ಗಣಿಗಳಲ್ಲಿ ನೀರು ಪತ್ತೆಗೆ ಪರದಾಟ!


Team Udayavani, May 31, 2019, 1:18 PM IST

1-June-20

ವಾಡಿ: ಬಳವಡಗಿ ಗ್ರಾಮದಲ್ಲಿ ಕುಡಿಯುವ ಹಾಹಾಕಾರ ಭುಗಿಲೆದ್ದಿದ್ದು, ಜನರು ದೂರದ ಕಲ್ಲು ಗಣಿಗಳಿಂದ ನೀರು ಹೊತ್ತು ತರುತ್ತಿದ್ದಾರೆ.

ವಾಡಿ: ಅತ್ತ ಉರಿ ಬಿಸಿಲಿನ ತಾಪ. ಇತ್ತ ಕೊಡ ನೀರಿಗಾಗಿ ಪರದಾಡುವ ತಾಪತ್ರಯ. ಅಡವಿ, ಅರಣ್ಯ ತಿರುಗಿ ನೀರು ಪತ್ತೆ ಮಾಡುತ್ತಿರುವ ವಿವಿಧ ಗ್ರಾಮಗಳ ಜನರು, ಜಲದಾಹ ನೀಗದೆ ಸಂಕಟ ಅನುಭವಿಸುತ್ತಿದ್ದಾರೆ.

ಪಟ್ಟಣ ಸಮೀಪದ ಹಳಕರ್ಟಿ ಗ್ರಾಪಂ ವ್ಯಾಪ್ತಿಯ ಬಳವಡಗಿ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಭುಗಿಲೆದ್ದು ಎರಡು ತಿಂಗಳು ಕಳೆದಿದೆ. ಜಿಲ್ಲಾಡಳಿತ ನೀಡಿದ ಟ್ಯಾಂಕರ್‌ ನೀರಿನ ಭರವಸೆ ಹುಸಿಯಾಗಿದೆ. ಜನರ ನೆರವಿಗೆ ನಿಲ್ಲಬೇಕಿದ್ದ ಗ್ರಾಪಂ ಆಡಳಿತ ಚುನಾವಣೆಯಲ್ಲಿ ಕಾಲಹರಣ ಮಾಡಿದೆ. ಅಧಿಕಾರಿಗಳು ಜನರ ಗೋಳು ಕೇಳಲು ಮುಂದಾಗಿಲ್ಲ. ಗ್ರಾಮದಿಂದ 2 ಕಿಮೀ ದೂರದಲ್ಲಿ ಪಾಳುಬಿದ್ದ ಕಲ್ಲು ಗಣಿಗಳಲ್ಲಿ ಖಾಲಿ ಕೊಡಗಳೊಂದಿಗೆ ಅಲೆದು ನೀರಿನ ಹೊಂಡಗಳನ್ನು ಪತ್ತೆ ಮಾಡುತ್ತಿರುವ ಮಹಿಳೆಯರು, ಚೀಪುಗಲ್ಲುಗಳ ಮಧ್ಯೆ ಸಂಗ್ರಹವಾಗಿದ್ದ ಪಾಚಿ ನೀರು ಹೊತ್ತು ತರುತ್ತಿದ್ದಾರೆ.

ಗ್ರಾಮದಲ್ಲಿ ಹಳೆಯ ಬಾವಿಗಳಿದ್ದು ಅಂತರ್ಜಲ ಬತ್ತಿದೆ. ಗ್ರಾಪಂ ನೀಡಿರುವ ನಳಗಳ ಸೌಲಭ್ಯದಲ್ಲಿ ಹನಿ ನೀರೂ ಜಿನುಗುತ್ತಿಲ್ಲ. ಟ್ಯಾಂಕರ್‌ ನೀರಿನ ಬೇಡಿಕೆಯಿಟ್ಟರೂ ಗ್ರಾಪಂ ಆಡಳಿತ ಕ್ಯಾರೆ ಎಂದಿಲ್ಲ. ಇಡೀ ದಿನ ಕಲ್ಲು ಗಣಿಗಳಲ್ಲಿ ಕೂಲಿ ಮಾಡಿ ಬದುಕು ನಡೆಸುತ್ತಿರುವ ಬಡ ಕುಟುಂಬಗಳು, ಬೆಳಗ್ಗೆ 6ರಿಂದ 8ರವರೆಗೆ ಹಾಗೂ ಸಂಜೆ 4ರಿಂದ 7ರವರೆಗೆ ಗಣಿಗಳನ್ನು ತಿರುಗಿ ನೀರು ಹುಡುಕುತ್ತಿದ್ದಾರೆ. ಕಲ್ಲಿನ ಗುಂಡಿಗಳಲ್ಲಿ ನಿಂತ ನೀರನ್ನು ಲೋಟಗಳಿಂದ ಕೊಡಗಳಿಗೆ ತುಂಬಬೇಕಾದ ದುಸ್ಥಿತಿ ಎದುರಾಗಿದೆ. ಮಕ್ಕಳು, ಮಹಿಳೆಯರು, ವಯಸ್ಕರು ಕೊಡಗಳನ್ನು ಹಿಡಿದು ದೂರದ ಗಣಿಗಳತ್ತ ನಡೆದರೆ, ಯುವಕರು ಬೈಕ್‌ಗಳ ಮೇಲೆ ನೀರು ಸಾಗಿಸುತ್ತಿದ್ದಾರೆ. ಪ್ರತಿ ವರ್ಷ ಬೇಸಿಗೆಯಲ್ಲಿ ಬಳವಡಗಿ ಗ್ರಾಮ ನೀರಿಗಾಗಿ ತತ್ತರಿಸುತ್ತದೆ. ಆದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ನಮ್ಮೂರಿಗೆ ಕುಡಿಯುವ ನೀರಿನ ಶಾಶ್ವತ ಪರಿಹಾರ ಒದಗಿಸಲು ಯಾರೂ ಮುಂದಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬಳವಡಗಿ ಗ್ರಾಮದ ಸುತ್ತಲೂ ಕಲ್ಲು ಗಣಿಗಳಿವೆ. ಗ್ರಾಮದಲ್ಲಿ ನೀರಿನ ಸೌಲಭ್ಯವಿಲ್ಲದ ಕಾರಣ ಗಣಿಗಳಲ್ಲಿ ನಿಂತ ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ನಮ್ಮೂರಿನ ಪರಸ್ಥಿತಿ ನೋಡಿದರೆ ಜಿಲ್ಲಾಧಿಕಾರಿಗಳೇ ದಂಗಾಗುತ್ತಾರೆ.
ಶಿವಪ್ಪ ಕೊದ್ದಡಗಿ,
ಗ್ರಾಮ ನಿವಾಸಿ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.