಾಗದ ಗ್ರಾಮಸ್ಥರು ನಮ್ಮ ಪಂಚಾಯತ್‌ ಸದಸ್ಯರ ಮುಖಾಂತರ ಸಭೆ ಗಮನಕ್ಕೆ ತಂದರು. ಸಭೆಯಲ್ಲಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿ ಸತೀಶ ಅನುದಾನ ಬಂದಾಗ ರಸ್ತೆ ಸರಿಪಡಿಸುವ ಭರವಸೆ ನೀಡಿದರು.

ಜೋಯಿಡಾ-ಕುಬಾರವಾಡಾ ಹೆಸ್ಕಾಂ ಹೊಸ ಲೈನ್‌ ಅರ್ಧದಲ್ಲಿಯೇ ನಿಂತಿದ್ದು, ಕೂಡಲೆ ಕುಂಬಾರವಾಡಾವರೆಗೆ ಹೊಸ ಲೈನ್‌ ಕಾಮಗಾರಿ ಮಾಡಿ ಮುಗಿಸಿ ಎಂದು ಕುಂಬಾರವಾಡಾ ಗ್ರಾಪಂ ಸದಸ್ಯರು ಅಧಿಕಾರಿಗಳಲ್ಲಿ ವಿನಂತಿಸಿದರು. ಆದಷ್ಟು ಬೇಗ ಕೆಲಸ ಮುಗಿಸುವುದಾಗಿ ತಿಳಿಸಿದರು.

ಉಚಿತ ಕೋಳಿ ಮರಿ ಪ್ರಕರಣಕ್ಕೆ ಸಂಬಂಧಿಸಿದ ವಿಷಯ ಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು. ಕೂಡಲೆ ರಾಮನಗರ ಪಶು ವೈದ್ಯಾಧಿಕಾರಿಗೆ ನೋಟಿಸ್‌ ಜಾರಿ ಮಾಡಿ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಇನ್ನುಳಿದ ತೋಟಗಾರಿಕೆ, ಕೃಷಿ, ಶಿಕ್ಷಣ, ಸಮಾಜ ಕಲ್ಯಾಣ, ಹಿಂದುಳೀದ ವರ್ಗಗಳ ಇಲಾಖೆಯ ವಿಷಯ ಚರ್ಚೆಗೆ ಬಂದಿದ್ದು, ಸಂಬಂಧಿಸಿದ ಅಧಿಕಾರಿಗಳು ತಮ್ಮ ಇಲಾಖೆ ಪ್ರಗತಿ ಪರಿಶೀಲನಾ ವರದಿ ಸಭೆಗೆ ಸಲ್ಲಿಸಿದರು. ತಾಪಂ ಉಪಾಧ್ಯಕ್ಷ ವಿಜಯ ಪಂಡಿತ್‌, ಜಿ.ಪಂ. ಸದಸ್ಯ ರಮೇಶ ನಾಯ್ಕ, ತಾ.ಪಂ. ಇಒ ಆನಂದ ಬಡಕುಂದ್ರಿ, ತಾ.ಪಂ. ಸದಸ್ಯೆ ಅಲ್ಕಾಂಜಾ ಮಂಥೇರೋ ಮುಂತಾದವರು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.