Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್


Team Udayavani, Jun 19, 2024, 3:18 PM IST

14-hospete

ಹೊಸಪೇಟೆ: ಸ್ಮಾರಕಗಳ ಸಂರಕ್ಷಣೆ ಮತ್ತು ಅವುಗಳ ಮಹತ್ವ ಮುಂದಿನ ಪೀಳಿಗೆಗೆ ತಿಳಿಸುವ ಕಾಯಕದೊಂದಿಗೆ ನೈಜ ಇತಿಹಾಸ ಪಸರಿಸುವ ಕಾರ್ಯವಾಗಬೇಕಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಹೇಳಿದರು.

ಪತ್ರಿಕಾ ದಿನಾಚರಣೆ ನಿಮಿತ್ತ ವಿಜಯನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಹಯೋಗದಲ್ಲಿ ಬುಧವಾರ ಹಂಪಿಯಲ್ಲಿ  ಆಯೋಜಿಸಿದ್ದ ಪಾರಂಪರಿಕ ನಡಿಗೆಗೆ ಚಾಲನೆ ನೀಡಿ ಮಾತನಾಡಿದರು.

ಹಂಪಿಯ ರಾಣಿ ಸ್ನಾನಗೃಹದ ಬಳಿ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದಲ್ಲಿ ಐತಿಹಾಸಿಕ ಸ್ಮಾರಕಗಳು ಇರೋದು ನಮ್ಮ ಭಾಗದ ಹೆಮ್ಮೆಯಾಗಿದೆ. ಆ ಸ್ಮಾರಕಗಳನ್ನು ಸಂರಕ್ಷಣೆ ಮಾಡಿ, ನೈಜ ಇತಿಹಾಸ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕಿದೆ ಎಂದರು.

ವಿಜಯನಗರ ಎಸ್ಪಿ ಶ್ರೀಹರಿಬಾಬು ಬಿ.ಎಲ್. ಮಾತಮಾಡಿ, ಪತ್ರಕರ್ತರು ಪಾರಂಪಾರಿಕ ನಡಿಗೆ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ‌. ಈ ಭಾಗದ ಸ್ಮಾರಕ ಉಳಿವಿಗೆ ಅರಿವಿಗೆ ಇದು ಸಹಕಾರಿಯಾಗಲಿದೆ ಎಂದು ಹೇಳಿದರು.

ಹಂಪಿ ವಲಯದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧೀಕ್ಷಕ ನಿಹಿಲ್ ದಾಸ್ ಮಾತನಾಡಿ, ಹಂಪಿ ಅನ್ನೋದೊಂದು ಅದ್ಭುತ. ಇಲ್ಲಿ ಪ್ರವಾಸೋದ್ಯಮ ಇನ್ನೂ ಅಭಿವೃದ್ಧಿಯಾದರೆ ಈ ಭಾಗದ ಜನರಿಗೆ ಉದ್ಯೋಗವಕಾಶಗಳು ಸಿಗುತ್ತವೆ. ಹಂಪಿಯ ಸಮಗ್ರ ಅಭಿವೃದ್ಧಿಗೆ ಈಗಾಗಲೇ ನೀಲನಕ್ಷೆ ತಯಾರು ಮಾಡಲಾಗಿದೆ. ಯಾವುದೇ ಕಾರಣಕ್ಕೂ ಈ ಭಾಗದ ಜನರು ಹಂಪಿಯನ್ನು ಕಳೆದುಕೊಳ್ಳಬಾರದು. ಹಂಪಿಯ ಒಂದೊಂದು ಕಲ್ಲುಗಳು ಒಂದೊಂದು ಕಥೆಗಳನ್ನು ಹೇಳುತ್ತವೆ. ಈ ಭಾಗದ ಜನರಿಗೆ ಹಂಪಿಯ ಸಮಗ್ರ ಅಭಿವೃದ್ಧಿಯಿಂದಾಗಿ ಅದ್ಭುತ ಉದ್ಯೋಗವಕಾಶಗಳು ಸಿಗುತ್ತದೆ ಎಂದರು.

