30ರಂದು ಆಶ್ರಯ ನಿವೇಶನ ಹಂಚಿಕೆ: ದರ್ಶನಾಪುರ


Team Udayavani, Aug 27, 2022, 3:35 PM IST

10-site

ಶಹಾಪುರ: ಅರ್ಹ ನಿರಾಶ್ರಿತ ಕುಟುಂಬಕ್ಕೆ ನಿವೇಶನಗಳನ್ನು ಆ. 30ರಂದು ನಗರಸಭೆ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಲಾಟರಿ ಮೂಲಕ ಪಾರದರ್ಶಕವಾಗಿ ಹಂಚಿಕೆ ಮಾಡಲಾಗುವುದು ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳಿಸಗರ ಭಾಗದ ಸರ್ವೇ ನಂಬರ್‌ 125ರಲ್ಲಿ ಒಟ್ಟು 481 ನಿವೇಶನಗಳಿದ್ದು, ಅರ್ಹತೆ ಹೊಂದಿದವರಿಗೆ ಮಾತ್ರ ಹಂಚಿಕೆ ಮಾಡಲಾಗುತ್ತಿದೆ. ಲಾಟರಿ ವೇಳೆ ಅನರ್ಹತೆ ಇದ್ದವರಿಗೆ ನಿವೇಶನ ಹಂಚಿಕೆಯಾದರೆ ತಕ್ಷಣಕ್ಕೆ ಆ ಕುರಿತು ಸಮರ್ಪಕ ಮಾಹಿತಿಯೊಂದಿಗೆ ದೂರು ನೀಡಿದರೆ ಅಧಿಕಾರಿಗಳ ತಂಡ ಪರಿಶೀಲಿಸಿ ಅರ್ಹತೆ ಇಲ್ಲದಿದ್ದರೆ ಹಂಚಿಕೆಯಾದ ನಿವೇಶನ ರದ್ದು ಪಡಿಸುವ ಅಧಿಕಾರ ಹೊಂದಿದೆ. ಆ ನಿಟ್ಟಿನಲ್ಲಿ ಈಗಾಗಲೇ ನಿವೇಶನಕ್ಕೆ ಸುಮಾರು 3 ಸಾವಿರ ಅರ್ಜಿಗಳು ಬಂದಿದ್ದು, ಅದರಲ್ಲಿ ಪರಿಶೀಲಿಸಲಾಗಿ 2 ಸಾವಿರ ಅರ್ಜಿಗಳು ತಿರಸ್ಕೃತಗೊಳಿಸಲಾಗಿದೆ. ಸುಮಾರು ಒಂದು ಸಾವಿರ ಅರ್ಜಿಗಳು ನಿವೇಶನ ಪಡೆಯಲು ಅರ್ಹತೆ ಹೊಂದಿವೆ. ಅದರಲ್ಲಿ ಕನ್ಯಾಕೋಳೂರ, ಫಿಲ್ಟರ್‌ ಬೆಡ್‌ ಮತ್ತು ಹಳಿಸಗರ ಭಾಗದ ಮಲ್ಲಯ್ಯನ ಮಡ್ಡಿ ಸೇರಿದಂತೆ ಒಟ್ಟು 650 ನಿವೇಶನಗಳಿದ್ದು, ಹಂಚಿಕೆ ಮಾಡಲಾಗುವುದು. ಇನ್ನುಳಿದವರಿಗೆ ಮುಂದಿನ ಆಶ್ರಯ ನಿವೇಶನಗಳಲ್ಲಿ ಆಶ್ರಯ ಕಲ್ಪಿಸಲಾಗುವುದು. ಅಲ್ಲದೇ ಇನ್ನೂ 774 ಆಶ್ರಯ ನಿವೇಶನಗಳ ಮಂಜೂರಾತಿ ತರಲಾಗಿದ್ದು, ಮುಂದಿನ ದಿನಗಳಲ್ಲಿ ಉಳಿದವರಿಗೂ ನಿವೇಶನ ನೀಡಲಾಗುವುದು ಎಂದರು.

ಅಲ್ಲದೇ ಮಲ್ಲಯ್ಯನ ಮಡ್ಡಿ ಭಾಗದಲ್ಲಿ ನಿರ್ಮಿಸಲಾದ ಆಶ್ರಯ ನಿವೇಶನಗಳಿಗೆ ಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ವಿದ್ಯುತ್‌ ಸರಬರಾಜು ವ್ಯವಸ್ಥೆಗೆ ಈಗಾಗಲೇ ಟೆಂಡರ್‌ ಕರೆಯಲಾಗಿದೆ. ಇಷ್ಟರಲ್ಲೇ ಕಾಮಗಾರಿ ಆರಂಭವಾಗಲಿದೆ. ಮೂಲ ಸೌಲಭ್ಯ ಕಲ್ಪಿಸುವುದರೊಂದಿಗೆ ಮನೆ ಕಟ್ಟಲೂ ಮಂಜೂರಾತಿ ಪಡೆಯಲಾಗಿದ್ದು, ನಿವೇಶನ ಹಂಚಿಕೆ ನಂತರ ಆಯಾ ನಿವೇಶನಗಳಲ್ಲಿ ಮನೆಯೂ ನಿರ್ಮಿಸುವ ಯೋಜನೆ ಸಹ ಸಿದ್ಧವಾಗಿದ್ದು, ಪರಿಪೂರ್ಣ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದರು. ಆಶ್ರಯ ಕಮಿಟಿ ಅಧ್ಯಕ್ಷ ವಸಂತಕುಮಾರ ಸುರಪುರಕರ್‌ ಇದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.