ಹೊಸಪೇಟೆ ರೈಲು ನಿಲ್ದಾಣಕ್ಕೆ ಶಿಲ್ಪ ಕಲೆ ಟಚ್‌!

ವಿಜಯನಗರ ಗತವೈಭವಕ್ಕೆ ಸಾಕ್ಷಿಯಾಗುವ ನಿಲ್ದಾಣ

Team Udayavani, Mar 21, 2022, 9:53 AM IST

default

ಹೊಸಪೇಟೆ: ವಿಜಯನಗರ ಸಾಮ್ರಾಜ್ಯದ ಕುರುಹುಗಳನ್ನು ಒಡಲಿನಲ್ಲಿಟ್ಟುಕೊಂಡ ಐತಿಹಾಸಿಕ ನಗರಿ ಹೊಸಪೇಟೆ ರಾಜ್ಯದ 31ನೇ ಜಿಲ್ಲೆಯಾಗಿ ಹೊರಹೊಮ್ಮಿದ್ದು, ಇಲ್ಲಿನ ರೈಲು ನಿಲ್ದಾಣ ಈಗ ಹಂಪಿ ಶಿಲ್ಪಕಲೆ ಮಾದರಿಯಲ್ಲಿ ರೂಪುಗೊಳ್ಳುತ್ತಿದೆ. ಹಂಪಿ ಶಿಲ್ಪಕಲೆ ಮಾದರಿಯಲ್ಲಿ ಹೊಸಪೇಟೆ ರೈಲ್ವೆ ನಿಲ್ದಾಣ ನವೀಕರಣ ಕಾರ್ಯ ನಡೆಯುತ್ತಿದ್ದು, ವಿಜಯನಗರ ಗತ ವೈಭವವನ್ನು ನೆನಪಿಸುವ ಮೂಲಕ ಮತ್ತೂಂದು ಮೈಲಿಗಲ್ಲಾಗಲಿದೆ. ಹಂಪಿಗೆ ಹೊಂದಿಕೊಂಡಿರುವ ಹೊಸಪೇಟೆ ರೈಲ್ವೆ ನಿಲ್ದಾಣವನ್ನು ಹಂಪಿ ಪ್ರಸಿದ್ಧ ಸ್ಮಾರಕಗಳ ಪರಿಕಲ್ಪನೆಯಲ್ಲಿ ನವೀಕರಣ ಮಾಡುವ ಸಂಕಲ್ಪದೊಂದಿಗೆ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಹಾಗೂ ರೈಲ್ವೆ ಇಲಾಖೆ 10 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಿತ್ತು. ರೈಲ್ವೆ ನಿಲ್ದಾಣ ನವೀಕರಣ ಕಾಮಗಾರಿ ಆರಂಭಗೊಂಡಿದ್ದು ಕೊರೊನಾ ಹಿನ್ನೆಲೆಯಲ್ಲಿ ಹಿನ್ನಡೆ ಉಂಟಾಗಿತ್ತು.
ಏಪ್ರಿಲ್‌ನಲ್ಲಿ ಲೋಕಾರ್ಪಣೆ

ನಿಲ್ದಾಣದ ಬಹುತೇಕ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ಅಂತಿಮ ಸ್ಪರ್ಶ ನೀಡುವ ಕೆಲಸ ಭರದಿಂದ ಸಾಗಿದೆ. 2021ರ ಮಾರ್ಚ್‌ಲ್ಲಿ ರೈಲು ನಿಲ್ದಾಣ ನವೀಕರಣ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಕೊರೊನಾ ಕಾರಣಕ್ಕೆ ಕಾಮಗಾರಿಗೆ ಹಿನ್ನಡೆಯಾಗಿತ್ತು. ಈಗ ಮತ್ತೆ ಭರದಿಂದ ಕೆಲಸ ನಡೆಯುತ್ತಿದ್ದು ಇದೇ ಏಪ್ರಿಲ್‌ ಅಂತ್ಯಕ್ಕೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ಖಚಿತಪಡಿಸಿವೆ.
ಹೈಟೆಕ್‌ ಸ್ಪರ್ಶ

ಎರಡು ಅಂತಸ್ತುಗಳ ಕಟ್ಟಡದಲ್ಲಿ ನಿರ್ಮಾಣಗೊಂಡಿರುವ ರೈಲು ನಿಲ್ದಾಣಕ್ಕೆ ಹೈಟೆಕ್‌ ಸ್ಪರ್ಶ ನೀಡಲು ರೈಲ್ವೆ ಇಲಾಖೆ ಮುಂದಾಗಿದೆ. ಹಂಪಿ ವಿಜಯವಿಠಲ ದೇವಾಲಯದ ಆವರಣದ ಪ್ರಸಿದ್ಧ ಕಲ್ಲಿನರಥ ವಿನ್ಯಾಸದಲ್ಲಿ ಮೂಡಿಬಂದಿರುವ ಪ್ರವೇಶ ದ್ವಾರ ನೋಡುಗರ ಗಮನ ಸಳೆಯಲಿದೆ. ಇದಕ್ಕಾಗಿ ಆವರಣದಲ್ಲಿ ವಿಶಾಲ ಪ್ರಾಂಗಣ, ವಿಶಾಲವಾದ ಪಾದಚಾರಿ ರಸ್ತೆ, ನಿಲುಗಡೆಯ ಸೂಚಕಗಳ ಒಳಗೊಂಡ ಮಾರ್ಗದರ್ಶಿ ಫಲಕಗಳು, ದೈನಂದಿನ ಟಿಕೆಟ್‌ ಕೌಂಟರ್‌, ಕಾಯ್ದಿರಿಸುವಿಕೆ, ಆಹಾರ ಸಂಕಿರ್ಣ, ವಿಶ್ರಾಂತಿ ಕೊಠಡಿ, ಪ್ರವಾಸಿ ಮಾರ್ಗದರ್ಶನ ಕೇಂದ್ರ, ಹೈಟೆಕ್‌ ಶೌಚಾಲಯ, ಶುದ್ಧ ಕುಡಿಯುವ ನೀರು, ಸೋಲಾರ್‌ ವಿದ್ಯುತ್‌ ಅಳವಡಿಕೆ, ಪ್ಲಾಟ್‌ಫಾರ್ಮ್ಗಳ ಎರಡು ಬದಿಯಲ್ಲಿ ಹಂಪಿ ಸ್ಮಾರಕಗಳ ಉಬ್ಬು ಚಿತ್ರಗಳು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿವೆ.
ಸಹಸ್ರಾರು ಪ್ರವಾಸಿಗರು

