ವಾಡಿ-ಗದಗ ರೈಲ್ವೇ ಯೋಜನೆಗೆ 41 ಎಕರೆ ಭೂಸ್ವಾಧೀನ

ಎಕರೆಗೆ‌ 17 ಲಕ್ಷ ರೂ. ಪರಿಹಾರ ನಿಗದಿ

Team Udayavani, Nov 29, 2019, 6:38 PM IST

29-November-27

ಯಾದಗಿರಿ: ವಾಡಿ-ಗದಗ ರೈಲ್ವೆ ಯೋಜನೆಗಾಗಿ ಜಿಲ್ಲೆಯ ಸುರಪುರ ತಾಲೂಕಿನ ಖಾನಾಪುರ ಎಸ್‌.ಎಚ್‌. ಗ್ರಾಮದಲ್ಲಿ ರೈತರಿಂದ ಒಟ್ಟು 41 ಎಕರೆ 22 ಗುಂಟೆ ಜಮೀನು ಸ್ವಾಧೀನ ಮಾಡಿಕೊಳ್ಳಲಾಗಿದೆ. ಎಕರೆಗೆ 17 ಲಕ್ಷ ರೂ. ಪರಿಹಾರ ವಿತರಿಸಲಾಗುವುದು ಎಂದು ಭೂ-ಬೆಲೆ ನಿರ್ಧರಣಾ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ವಾಡಿ-ಗದಗ ರೈಲು ಮಾರ್ಗ ನಿರ್ಮಾಣ ಕಾಮಗಾರಿಗೆ ಸ್ವಾಧೀನಪಡಿಸಿಕೊಂಡ ಜಮೀನು ಮಾಲೀಕರೊಂದಿಗೆ ಗುರುವಾರ ನಡೆದ ಭೂ-ಬೆಲೆ ನಿರ್ಧರಣಾ ಸಲಹಾ ಸಮಿತಿ ಎರಡನೇ ಸುತ್ತಿನ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಬಂದಷ್ಟು ಜಿಲ್ಲೆ ಅಭಿವೃದ್ಧಿ ಸಾಧಿಸುತ್ತದೆ. ಜಿಲ್ಲೆಯ ಜನರ ಆರ್ಥಿಕ ಪ್ರಗತಿಗೆ ರೈಲ್ವೆ ಯೋಜನೆ ವರದಾನವಾಗಿದೆ. ಸರಕಾರದ ಭೂಸ್ವಾಧೀನ ಮಾನದಂಡಗಳ ಪ್ರಕಾರ ಈ ರೈಲ್ವೆ ಯೋಜನೆಗಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ನಿಗದಿತ ಬೆಲೆಯಂತೆ ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ಮತ್ತು ಶೀಘ್ರವಾಗಿ ಹಣ ವರ್ಗಾವಣೆಯಾಗುತ್ತದೆ ಎಂದು ಹೇಳಿದರು.

ಭೂ-ಬೆಲೆ ನಿರ್ಧರಣಾ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿಶೇಷ ಭೂಸ್ವಾಧೀನಾಧಿಕಾರಿ ಡಾ| ಬಿ. ಶರಣಪ್ಪ ಮಾತನಾಡಿ, ರೈಲ್ವೆ ಯೋಜನೆಗಾಗಿ ಸ್ವಾಧೀನ ಮಾಡಿಕೊಂಡ ಜಮೀನು ಸುತ್ತಲಿನಲ್ಲಿ 50 ಅಡಿ ವರೆಗೆ ಶಾಲೆ, ವಾಣಿಜ್ಯ, ಮನೆ ಅಥವಾ ಇತರೆ ಯಾವುದೇ ರೀತಿಯ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ. ಕೃಷಿ ಚಟುವಟಿಕೆ ನಡೆಸಬಹುದು ಎಂದು ಮಾಹಿತಿ ನೀಡಿದರು.

ಖಾನಾಪುರ ಎಸ್‌.ಎಚ್‌. ಗ್ರಾಮದ ರೈತರು ಮಾತನಾಡಿ, ರೈಲ್ವೆ ಯೋಜನೆಗಾಗಿ ಭೂಸ್ವಾಧೀನ ಮಾಡಿಕೊಂಡ ಜಮೀನಿನಲ್ಲಿ ಗುಂಟೆಗಳಷ್ಟು ಉಳಿಯುತ್ತಿದೆ. ಇದರಲ್ಲಿ ಕೃಷಿ ಕಾರ್ಯಕ್ಕೆ ಸಾಧ್ಯವಾಗುವುದಿಲ್ಲ. ಅಲ್ಲದೇ, ಕಟ್ಟಡ ನಿರ್ಮಾಣಕ್ಕೂ ಅವಕಾಶ ಇರುವುದಿಲ್ಲ. ಉಳಿದ ಅಲ್ಪ ಜಮೀನನ್ನೂ ಕೂಡ ಖರೀದಿ ಮಾಡಬೇಕು ಎಂದು ಕೋರಿದರು. ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ, ಕೆಐಎಡಿಬಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.