 

ರಾಣಿ ಸ್ನಾನ ಗೃಹದಿಂದ ಪ್ರಾರಂಭವಾದ ಪಾರಂಪರಿಕ ನಡಿಗೆ ಮಹಾನವಮಿ ದಿಬ್ಬ, ಪಾನ್ ಸುಪಾರಿ ಬಜಾರ್, ಪಟ್ಟಣದ ಎಲ್ಲಮ್ಮ ದೇಗುಲ, ಗಜಶಾಲೆ, ಕಮಲ ಮಹಲ್ ಮೂಲಕ ಸಾಗಿ ಹಜಾರಾರಾಮ ದೇವಸ್ಥಾನದ ಆವರಣಕ್ಕೆ ಮುಕ್ತಾಯಗೊಂಡಿತು.

ಪಿ. ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಕೆ. ಲಕ್ಷ್ಮಣ, ಕಾನಿಪ ಸಂಘದ ರಾಜ್ಯ ಸಮಿತಿ ಸದಸ್ಯ ವೆಂಕೋಬ ನಾಯಕ ಪೂಜಾರ್, ಜಿಲ್ಲಾಧ್ಯಕ್ಷ, ಖಜಾಂಚಿ ವೆಂಕಟೇಶ್, ಪ್ರವಾಸೋದ್ಯಮ ಇಲಾಖೆಯ ಡಿಡಿ ಪ್ರಭುಲಿಂಗ ತಳಕೇರಿ,  ಭಾರತೀಯ ಪುರಾತತ್ವ ಇಲಾಖೆಯ ಸಹಾಯಕ ಅಭಿಯಂತರ ವಿನೋಜ್ ಕುಮಾರ್, ಸಂರಕ್ಷಣಾ ಸಹಾಯಲರಾದ ಸುನೀಲ್ ಕುಮಾರ್ ಎಂ.ಸಿ., ಎಚ್.ರವೀಂದ್ರನಾಥ್, ಪತ್ರಕರ್ತರಾದ ಅನಂತ, ಶ್ರೀನಿವಾಸ್, ಬಸಾಪುರ ಬಸವರಾಜ್, ಕೆ. ಸುರೇಶ್ ಚೌವ್ಹಾಣ್, ಮಂಜುನಾಥ್ ಅಯ್ಯಸ್ವಾಮಿ, ಅನಂತ ಪದ್ಮನಾಭ ರಾವ್, ಜಯಪ್ಪ ರಾಥೋಡ್, ಭೀಮಾ ನಾಯ್ಕ್, ಅಂಬರೀಶ್ ವಾಲ್ಮೀಕಿ, ಖವಾಸ್ ಕೆಬಿ, ಇಂದಿರಾ ಕಲಾಲ್, ಸಂಜಯ್ ಕುಮಾರ್ ಮುರೋಳ್, ಅನೂಪ್ ಕುಮಾರ್, ಮೃತ್ಯುಂಜಯ ಹಿರೇಮಠ್, ಛಾಯಾಗ್ರಾಹಕರಾದ ವಿಜಯ್ ಕುಮಾರ್, ಕೊಟ್ರೇಶ್, ಮೈನು ಇದ್ದರು.

ಹಂಪಿ ಸಿಪಿಐ, ಯಾತನೂರ್, ಪಿಎಸ್ಐ ಶಿವಕುಮಾರ್, ಪ್ರವಾಸಿ ಮಾರ್ಗದರ್ಶಿಗಳಾದ ಈರಣ್ಣ ಪೂಜಾರಿ, ವಿರೂಪಾಕ್ಷಿ, ಡಾ. ವಿಶ್ವನಾಥ್ ಮಾಳ್ಗಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿದ್ದರಾಮಯ್ಯ ಆದೇಶ

SSLC ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿದ್ದರಾಮಯ್ಯ ಆದೇಶ

1-wqewqewq

Vijayanagara;ಅಧಿಕಾರಿಗಳ ಕಾರ್ಯವೈಖರಿಯಿಂದ ನಾನು ಅಸಂತುಷ್ಟ: ಸಿಎಂ ಕಿಡಿ

ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತ್ಯು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತ್ಯು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

3

Golden Star Ganesh: ಕ್ಷಮಿಸಿ, ಮುಂದಿನ ಸಲ ಸಿಗೋಣ..

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.