ಕಾರವಾರದಲ್ಲಿ ಶೂನ್ಯ ನೆರಳಿನ ದಿನ


Team Udayavani, Apr 30, 2021, 5:30 PM IST

uyutfff

ಕಾರವಾರ : ಶುಕ್ರವಾರದಂದು ಕಾರವಾರದಲ್ಲಿಮಧ್ಯಾಹ್ನ 12.31ಕ್ಕೆ ಸೂರ್ಯನು ಶಿರೋಬಿಂದುವಿನ ಮೇಲೆ ಹಾದು ಹೋದ ಪರಿಣಾಮ ಸುಮಾರು 1 ನಿಮಿಷದ ಅವಧಿಗೆ ನೆರಳು ಕನಿಷ್ಟ ಪ್ರಮಾಣದಲ್ಲಿ ಗೋಚರಿಸಿದೆ. ಆದ್ದರಿಂದ ಇಂತಹ ದಿನವನ್ನು ಶೂನ್ಯ ನೆರಳಿನ ದಿನ ಎಂದುಕರೆಯುತ್ತಾರೆ.

ಈ ವಿದ್ಯಮಾನವನ್ನು ಉಪ-ಪ್ರಾದೇಶಿಕ ವಿಜ್ಞಾನಕೇಂದ್ರ, ಕಾರವಾರದಲ್ಲಿ ವೀಕ್ಷಿಸಲಾಯಿತು.ಆದರೆ ಲಾಕ್‌ಡೌನ್ ನಿಮಿತ್ತ ಶಾಲಾ ವಿದ್ಯಾರ್ಥಿಗಳು ಮನೆಗಳಲ್ಲೇ ಇದ್ದು ಇದನ್ನು ಪ್ರಯೋಗದ ಮೂಲಕ ಕಂಡುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿತ್ತು.

ಸಾಮಾನ್ಯರು ಊಹಿಸುವಂತೆ ಸೂರ್ಯ ಪ್ರತಿ ದಿನದ ಮಧ್ಯಾಹ್ನ ಶಿರೋಬಿಂದುವಿನ ಮೇಲೆ ಇರುವುದಿಲ್ಲ. ಯಾವುದೇ ಮಧ್ಯಾಹ್ನ ನೆರಳನ್ನು ನೋಡಿ ಇದನ್ನು ಪರಿಶೀಲಿಸಬಹುದು. ಸೂರ್ಯ ಗರಿಷ್ಠ ಎತ್ತರ ತಲುಪಿದಾಗ ಅದು ಶಿರೋಬಿಂದುವಿನ ಉತ್ತರಕ್ಕೆ ಅಥವಾ ದಕ್ಷಿಣಕ್ಕೆ ಇರುತ್ತದೆ.

ಭೂಮಿಯ ಆವರ್ತನೆಯ ಅಕ್ಷ ಅದರ ಕಕ್ಷಾತಲಕ್ಕೆ 23.5 ಡಿಗ್ರಿ ಓರೆಯಾಗಿರುವುದೇ ಇದಕ್ಕೆ ಕಾರಣ. ಋತುಮಾನಗಳಿಗೂ ಇದೇ ಕಾರಣ. ಡಿಸೆಂಬರ್ 21 ರಂದು ದಕ್ಷಿಣದ ಗರಿಷ್ಠವನ್ನುತಲುಪಿ ಉತ್ತರಕ್ಕೆ ಹೊರಳುವುದರಿಂದ ಆ ಘಟನೆಗೆ ಉತ್ತರಾಯಣ ಎಂದು ಹೆಸರು. ಆ ಮಧ್ಯಾಹ್ನದ ನೆರಳು ಯಾವುದೇ ಮಧ್ಯಾಹ್ನದ ನೆರಳಿಗೆ ಹೋಲಿಸಿದರೆ ಗರಿಷ್ಠ. ಜೂನ್ 21 ರಂದು ಉತ್ತರದ ಗರಿಷ್ಠ ತಲುಪಿ ದಕ್ಷಿಣಕ್ಕೆ ಹೊರಳುವುದರಿಂದ ಆ ಘಟನೆಗೆ ದಕ್ಷಿಣಾಯನಎಂದು ಹೆಸರು. ಆ ಮಧ್ಯಾಹ್ನದ ನೆರಳು ಕನಿಷ್ಠ. ಸೂರ್ಯನ ಈ ಉತ್ತರ- ದಕ್ಷಿಣ ಚಲನೆಗಳನ್ನು ಉತ್ತರಾಯಣ ಮತ್ತು ದಕ್ಷಿಣಾಯನ ಎಂದೇ ಕರೆಯುತ್ತಾರೆ.

ಕರ್ಕಾಟಕ ಹಾಗೂ ಮಕರ ಸಂಕ್ರಾಂತ ವೃತ್ತಗಳ ನಡುವೆ ಇರುವ ಸ್ಥಳಗಳಲ್ಲಿ ವರ್ಷದ ಎರಡು ನಿರ್ದಿಷ್ಟ ದಿನಗಳಲ್ಲಿ ಸೂರ್ಯ ಶಿರೀ ಬಿಂದುವಿನ ಮೇಲೆ ಹಾದು ಹೋಗುವ ಕಾರಣ ಆ ದಿನಗಳಲ್ಲಿ ಮಧ್ಯಾಹ್ನದ ನೆರಳು ಇಲ್ಲದಾಗುತ್ತದೆ. ಇದೇ ಶೂನ್ಯ ನೆರಳಿನ ದಿನದತತ್ವ ಎಂದು ವಿಜ್ಞಾನ ಕೇಂದ್ರದ ಸಹಾಯಕ ದೇಶಪಾಂಡೆ ವಿವರಿಸಿದರು‌.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.