ಬಸವಸಾಗರ ಜಲಾಶಯದ 6 ಕ್ರಸ್ಟ್ ಗೇಟ್ ತೆರದು ಕೃಷ್ಣಾ ನದಿಗೆ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಖಾಸಗಿ ಜಲವಿದ್ಯುತ್ ಸ್ಥಾವರದಿಂದಲು ನದಿಗೆ ನೀರು

Team Udayavani, Jul 17, 2024, 6:16 PM IST

11-narayanapura

ನಾರಾಯಣಪುರ: ಬಸವಸಾಗರ ಜಲಾಶಯದ 6 ಕ್ರಸ್ಟ್ ಗೇಟ್ ಗಳನ್ನು ತೆರದು ಕೃಷ್ಣಾ ನದಿಗೆ 20 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಹರಿಬಿಡಲಾಗುತ್ತಿದೆ. ಜೊತೆಗೆ ಜಲಾಶಯಕ್ಕೆ ಹೊಂದಿಕೊಂಡಿರುವ ಖಾಸಗಿ ಜಲ ವಿದ್ಯುತ್ ಸ್ಥಾವರದಿಂದಲು ನದಿಗೆ ನೀರು ಹರಿಸಲಾಗುತ್ತಿದೆ.

ಕ್ರಸ್ಟ್ ಗೇಟ್ ಗೆ ಪೂಜೆ: ಬುಧವಾರ ಬೆಳಿಗ್ಗೆ ಸಂಪ್ರದಾಯದಂತೆ ಕ್ರಸ್ಟ್ ಗೇಟ್ ಗೆ ಶಕ್ತಿ ಮಾತೆಗೆ, ಭರ್ತಿಯಾದ ಜಲಾಶಯಕ್ಕೆ ವಲಯ ಕಚೇರಿಯ ಮುಖ್ಯ ಇಂಜಿನಿಯರ್ ಆರ್. ಮಂಜುನಾಥ ಪೂಜೆ ನೆರವೇರಿಸಿದರು. ಬಳಿಕ ಸ್ವಿಚ್‌ ಬಟನ್ ಆನ್ ಮಾಡಿ ಗೇಟ್ ತೆರೆಯುವ ಮೂಲಕ ಕೃಷ್ಣಾ ನದಿಗೆ ನೀರು ಹರಿಸಲು ಚಾಲನೆ ನೀಡಿದರು.

ಬಳಿಕ ಮಾತಾನಾಡಿದ ಸಿಇ ಆರ್.ಮಂಜುನಾಥ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದು ಮುಂದುವರೆದಿದ್ದು ಸದ್ಯ ಬಸವಸಾಗರಕ್ಕೆ ಅಂದಾಜು 65 ಸಾವಿರ ಕ್ಯೂಸೆಕ್ ನಷ್ಟು ಒಳಹರಿವು ಇದ್ದು, ಸಂಜೆ ವೇಳೆಗೆ ಆಲಮಟ್ಟಿ ಜಲಾಶಯದಿಂದ ಬರುವ ಒಳಹರಿವಿನ ಪ್ರಮಾಣ ಗಮನಿಸಿ ನದಿಗೆ ನೀರು ಹರಿಸುವ ಪ್ರಮಾಣವನ್ನು ಹಂತ ಹಂತವಾಗಿ ಕ್ರಸ್ಟ್ ಗೇಟ್ ಗಳ ಸಂಖ್ಯೆ ಹೆಚ್ಚಿಸುವ ಮೂಲಕ ಅಂದಾಜು 50 ಸಾವಿರದಿಂದ 60 ಸಾವಿರ ಕ್ಯೂಸೆಕ್ ವರೆಗೆ  ಕೃಷ್ಣಾ ನದಿಗೆ ನೀರು ಹರಿಸುವ ಸಾಧ್ಯತೆಯಿದ್ದು ಮುಂಜಾಗ್ರತಾ ಕ್ರಮವಾಗಿ ನದಿ ತೀರದ ಗ್ರಾಮಗಳ ಜನ-ಜಾನುವಾರಗಳು ನದಿಗೆ ಇಳಿಯದಂತೆ ಯಾವುದೇ ಚಟುವಟಿಕೆ ನಡೆಸದಂತೆ ಜಾಗೃತಿ ವಹಿಸಬೇಕು ಎಂದು ಹೇಳಿದರು.

