![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 29, 2022, 7:41 PM IST
ಮರಿಯಮ್ಮನಹಳ್ಳಿ : ಅಪರಿಚಿತ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂ ಗೊಂಡಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶವಾಣಿ ಹೊಸಪೇಟೆ ಕೇಂದ್ರದ ಮುಖ್ಯಸ್ಥರಾದ ಎಂ.ಎಸ್.ನಾಗೇಂದ್ರ ಅವರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭದ್ರಾವತಿ ನಿವಾಸಿಯಾಗಿರುವ ನಾಗೇಂದ್ರ ಅವರು ಪ್ರಸ್ತುತ ಆಕಾಶವಾಣಿ ಹೊಸಪೇಟೆ ಕೇಂದ್ರದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಶುಕ್ರವಾರ ಬೆಳಗಿನ ಜಾವ ತಮ್ಮ ಸುಜುಕಿ ಬಲೆನೋ ಕಾರನ್ನು ಚಲಾಯಿಸಿಕೊಂಡು ಹೊಸಪೇಟೆಗೆ ಹೋಗುತ್ತಿರುವಾಗ ಮಾರ್ಗ ಮಧ್ಯೆ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಡಣಾಪುರ ಬಳಿಇರುವ ಬ್ರಿಡ್ಜ್ ಮೇಲೆ ಹೋಗುತ್ತಿರುವಾಗ ಹಿಂದಿನಿಂದ ಬಂದ ಅಪರಿಚಿತ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಕಾರು ಸುತ್ತು ಹಾಕಿ ರಸ್ತೆ ಪಕ್ಕದಲ್ಲಿನ ಅಡ್ಡಗೋಡೆಗೆ ಬಡಿದು ಪಲ್ಟಿ ಹೊಡೆದು ಗಾಲಿಗಳು ಮೇಲಾಗಿ ಉಲ್ಟಾ ಹೆದ್ದಾರಿಯಲ್ಲೇ ಬಿದ್ದಿದೆ.
ನಾಗೇಂದ್ರ ಅವರು ಸೀಟಿನಲ್ಲೆ ತಲೆಕೆಳಗಾಗಿದ್ದಾರೆ. ಸೀಟ್ ಬೆಲ್ಟ್ ಹಾಕಿಕೊಂಡಿದ್ದರಿಂದ ಪವಾಡ ಸದೃಶವಾಗಿ ಯಾವುದೇ ಗಾಯಗಳಾಗದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಅಪಘಾತ ಮಾಡಿ ಹೋಗಿರುವ ಲಾರಿಯ ಶೋಧಕಾರ್ಯದಲ್ಲಿ ತೊಡಗಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.