ವಿಜಯನಗರ ಸಾಮ್ರಾಜ್ಯದ ಹೆಬ್ಟಾಗಿಲು ಎಂದು ಕರೆಯುವ ಹೊಸಪೇಟೆಯಿಂದ ಸುಮಾರು 12 ಕಿ.ಮೀ. ದೂರದಲ್ಲಿರುವ ಹಂಪಿಗೆ ನಿತ್ಯ ಆಗಮಿಸುವ ಸಹಸ್ರಾರು ಪ್ರವಾಸಿಗರು ಹೆಚ್ಚಾಗಿ ರೈಲಿನ ಮೂಲಕವೇ ಬರಬೇಕಾದ ಹಿನ್ನೆಲೆಯಲ್ಲಿ ನಿಲ್ದಾಣ ಹಂಪಿ ವಾಸ್ತು ಶಿಲ್ಪದ ಪರಿಕಲ್ಪನೆಯಲ್ಲಿ ವಿನ್ಯಾಸಗೊಳಿಸುವ ಮೂಲಕ ನವೀಕರಣ ಗೊಳಿಸಲಾಗಿದೆ. ನವೀಕೃತ ರೈಲ್ವೆ ನಿಲ್ದಾಣಕ್ಕೆ ಶ್ರೀಕೃಷ್ಣ ದೇವರಾಯರ ಹೆಸರು ಇಡಬೇಕು ಎಂದು ವಿಕಾಸ ಭಾರತಿ ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ.

ಹೊಸಪೇಟೆ ರೈಲ್ವೆ ನಿಲ್ದಾಣವನ್ನು ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಹಾಗೂ ರೈಲ್ವೆ ಇಲಾಖೆ 10 ಕೋಟಿ ರೂ. ವೆಚ್ಚದಲ್ಲಿ ಹಂಪಿ ಪ್ರಸಿದ್ಧ ಸ್ಮಾರಕಗಳ ವಿನ್ಯಾಸದಲ್ಲಿ ನವೀಕರಣಗೊಳಿಸಿದೆ. ಏಪ್ರಿಲ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ

-ಪ್ರಾಣೇಶ್‌ ಕೆ.ಎನ್‌. ಸಾರ್ವಜನಿಕ ಸಂಪರ್ಕಾಧಿಕಾರಿ, ದಕ್ಷಿಣಮಧ್ಯ ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿ.

ನವೀಕೃತ ರೈಲ್ವೆ ನಿಲ್ದಾಣಕ್ಕೆ ವಿಜಯನಗರ ಪ್ರಖಾತ ಅರಸ ಶ್ರೀಕೃಷ್ಣ ದೇವರಾಯ ನಾಮಕರಣ ಮಾಡಬೇಕು ಎಂದು ದಕ್ಷಿಣ ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯದ ಮಹಾಪ್ರಬಂಧಕರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಮನವಿ ಸಲ್ಲಿಸಲಾಗಿದೆ – ಅಶೋಕ್‌ ಜೀರೆ, ಅಧ್ಯಕ್ಷರು, ಹುಡಾ ಹಾಗೂ ವಿಕಾಸ ಭಾರತಿ ಸಮಾನ ಮನಸ್ಕರ ವೇದಿಕೆ, ವಿಜಯನಗರ.

ಪಿ.ಸತ್ಯನಾರಾಯಣ

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-Huvina-Hadagali

Huvina Hadagali: ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

3–tungabadra-dam

TungabhadraDam ಚೈನ್ ಲಿಂಕ್ ಮುರಿತ;ತಾತ್ಕಾಲಿಕ ತಡೆಗೇಟ್ ನಿರ್ಮಾಣಕ್ಕೆ ಜಮೀರ್ ಅಹ್ಮದ್ ಪೂಜೆ

DCM-DK-Shivakumar

Upper Krishna: ನೀರಾವರಿ ಇಲಾಖೆ ಭೂಸ್ವಾಧೀನ ಹೆಚ್ಚಳದ ಬಗ್ಗೆ ಸಮಗ್ರ ತನಿಖೆ : ಡಿಸಿಎಂ

3-hosapete

Hosapete: ತುಂಗಭದ್ರಾ ಜಲಾಶಯ ಹೆಚ್ಚಿದ ಒಳ ಹರಿವು: ಯಾವುದೇ ಕ್ಷಣ ನದಿಗೆ ನೀರು

SSLC ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿದ್ದರಾಮಯ್ಯ ಆದೇಶ

SSLC ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿದ್ದರಾಮಯ್ಯ ಆದೇಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.