ಎಡದಂಡೆ ಮುಖ್ಯ ಕಾಲುವೆಗೆ ನೀರು ಬಿಡುಗಡೆ: ಮಂಗಳವಾರ ಜರುಗಿದ ಐಸಿಸಿ ಸಭೆಯ ನಿರ್ಣಯದಂತೆ ಜಲಾಶಯದ ಎಡದಂಡೆ ಮುಖ್ಯ ಕಾಲುವೆಯ ಗೇಟ್ ಗೆ ಪೂಜೆ ನೆರವೇರಿಸಿ 1200 ಕ್ಯೂಸೆಕ್ ನಷ್ಟು ನೀರನ್ನು ಕಾಲುವೆಗೆ ಹರಿಸಲಾಗುತ್ತಿದೆ. ಕಾಲುವೆ ಜಾಲಗಳ ಅಧಿಕಾರಿಗಳ ಬೇಡಿಕೆಯಂತೆ ಸಂಜೆ ವೇಳೆಗೆ ಮುಖ್ಯ ಕಾಲುವೆಗೆ  ನೀರು ಹರಿಸುವ ಪ್ರಮಾಣವನ್ನು ಹಂತ ಹಂತವಾಗಿ ಹೆಚ್ಚಿಸಲಾಗುವುದು ಎಂದು ಪ್ರಬಾರ ಎಇಇ ವಿಜಯ ಅರಳಿ ಮಾಹಿತಿ‌ ನೀಡಿದ್ದಾರೆ.

ಧುಮ್ಮಿಕ್ಕುವ ಜಲಧಾರೆ: ಬರಿದಾಗಿದ್ದ ಕೃಷ್ಣಾ ನದಿಗೆ ನೀರು ಹರಿಸಲಾಗಿದ್ದು, ಜಲಾಶಯದ ಕ್ರಸ್ಟ್ ಗೇಟ್ ಗಳ ಮೂಲಕ ರಭಸದಿಂದ ಧುಮ್ಮಿಕ್ಕುವ ಜಲರಾಶಿಯ ವೈಭವದ ನೋಟವು ಅತ್ಯಾಕರ್ಷಕವಾಗಿದೆ. ಜಲಾಶಯದ ಮುಂಭಾಗ ನೀರಿಲ್ಲದೆ ಬಣಗುಡುತಿತ್ತು. ಸದ್ಯ ನದಿಯಲ್ಲಿ ನೀರಿನ ಹರಿವು ಪ್ರವಾಹ ರೂಪದಲ್ಲಿ ಎಲ್ಲೆಡೆ ಹರಡಿಕೊಂಡಿದೆ. ನೀರು ಹರಿಯುತ್ತಿರುವ ದೃಶ್ಯ ಕಣ್ಮನ ಸೆಳೆಯುತ್ತಿರುವುದು ಒಂದೆಡೆಯಾದರೆ, ನದಿ ಮಾರ್ಗದಲ್ಲಿ ಕಣ್ಣು ಹಾಯಿಸಿದಷ್ಟು ನೀರು ಹರಿಯುತ್ತಿರುವುದು ಜಲವೈಭವವನ್ನು ಸೃಷ್ಠಿಸಿದೆ.

ಅರ್ಚಕ ರಾಘವೇಂದ್ರ ಆಚಾರ್ಯ ಪೂಜಾ ಕಾರ್ಯ ನೆರವೇರಿಸಿದರು.

ಈ ವೇಳೆ ಕೆಬಿಜೆಎನ್ ಎಲ್ ಅಧಿಕಾರಿಗಳಾದ ಆಧಂಶಪಿ, ಅಮರೇಶ ರಾಠೋಡ, ಆದಪ್ಪ ಕುಂಬಾರ ಹಾಗೂ ಎಇಇಗಳಾದ ಮಹಾಲಿಂಗಪ್ಪ ಭಜಂತ್ರಿ, ಟಿಎ ನಾಗೇಶ, ವಿಜಯ ಅರಳಿ, ಬಾಲಸುಭ್ರಮಣ್ಯ, ವಿರೇಶ, ಅಮರನಾಥ, ಮಲ್ಲಿಕಾರ್ಜುನ, ಶೌಕತ್, ನಾಗಪ್ಪ, ಅತಾವುಲ್ಲಾಖಾನ್, ರಮೇಶ, ಸಂಗಮ್ಮ, ಸಿದ್ದು, ಮುರಳಿಧರ ಸೇರಿದಂತೆ ಅಧಿಕಾರಿಗಳು, ಸೆಕ್ಯುರಿಟಿ ಸಿಬ್ಬಂದಿ ವರ್ಗದವರು ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

Yadagiri: Lalitha Anapura assumed office as the new Chairperson of Municipal Council

Yadagiri: ನಗರಸಭೆ ನೂತನ ಅಧ್ಯಕ್ಷೆಯಾಗಿ ಅನಪೂರ ಅಧಿಕಾರ ಸ್ವೀಕಾರ

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

7-yadagiri

Yadgiri ನಗರಸಭೆ ಅಧ್ಯಕ್ಷರಾಗಿ ಕು.ಲಲಿತಾ ಆಯ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.